ಕೋವಿಡ್ ಮತ್ತು ಆರ್ಥಿಕ ಹಿಂಜರಿತದ ಸಂಕಷ್ಟದ ಸಂದರ್ಭದಲ್ಲಿ ತಮ್ಮ 8ನೇ ಬಜೆಟ್ ಮಂಡನೆ ಆರಂಭಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್ ಸಾಂಕ್ರಾಮಿಕವನ್ನು ಎದುರಿಸಲು ರಾಜ್ಯದಾದ್ಯಂತ ಆಸ್ಪತ್ರೆಗಳನ್ನು ಸಜ್ಜುಗೊಳಿಸಲಾಗಿತ್ತು. ಕೋವಿಡ್ ಎದುರಿಸುವಿಕೆ ಮತ್ತು ಈ ವಿಚಾರದಲ್ಲಿ ಭಾರತದ ಪಾತ್ರಕ್ಕೆ ಜಾಗತಿಕ ಮನ್ನಣೆ ದೊರೆಯುವಲ್ಲಿ ಕರ್ನಾಟಕದ ಪಾತ್ರ ಮಹತ್ತರವಾದದ್ದು ಎಂದು ಹೇಳಿದರು.