ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಬೊಮ್ಮಾಯಿ ಮಂಡಿಸಿರುವುದು ಅವಾಸ್ತವಿಕ ಬಜೆಟ್‌: ಸಿದ್ದರಾಮಯ್ಯ ಟೀಕೆ

Last Updated 4 ಮಾರ್ಚ್ 2022, 14:43 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವುದು ಅವಾಸ್ತವಿಕ ಬಜೆಟ್‌ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ‘ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಂಚ ಸೂತ್ರಗಳಿಗೆ ಈ ಬಜೆಟ್‌ ತದ್ವಿರುದ್ಧವಾಗಿದೆ’ ಎಂದು ತಿಳಿಸಿದರು.

ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಅವಾಸ್ತವಿಕ ಮತ್ತು ಅಸಾಧ್ಯ ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ ಎಂದೂ ಸಿದ್ದರಾಮಯ್ಯ ಹರಿಹಾಯ್ದರು.

‘ನಮ್ಮ ಆಡಳಿತದಲ್ಲಿ ತೆರಿಗೆಉಳಿಕೆ ಬಜೆಟ್ ಇತ್ತು. ಬಿಜೆಪಿ ಬಂದ ಮೇಲೆ ತೆರಿಗೆ ಕೊರತೆ ಆರಂಭವಾಗಿದೆ. ಇದು ನಮ್ಮ ಮತ್ತು ಬಿಜೆಪಿ ಸರ್ಕಾರದ ನಡುವಿನ ವ್ಯತ್ಯಾಸ. ಈಗ ತೆರಿಗೆ ಕೊರತೆ ಇರುವುದರಿಂದ ಸಾಲ ಪಡೆದು ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಆಸ್ತಿ ಸೃಜನೆಗೆ ಹಣ ಖರ್ಚು ಮಾಡುವಂತಾಗಿದೆ’ ಎಂದು ಮಾಜಿ ಸಿಎಂ ಹೇಳಿದರು.

‘ಬಿಜೆಪಿ ಸರ್ಕಾರ ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದೆ. ಬಹಳಷ್ಟು ಇಲಾಖೆಗಳಿಗೆ 2018 ರಲ್ಲಿ ಕೊಟ್ಟಷ್ಟು ಹಣವನ್ನೂ ಕೊಟ್ಟಿಲ್ಲ. ಪರಿಶಿಷ್ಟ ಜಾತಿ ಮತ್ತು ವರ್ಗದವರ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಗೆ ನಾವು ಹಣ ಮೀಸಲಿಡುತ್ತಿದ್ದೆವು. ಬಜೆಟ್ ಗಾತ್ರ ಹೆಚ್ಚಾದಂತೆ ಈ ಯೋಜನೆ ನೀಡುವ ಅನುದಾನ ಹೆಚ್ಚಾಗಿಲ್ಲ’ ಎಂದೂ ಸಿದ್ದರಾಮಯ್ಯ ತಿಳಿಸಿದರು.

ಇವನ್ನೂ ಓದಿ

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ





ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT