ನೆರೆ ಪರಿಹಾರಕ್ಕೆ ಆದ್ಯತೆ: ಪ್ರಕೃತಿಯ ಮುನಿಸು, ನೈಸರ್ಗಿಕ ವಿಕೋಪ ಪರಿಹಾರಕ್ಕೆ ಆದ್ಯತೆ ನೀಡಿದ್ದೇವೆ. ಒಂದೆಡೆ ನೆರೆ, ಮತ್ತೊಂದೆಡೆ ಬರವನ್ನು ರಾಜ್ಯ ಏಕಕಾಲಕ್ಕೆ ಎದುರಿಸಿತು. 7 ಲಕ್ಷ ಜನರ ಬದುಕಿಗೆ ತೊಂದರೆಯಾಯಿತು. 4.69 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಹಾನಿಗೀಡಾಯಿತು. ರಸ್ತೆ, ಸೇತುವೆ, ಶಾಲೆ, ಅಂಗನವಾಡಿಗಳಿಗೆ ಹಾನಿಯಾಯಿತು. ₹ 35,160 ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರ ₹ 1869 ಕೋಟಿ ನೀಡಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.