‘ಆರ್ಥಿಕ ಶಿಸ್ತು ಇಲ್ಲಿಯವರೆಗೆ ಹಳಿ ತಪ್ಪಿರಲಿಲ್ಲ. ಈಗ ₹46 ಸಾವಿರ ಕೋಟಿ ಹಣಕಾಸು ಕೊರತೆ ಇದೆ. ₹33 ಸಾವಿರ ಕೋಟಿ ಸಾಲ ಪಡೆದರೆ, ಕೊರತೆ ಪ್ರಮಾಣ ₹93 ಸಾವಿರ ಕೋಟಿ ದಾಟಬಹುದು. ಬದ್ಧತಾ ವೆಚ್ಚದ ಪ್ರಮಾಣ ಹೆಚ್ಚಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅತ್ಯಲ್ಪ ಹಣ ವೆಚ್ಚ ಮಾಡಲಾಗುತ್ತಿದೆ. ಬಡವರಿಗೆ ಮನೆ, ರಸ್ತೆ, ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು ಹೇಗೆ’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.