ನವದೆಹಲಿ: 2014 ರಿಂದ ತಲಾ ಆದಾಯ ದ್ವಿಗುಣಗೊಂಡಿದೆ ಎಂದು ಹೇಳಿಕೊಂಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆ ಪ್ರಶ್ನಿಸಿರುವ ಆಮ್ ಆದ್ಮಿ ಪಕ್ಷ, ಇದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೃತ ಕಾಲ ಆಗಿದೆ, ದೇಶದ ಸಾಮಾನ್ಯ ಜನರಿಗೆ ಅಲ್ಲ ಎಂದು ಹೇಳಿದೆ.
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯೂ ಹೆಚ್ಚಾಗಲಿಲ್ಲ ಅಥವಾ ಯುವಕರಿಗೆ ಉದ್ಯೋಗ ಸಿಗಲಿಲ್ಲ. ಆದರೆ, ಇದು ಮೋದಿ ಅವರಿಗೆ ಅಮೃತ ಕಾಲ ಎಂದು ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಸರಣಿ ಟ್ವೀಟ್ ಮಾಡಿದ್ದಾರೆ.
ದೇಶದ ರೈತರು, ಸೈನಿಕರು ಮತ್ತು ಯುವಕರಿಗೆ ಯಾವುದೇ ಅವಕಾಶಗಳಿಲ್ಲ ಎಂದು ಟೀಕಿಸಿದರು.