<p><strong>ಬೆಂಗಳೂರು: </strong>ಸಾವಯವ ಕೃಷಿಯ ಉತ್ತೇಜನಕ್ಕೆ ಕ್ರಮ, ರೇಷ್ಮೆ ಕೃಷಿಕರಿಗಾಗಿ ಯೋಜನೆ, ಕೃಷಿ ಮಾರುಕಟ್ಟೆಗಳ ಅಭಿವೃದ್ಧಿಗೆ ಯೋಜನೆಗಳು ಸೇರಿದಂತೆ ಕೃಷಿ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು, ಅನುದಾನಗಳನ್ನು 2021–22ನೇ ಸಾಲಿನ ಬಜೆಟ್ನಲ್ಲಿ ಘೋಷಿಸಲಾಗಿದೆ.</p>.<p>ಕೃಷಿ ಕ್ಷೇತ್ರಕ್ಕೆ ಬಜೆಟ್ನಲ್ಲಿ ಘೋಷಿಸಲಾದ ಯೋಜನೆ, ಅನುದಾನಗಳ ವಿವರ ಇಲ್ಲಿದೆ:</p>.<p>* ಸಾವಯವ ಕೃಷಿ ಉತ್ತೇಜನಕ್ಕೆ ₹500 ಕೋಟಿ ವೆಚ್ಚದಲ್ಲಿ ಯೋಜನೆ.</p>.<p>* ವಿಜಯಪುರ ಜಿಲ್ಲೆ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ ಪಾರ್ಕ್ ಸ್ಥಾಪನೆ.</p>.<p>* ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿ ಶೇ 50ಕ್ಕೆ ಹೆಚ್ಚಳ.</p>.<p><strong>ಓದಿ:</strong><a href="https://www.prajavani.net/business/budget/karnataka-budget-2021-funds-and-plans-for-government-school-and-colleges-811603.html" itemprop="url">Karnataka Budget 2021: ಸರ್ಕಾರಿ ಶಾಲೆ–ಕಾಲೇಜುಗಳಿಗೆ ಏನೇನು ಸಿಕ್ತು?</a></p>.<p>* ಕೃಷಿ ಯಾಂತ್ರೀಕರಣ ಯೋಜನೆ ಅಡಿ ಸಣ್ಣ ಟ್ರ್ಯಾಕ್ಟರ್ ಗಳಿಗೆ ನೀಡುತ್ತಿದ್ದ ಸಹಾಯಧನವನ್ನು 24-25 ಪಿಟಿಒ ಎಚ್ಪಿ ಟ್ರ್ಯಾಕ್ಟರ್ಗಳಿಗೂ ವಿಸ್ತರಣೆ.</p>.<p>* ರಾಷ್ಟ್ರೀಯ ಇ-ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಸಾವಯವ ಮತ್ತು ಸಿರಿಧಾನ್ಯಗಳ ವೈಜ್ಞಾನಿಕ ಮಾರಾಟಕ್ಕೆ ಅವಕಾಶ.</p>.<p>* ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನಕ್ಕೆ 2021-22ನೇ ಸಾಲಿನಲ್ಲಿ ₹10 ಕೋಟಿ ಅನುದಾನ.</p>.<p>* ಆತ್ಮನಿರ್ಭರ ಭಾರತ ಅಭಿಯಾನದಡಿಯಲ್ಲಿ ಆಹಾರ ಸಂಸ್ಕರಣೆ ಹಾಗೂ ಕೊಯ್ಲೋತ್ತರ ನಿರ್ವಹಣೆ ಘಟಕಗಳಿಗೆ ನೀಡುವ ಶೇ 35ರ ಸಹಾಯಧನ ಶೇ 50ಕ್ಕೆ ಹೆಚ್ಚಳ. ₹50 ಕೋಟಿ ಅನುದಾನ.</p>.<p>* ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅಭಿವೃದ್ಧಿ.</p>.<p><strong>ಓದಿ:</strong><a href="https://www.prajavani.net/photo/karnataka-news/karnataka-budget-2021-infographic-highlights-cm-bs-yediyurappa-presents-karnataka-state-budget-811602.html" itemprop="url">Karnataka Budget 2021 Infographic: ಬಜೆಟ್ ಪ್ರಮುಖಾಂಶಗಳು</a></p>.<p>* ಅಡಿಕೆ ಬೆಳಗ್ಗೆ ಬಾಧಿಸುವ ಹಳದಿ ಎಲೆ ರೋಗದ ಕುರಿತ ಸಂಶೋಧನೆ ಹಾಗೂ ಪರಿಹಾರ ಬೆಳೆ ಪ್ರೋತ್ಸಾಹಿಸಲು ₹25 ಕೋಟಿ ಅನುದಾನ.</p>.<p>* ದ್ರಾಕ್ಷಿ ಕೃಷಿಯ ಉತ್ತೇಜನಕ್ಕಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ರಚಿಸಲು ಕ್ರಮ.</p>.