ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಬಜೆಟ್: ಪ್ರವಾಸೋದ್ಯಮಕ್ಕೆ ಆದ್ಯತೆ; ಜೋಗ, ನಂದಿ ಬೆಟ್ಟದಲ್ಲಿ ರೋಪ್‌ವೇ

Last Updated 4 ಮಾರ್ಚ್ 2022, 10:02 IST
ಅಕ್ಷರ ಗಾತ್ರ

ಬೆಂಗಳೂರು: ಜೋಗ ಜಲಪಾತ, ನಂದಿ ಬೆಟ್ಟ ಮತ್ತು ಯಾಣ ಸೇರಿದಂತೆ ರಾಜ್ಯದ ವಿವಿಧ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಇಂದು (ಮಾ.04), 2022–23ನೇ ಸಾಲಿನ ಬಜೆಟ್ ಮಂಡಿಸಿದ ಅವರು,ಶಿವಮೊಗ್ಗದಲ್ಲಿರುವ ಜೋಗ ಜಲಪಾತದಲ್ಲಿ ಅಂದಾಜು ₹ 116 ಕೋಟಿ ವೆಚ್ಚದಲ್ಲಿ ಹೋಟೆಲ್‌ ಮತ್ತು ರೋಪ್‌ವೇ, ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ₹ 93 ಕೋಟಿ ವೆಚ್ಚದಲ್ಲಿರೋಪ್‌ವೇ ಅಭಿವೃದ್ಧಿಪಡಿಸಲಾಗುವುದು. ಯಾಣದಲ್ಲಿಯೂರೋಪ್‌ವೇ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪರ್ವತ ಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಹಾಗೂ ಮುಳ್ಳಯ್ಯನಗಿರಿ ದತ್ತಪೀಠಗಳಲ್ಲಿ ರೋಪ್‌ವೇ ನಿರ್ಮಾಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದಿದ್ದಾರೆ.

ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಕ್ರಮ
* ಕೊಪ್ಪಳದ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ₹ 100 ಕೊಟಿ ಅನುದಾನ
* ಹಂಪಿ–ಬಾದಾಮಿ–ಐಹೊಳೆ–ಪಟ್ಟದಕಲ್ಲು–ವಿಜಯಪುರ ಪ್ರವಾಸಿ ವೃತ್ತ ಹಾಗೂ ಮೈಸೂರು–ಶ್ರೀರಂಗಪಟ್ಟಣ–ಹಾಸನ–ಬೇಲೂರು–ಹಳೇಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ
* ಬೇಲೂರು, ಹಳೇಬೀಡು, ಸೋಮನಾಥಪುರ ಸೇರಿದಂತೆ ಹೊಯ್ಸಳರ ಸ್ಮಾರಕಗಳನ್ನು ಪ್ರಸಕ್ತ ಸಾಲಿನಲ್ಲಿ ಯುನೆಸ್ಕೊ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ
* ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ಸಿಆರ್‌ಜೆಡ್‌ ಮಾನದಂಡಗಳನ್ನು ಸಡಿಲಿಸುವಂತೆ ಕೇಂದ್ರದ ಅನುಮೋದನೆ ಪಡೆಯಲು ಕ್ರಮ
* ತಬಡಿ ಬಂದರಿನಲ್ಲಿ ಪರಿಸರ–ಪ್ರವಾಸೋದ್ಯಮ ಕೇಂದ್ರ ಅಭಿವೃದ್ಧಿ
* ಪಾರಂಪರಿಕ ತಾಣಗಳಾದ ಬೀದರ್ ಹಾಗೂ ಕಲಬುರಗಿ ಕೋಟೆಗಳ ಪುನರುಜ್ಜೀವನಕ್ಕೆ ಕ್ರಮ
* ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು ನೆರವಾಗುವಂತಹ 'Adopt a Monument' ಯೋಜನೆ ಜಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT