ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಬಜೆಟ್ 2020: ಯಾವ ಜಿಲ್ಲೆಗೆ ಏನು ಯೋಜನೆ ಘೋಷಿಸಿದ್ರು ಯಡಿಯೂರಪ್ಪ?

Last Updated 5 ಮಾರ್ಚ್ 2020, 11:25 IST
ಅಕ್ಷರ ಗಾತ್ರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿದ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನೇನು ಯೋಜನೆ, ಅನುದಾನ ಘೋಷಿಸಿದ್ದಾರೆ ಎಂಬ ಮಾಹಿತಿ ಇಲ್ಲಿದೆ

ರಾಮನಗರ

* ರೇಷ್ಮೆ ಹುಳು ಸಂಸ್ಕರಣಾ ಘಟಕ ಸ್ಥಾಪನೆ

* ಹಾರೋಹಳ್ಳಿಯಲ್ಲಿ ಎಲೆಕ್ಟ್ರಿಕಲ್‌ ವೆಹಿಕಲ್ಸ್‌ ಮತ್ತು ಎನರ್ಜಿ ಸ್ಟೋರೇಜ್‌ ಮ್ಯಾನುಫ್ಯಾಕ್ಚರಿಂಗ್‌ ಕ್ಲಸ್ಟರ್‌– ₹ 10 ಕೋಟಿ

* ರಣಹದ್ದು ಧಾಮದಲ್ಲಿ ಸಂತಾನೋತ್ಪತ್ತಿ ಕೇಂದ್ರ– ₹ 2 ಕೋಟಿ

ಬೆಂಗಳೂರು ಗ್ರಾಮಾಂತರ

* ಹರಳೂರು–ಮುದ್ದೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಡಿಫೆನ್ಸ್‌ ಮತ್ತು ಏರೋಸ್ಪೇಸ್ ಎಕ್ಯುಪ್‌ಮೆಂಟ್‌ ಮ್ಯಾನುಫ್ಯಾಕ್ಚರಿಂಗ್‌ ಕ್ಲಸ್ಟರ್‌

ದಕ್ಷಿಣಕನ್ನಡ

* ಮೂಲ್ಕಿಯಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ– ₹ 2 ಕೋಟಿ

* ಕುಳಾಯಿಯಲ್ಲಿ ಮೀನು ರಫ್ತು ಸ್ಥಾವರ ನಿರ್ಮಾಣ– ₹ 12.50 ಕೋಟಿ

ಉಡುಪಿ

* ಹೆಜಮಾಡಿಯಲ್ಲಿ ಮೀನುಗಾರಿಕಾ ಬಂದರು– ₹ 181 ಕೋಟಿ

* ಹಂಗಾರಕಟ್ಟೆ ಬಂದರು ಅಭಿವೃದ್ಧಿ– ₹ 130 ಕೋಟಿ

* ಕಾರ್ಕಳದಲ್ಲಿ ಜವಳಿ ಪಾರ್ಕ್‌

ಉತ್ತರ ಕನ್ನಡ ಜಿಲ್ಲೆ

* ತೆಂಗಿನಗುಂಡಿ ಬಂದರಿನ ಅಳಿವೆ ಹೂಳೆತ್ತಲು– ₹ 85 ಕೋಟಿ

* ಕೊಡೇರಿ ಬಂದರು ಅಭಿವೃದ್ಧಿ– ₹ 2 ಕೋಟಿ

* ಶಿರಸಿ ಸರ್ಕಾರಿ ಆಸ್ಪತ್ರೆ 200 ಹಾಸಿಗೆಗೆ ಹೆಚ್ಚಿಸಿ ಮೇಲ್ದರ್ಜೆಗೆ

* ಸಿದ್ಧಾಪುರದಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆ

* ಖಾಸಗಿ ಸಹಭಾಗಿತ್ವದಲ್ಲಿ ₹ 2,500 ಕೋಟಿ ವೆಚ್ಚದಲ್ಲಿ ಪಾವಿನಕುರ್ವೆ/ಬೇಲೆಕೇರಿ ಬಂದರು ಅಭಿವೃದ್ಧಿಗೆ ಬಿಡ್‌ ಆಹ್ವಾನ

* ಕಡಲಧಾಮ ಸ್ಥಾಪನೆ– ₹ 1 ಕೋಟಿ

* ಕಾರವಾರ ಬಂದರಿಗೆ ಶಾಶ್ವತ ಅಗ್ನಿಶಾಮಕ ಉಪಕರಣ– ₹ 19 ಕೋಟಿ

ಹಾವೇರಿ

* 20 ಹಾಸಿಗೆಗೆಳ ಆಯುಷ್‌ ಸಂಯುಕ್ತ ಆಸ್ಪತ್ರೆ ₹ 20 ಕೋಟಿಯಲ್ಲಿ ಆರಂಭ. ಪ್ರಸಕ್ತ ವರ್ಷ ₹ 5 ಕೋಟಿ

* ಶಿಗ್ಗಾವಿಯಲ್ಲಿ ಜವಳಿ ಪಾರ್ಕ್‌

* ಸಂತ ಶಿಶುನಾಳ ಶರೀಫರ ಗ್ರಾಮ ಅಭಿವೃದ್ಧಿ– ₹ 5 ಕೋಟಿ

* ಹಿರೇಕೆರೂರಿನಲ್ಲಿರುವ ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗೆ ಪ್ರೋತ್ಸಾಹ