<p>* ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಇಲಾಖೆಯ ಎಲ್ಲ ಕಚೇರಿಗಳನ್ನು ಒಂದೇ ಸೂರಿನಡಿ ತರಲು ₹150 ಕೋಟಿ ವೆಚ್ಚದಲ್ಲಿ ರೇಷ್ಮೆ ಭವನ ನಿರ್ಮಾಣ.</p>.<p>* ರಾಮನಗರದಲ್ಲಿ ₹25 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ.</p>.<p><strong>ಓದಿ:</strong><a href="https://www.prajavani.net/business/budget/karnataka-budget-2021-highlights-cm-bs-yediyurappa-presents-state-budget-811557.html" itemprop="url">Karnataka Budget 2021 | ಯಡಿಯೂರಪ್ಪ ಬಜೆಟ್ನಲ್ಲಿ ಏನೇನಿವೆ ಕೊಡುಗೆ: ಮುಖ್ಯಾಂಶ</a></p>.<p>* ಗೋದಾಮುಗಳಲ್ಲಿ ಕೃಷಿ ಉತ್ಪನ್ನಗಳ ಸಂಗ್ರಹಣ ಶುಲ್ಕದ ಶೇಕಡ 25 ರಷ್ಟು ಸಹಾಯಧನ. ಇದಕ್ಕಾಗಿ ₹25 ಕೋಟಿ ಅನುದಾನ.</p>.<p>* ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ಟಿಎಪಿಸಿಎಂಎಸ್ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ 11ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ 4ರ ಬಡ್ಡಿ ಸಹಾಯಧನ. ಇದಕ್ಕಾಗಿ ₹5 ಕೋಟಿ ಅನುದಾನ.</p>.<p>* 5,500 ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣಕ್ಕೆ ₹198 ಕೋಟಿ ಅನುದಾನ.</p>.<p>* ಬೈಯಪ್ಪನಹಳ್ಳಿಯಲ್ಲಿ ₹50 ಕೋಟಿ ವೆಚ್ಚದ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಾವಯವ ಕೃಷಿಯ ಉತ್ತೇಜನಕ್ಕೆ ಕ್ರಮ, ರೇಷ್ಮೆ ಕೃಷಿಕರಿಗಾಗಿ ಯೋಜನೆ, ಕೃಷಿ ಮಾರುಕಟ್ಟೆಗಳ ಅಭಿವೃದ್ಧಿಗೆ ಯೋಜನೆಗಳು ಸೇರಿದಂತೆ ಕೃಷಿ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು, ಅನುದಾನಗಳನ್ನು 2021–22ನೇ ಸಾಲಿನ ಬಜೆಟ್ನಲ್ಲಿ ಘೋಷಿಸಲಾಗಿದೆ.</p>.<p>ಕೃಷಿ ಕ್ಷೇತ್ರಕ್ಕೆ ಬಜೆಟ್ನಲ್ಲಿ ಘೋಷಿಸಲಾದ ಯೋಜನೆ, ಅನುದಾನಗಳ ವಿವರ ಇಲ್ಲಿದೆ:</p>.<p>* ಸಾವಯವ ಕೃಷಿ ಉತ್ತೇಜನಕ್ಕೆ ₹500 ಕೋಟಿ ವೆಚ್ಚದಲ್ಲಿ ಯೋಜನೆ.</p>.<p>* ವಿಜಯಪುರ ಜಿಲ್ಲೆ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ ಪಾರ್ಕ್ ಸ್ಥಾಪನೆ.</p>.<p>* ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿ ಶೇ 50ಕ್ಕೆ ಹೆಚ್ಚಳ.</p>.<p><strong>ಓದಿ:</strong><a href="https://www.prajavani.net/business/budget/karnataka-budget-2021-funds-and-plans-for-government-school-and-colleges-811603.html" itemprop="url">Karnataka Budget 2021: ಸರ್ಕಾರಿ ಶಾಲೆ–ಕಾಲೇಜುಗಳಿಗೆ ಏನೇನು ಸಿಕ್ತು?</a></p>.<p>* ಕೃಷಿ ಯಾಂತ್ರೀಕರಣ ಯೋಜನೆ ಅಡಿ ಸಣ್ಣ ಟ್ರ್ಯಾಕ್ಟರ್ ಗಳಿಗೆ ನೀಡುತ್ತಿದ್ದ ಸಹಾಯಧನವನ್ನು 24-25 ಪಿಟಿಒ ಎಚ್ಪಿ ಟ್ರ್ಯಾಕ್ಟರ್ಗಳಿಗೂ ವಿಸ್ತರಣೆ.</p>.<p>* ರಾಷ್ಟ್ರೀಯ ಇ-ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಸಾವಯವ ಮತ್ತು ಸಿರಿಧಾನ್ಯಗಳ ವೈಜ್ಞಾನಿಕ ಮಾರಾಟಕ್ಕೆ ಅವಕಾಶ.</p>.<p>* ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನಕ್ಕೆ 2021-22ನೇ ಸಾಲಿನಲ್ಲಿ ₹10 ಕೋಟಿ ಅನುದಾನ.</p>.<p>* ಆತ್ಮನಿರ್ಭರ ಭಾರತ ಅಭಿಯಾನದಡಿಯಲ್ಲಿ ಆಹಾರ ಸಂಸ್ಕರಣೆ ಹಾಗೂ ಕೊಯ್ಲೋತ್ತರ ನಿರ್ವಹಣೆ ಘಟಕಗಳಿಗೆ ನೀಡುವ ಶೇ 35ರ ಸಹಾಯಧನ ಶೇ 50ಕ್ಕೆ ಹೆಚ್ಚಳ. ₹50 ಕೋಟಿ ಅನುದಾನ.</p>.<p>* ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅಭಿವೃದ್ಧಿ.</p>.<p><strong>ಓದಿ:</strong><a href="https://www.prajavani.net/photo/karnataka-news/karnataka-budget-2021-infographic-highlights-cm-bs-yediyurappa-presents-karnataka-state-budget-811602.html" itemprop="url">Karnataka Budget 2021 Infographic: ಬಜೆಟ್ ಪ್ರಮುಖಾಂಶಗಳು</a></p>.<p>* ಅಡಿಕೆ ಬೆಳಗ್ಗೆ ಬಾಧಿಸುವ ಹಳದಿ ಎಲೆ ರೋಗದ ಕುರಿತ ಸಂಶೋಧನೆ ಹಾಗೂ ಪರಿಹಾರ ಬೆಳೆ ಪ್ರೋತ್ಸಾಹಿಸಲು ₹25 ಕೋಟಿ ಅನುದಾನ.</p>.<p>* ದ್ರಾಕ್ಷಿ ಕೃಷಿಯ ಉತ್ತೇಜನಕ್ಕಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ರಚಿಸಲು ಕ್ರಮ.</p>.<p>* ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಇಲಾಖೆಯ ಎಲ್ಲ ಕಚೇರಿಗಳನ್ನು ಒಂದೇ ಸೂರಿನಡಿ ತರಲು ₹150 ಕೋಟಿ ವೆಚ್ಚದಲ್ಲಿ ರೇಷ್ಮೆ ಭವನ ನಿರ್ಮಾಣ.</p>.<p>* ರಾಮನಗರದಲ್ಲಿ ₹25 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ.</p>.<p><strong>ಓದಿ:</strong><a href="https://www.prajavani.net/business/budget/karnataka-budget-2021-highlights-cm-bs-yediyurappa-presents-state-budget-811557.html" itemprop="url">Karnataka Budget 2021 | ಯಡಿಯೂರಪ್ಪ ಬಜೆಟ್ನಲ್ಲಿ ಏನೇನಿವೆ ಕೊಡುಗೆ: ಮುಖ್ಯಾಂಶ</a></p>.<p>* ಗೋದಾಮುಗಳಲ್ಲಿ ಕೃಷಿ ಉತ್ಪನ್ನಗಳ ಸಂಗ್ರಹಣ ಶುಲ್ಕದ ಶೇಕಡ 25 ರಷ್ಟು ಸಹಾಯಧನ. ಇದಕ್ಕಾಗಿ ₹25 ಕೋಟಿ ಅನುದಾನ.</p>.<p>* ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ಟಿಎಪಿಸಿಎಂಎಸ್ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ 11ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ 4ರ ಬಡ್ಡಿ ಸಹಾಯಧನ. ಇದಕ್ಕಾಗಿ ₹5 ಕೋಟಿ ಅನುದಾನ.</p>.<p>* 5,500 ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣಕ್ಕೆ ₹198 ಕೋಟಿ ಅನುದಾನ.</p>.<p>* ಬೈಯಪ್ಪನಹಳ್ಳಿಯಲ್ಲಿ ₹50 ಕೋಟಿ ವೆಚ್ಚದ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>