ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವುದು ‘ನಿರಾಶಾದಾಯಕ ಬಜೆಟ್’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟೀಕಿಸಿದರು.
ಈ ಕುರಿತು ‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಏನೂ ವಿಶೇಷವಿಲ್ಲ. ಇದು ನಿರಾಶಾದಾಯಕವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಪ್ರತಿ ಬಾರಿಯಂತೆಯೇ ಬೆಳಗಾವಿ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಕೋವಿಡ್ ಲಾಕ್ಡೌನ್ ಸಂಕಷ್ಟದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ. ಅವರ ನೆರವಿಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಜನರ ನಿರೀಕ್ಷೆ ಹುಸಿಯಾಗಿದೆ’ ಎಂದೂ ಜಾರಕಿಹೊಳಿ ಅಭಿಪ್ರಾಯಟ್ಟಿದ್ದಾರೆ.