ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದಾರೆ. ಮಧ್ಯಂತರ ಬಜೆಟ್ ಆಗಿರುವುದರಿಂದ ಯಾವುದೇ ಹೊಸ ಯೋಜನೆಗಳು ಇರುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ, ಹಳೆಯ ಹಾಗೂ ಹೊಸ ತೆರಿಗೆ ಪದ್ಧತಿಯಡಿ ತೆರಿಗೆದಾರರಿಗೆ ಯಾವುದೇ ವಿನಾಯಿತಿ ಪ್ರಕಟಿಸುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ. ಬಜೆಟ್ ಟ್ಯಾಬ್ಲೆಟ್ ಹಿಡಿದು ನಿರ್ಮಲಾ ಸೀತಾರಾಮನ್ ಸದನಕ್ಕೆ ಆಗಮಿಸಿದ್ದಾರೆ.