ಕಲಬುರ್ಗಿ

ಬ್ರೈಲ್‌ ಕಂ ಟಾಕಿಂಗ್‌ ಲೈಬ್ರರಿ

ಮೈಸೂರು

* ಸರ್ಕಾರಿ ಬ್ರೈಲ್‌ ಮುದ್ರಣಾಲಯ–₹ 80 ಲಕ್ಷ

ವಿಜಯಪುರ

* ‘ಜಲಧಾರೆ’ ಯೋಜನೆಯ ಮೊದಲ ಹಂತ

ಮಂಡ್ಯ

‘ಜಲಧಾರೆ’ ಯೋಜನೆಯ ಮೊದಲ ಹಂತ

ಬೆಂಗಳೂರು

* ಸೆಂಟರ್ ಫಾರ್‌ ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್‌ ಸಂಸ್ಥೆ ಸ್ಥಾಪನೆ– ₹ 5 ಕೋಟಿ

* ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ರಿಸರ್ಚ್‌ ಟ್ರಾನ್ಸ್‌ಲೇಷನ್‌ ಪಾರ್ಕ್‌ – 3 ವರ್ಷಗಳಲ್ಲಿ ₹ 60 ಕೋಟಿ ಅನುದಾನ

* ಕೃಷಿ ನಾವೀನ್ಯತಾ ಕೇಂದ್ರ – ₹ 20 ಕೋಟಿ

* ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಸೇವಾ ಕೇಂದ್ರಗಳ ಸಾಮರ್ಥ್ಯ ಉನ್ನತೀಕರಣ– ₹ 20 ಕೋಟಿ

* ವಿವೇಕಾನಂದ ಯುವ ಕೇಂದ್ರ ಸ್ಥಾಪನೆ– ₹ 2 ಕೋಟಿ

* ನಾಲ್ಕೂ ದಿಕ್ಕಿನಲ್ಲಿ ಕಲಾಕ್ಷೇತ್ರ– ₹ 60 ಕೋಟಿ

* ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂಪೇಗೌಡರ ಕಂಚಿನ ಪ್ರತಿಮೆ– ₹ 60 ಕೋಟಿ

* ಚಿತ್ರಕಲಾ ಪರಿಷತ್‌ನಲ್ಲಿ ಚಿತ್ರಸಂತೆ– ₹ 1 ಕೋಟಿ

* ಖಾಸಗಿ ಸಹಭಾಗಿತ್ವದಲ್ಲಿ ‘ಫಿಲಂ ಸಿಟಿ’ ಸ್ಥಾಪನೆ– ₹ 500 ಕೋಟಿ

* ಐಐಟಿ ಮಾದರಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜಿನ ಅಭಿವೃದ್ಧಿಗೆ ₹ 10 ಕೋಟಿ

ತುಮಕೂರು

* ತಿಪಟೂರಿನಲ್ಲಿ ತೆಂಗು ಆಧಾರಿತ ಕೈಗಾರಿಕಾ ಪಾರ್ಕ್‌

ಬಾಗಲಕೋಟೆ

* ಬಸವಕಲ್ಯಾಣದಲ್ಲಿ ‘ಅನುಭವ ಮಂಟಪ’ಕ್ಕೆ ₹ 100 ಕೋಟಿ

* ಬಾದಾಮಿ ಅಭಿವೃದ್ಧಿ – ₹ 25 ಕೋಟಿ

ಚಿತ್ರದುರ್ಗ

* ಮುರುಘಾ ಮಠದ ಆವರಣದಲ್ಲಿ ಬಸವೇಶ್ವರರ ಕಂಚಿನ ಪುತ್ಥಳಿ– ₹ 20 ಕೋಟಿ

* ಎಸ್‌. ನಿಜಲಿಂಗಪ್ಪ ವಾಸವಿದ್ದ ಮನೆ ಸಂರಕ್ಷಣೆ– ₹ 5 ಕೋಟಿ

* ವೀರಮದಕರಿ ನಾಯಕ, ಒನಕೆ ಓಬವ್ವ ತಾಣ ಅಭಿವೃದ್ಧಿ

ಧಾರವಾಡ

* ಕಾನೂನು ವಿವಿಯಲ್ಲಿ ವಿಜ್ಞಾನೇಶ್ವರ ಅಧ್ಯಯನ ಪೀಠ– ₹ 1 ಕೋಟಿ

ಹಾಸನ

* ಎಸ್‌.ಎಲ್‌. ಭೈರಪ್ಪ ಹುಟ್ಟೂರು ಸಂತೆಶಿವರ ಗ್ರಾಮ ಅಭಿವೃದ್ಧಿ– ₹ 5 ಕೋಟಿ

ರಾಯಚೂರು

* ಮಂತ್ರಾಲಯದಲ್ಲಿ ಅತಿಥಿಗೃಹ

ಕೊಪ್ಪಳ

* ಗಂಗಾವತಿಯಲ್ಲಿ ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯ ದೇವಸ್ಥಾನ ಅಭಿವೃದ್ಧಿ– ₹ 20 ಕೋಟಿ

ಶಿವಮೊಗ್ಗ

* ಸಾಗರ ತಾಲ್ಲೂಕಿನ ಜೋಗ ಜಲಪಾತ ಅಭಿವೃದ್ಧಿ

* ತ್ಯಾವರೆಕೊಪ್ಪ ಹುಲಿ ಸಿಂಹಧಾಮದ ಮಿನಿ ಮೃಗಾಲಯ ಉನ್ನತೀಕರಣ– ₹ 5 ಕೋಟಿ

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT