ಬೆಂಗಳೂರು: ಪತ್ರಿಕೋದ್ಯಮವನ್ನು ಉತ್ತೇಜಿಸಲು ನಿಯಮಿತವಾಗಿ ಎಂಟು ಪುಟಗಳಲ್ಲಿ ಪ್ರಕಟಗೊಳ್ಳುವ ಪ್ರಾದೇಶಿಕ ಪತ್ರಿಕೆಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಶುಕ್ರವಾರ ರಾಜ್ಯ ಬಜೆಟ್ ಮಂಡಿಸಿದ ಅವರು, ‘20 ಸಾವಿರಕ್ಕೂ ಹೆಚ್ಚು ಪ್ರಸಾರ ಹೊಂದಿರುವ, ವರ್ಣ ಪುಟಗಳಲ್ಲಿ ಪ್ರಕಟಗೊಳ್ಳುವ ಪ್ರಾದೇಶಿಕ ಪತ್ರಿಕೆಗಳನ್ನು ಸಧೃಡಗೊಳಿಸಲು ಹೊಸ ಯೋಜನೆಯನ್ನು ರೂಪಿಸಲಾಗುವುದು’ ಎಂದು ತಿಳಿಸಿದರು.
‘ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾಧ್ಯಮ ಕಿಟ್ ಹಾಗೂ ಹಿಂದುಳಿದ ವರ್ಗಗಳ ಒಡೆತನದ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರಡು ಪುಟ ಜಾಹೀರಾತು ನೀಡುವ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು’ ಎಂದೂ ಬೊಮ್ಮಾಯಿ ಘೋಷಿಸಿದರು.