<p><strong>ಬೆಂಗಳೂರು:</strong> ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸುವ ಬಗ್ಗೆ 2022–23ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ.</p>.<p>ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಾಸರಗೋಡು, ಅಕ್ಕಲಕೋಟೆ ಮತ್ತು ಗೋವಾದಲ್ಲಿ ಕನ್ನಡ ಭವನ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.</p>.<p>ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ಹೀಗಿವೆ;</p>.<p>* ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ₹20 ಕೋಟಿ ಅನುದಾನ</p>.<p><strong>ಇದನ್ನೂ ಓದಿ:</strong><a href="https://www.prajavani.net/business/budget/cm-basavaraj-bommai-presenting-karnataka-budget-2022-key-points-and-highlights-916150.html" itemprop="url">Karnataka Budget: ಬೊಮ್ಮಾಯಿ ಬಜೆಟ್ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು </a></p>.<p>* ತಳ ಸಮುದಾಯದಲ್ಲಿರುವ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಪ್ರತಿ ವಿಭಾಗ ಮಟ್ಟದಲ್ಲಿ 4 ಸಾಂಸ್ಕೃತಿಕ ಶಿಬಿರ ಆಯೋಜನೆ</p>.<p>* ಕನ್ನಡದ ಹೆಸರಾಂತ ಸಾಹಿತಿಗಳಾದ ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಡಾ.ಚಂದ್ರಶೇಖರ ಪಾಟೀಲ, ಚೆನ್ನವೀರ ಕಣವಿ ಮೊದಲಾದವರ ಅಮೂಲ್ಯ ಸಾಹಿತ್ಯ ಪ್ರಚುರಪಡಿಸಲು ಕ್ರಮ</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸುವ ಬಗ್ಗೆ 2022–23ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ.</p>.<p>ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಾಸರಗೋಡು, ಅಕ್ಕಲಕೋಟೆ ಮತ್ತು ಗೋವಾದಲ್ಲಿ ಕನ್ನಡ ಭವನ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.</p>.<p>ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ಹೀಗಿವೆ;</p>.<p>* ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ₹20 ಕೋಟಿ ಅನುದಾನ</p>.<p><strong>ಇದನ್ನೂ ಓದಿ:</strong><a href="https://www.prajavani.net/business/budget/cm-basavaraj-bommai-presenting-karnataka-budget-2022-key-points-and-highlights-916150.html" itemprop="url">Karnataka Budget: ಬೊಮ್ಮಾಯಿ ಬಜೆಟ್ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು </a></p>.<p>* ತಳ ಸಮುದಾಯದಲ್ಲಿರುವ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಪ್ರತಿ ವಿಭಾಗ ಮಟ್ಟದಲ್ಲಿ 4 ಸಾಂಸ್ಕೃತಿಕ ಶಿಬಿರ ಆಯೋಜನೆ</p>.<p>* ಕನ್ನಡದ ಹೆಸರಾಂತ ಸಾಹಿತಿಗಳಾದ ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಡಾ.ಚಂದ್ರಶೇಖರ ಪಾಟೀಲ, ಚೆನ್ನವೀರ ಕಣವಿ ಮೊದಲಾದವರ ಅಮೂಲ್ಯ ಸಾಹಿತ್ಯ ಪ್ರಚುರಪಡಿಸಲು ಕ್ರಮ</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>