ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ನಲ್ಲಿ ವಿಜಯಪುರಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ ಆರೋಪಿಸಿದರು.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದಅವರು, ‘ವಿಜಯಪುರ ಜಿಲ್ಲೆಗೆ ಈ ಬಜೆಟ್ನಲ್ಲಿ ನೀಡಿರುವ ಕೊಡುಗೆ ಶೂನ್ಯ. ನಿರೀಕ್ಷಿತ ರೇವಣ ಸಿದ್ದೇಶ್ವರ ಯೋಜನೆಗೆ ಕಾರಜೋಳ ಅವರು ಹಣ ಒದಗಿಸದೇ ಜಿಲ್ಲೆಯ ಜನತೆಗೆ ವಂಚನೆ ಮಾಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ನೀಡದೇ ಇರುವುದು ದುರ್ದೈವ ಸಂಗತಿ. ತೊರವಿಯಲ್ಲಿ ವೈನ್ ಪಾರ್ಕ್ ಘೋಷಿಸಿದ್ದರೂ, ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲು ಹೊರಟಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಎಂ.ಬಿ.ಪಾಟೀಲ ಹರಿಹಾಯ್ದರು.