ಸಾಂಪ್ರದಾಯಿಕ ಕೌಶಲಗಳ ಪುನರುಜ್ಜೀವನಕ್ಕಾಗಿ ಬಿದಿರಿನ ಉತ್ಪನ್ನಗಳಲ್ಲಿ ಮೇದಾರ ಸಮುದಾಯಕ್ಕೆ, ಚನ್ನಪಟ್ಟಣ ಗೊಂಬೆಗಳ ತಯಾರಿಕೆಗೆ, ಕಿನ್ಹಾಳ ಕಲೆಗಾಗಿ ಚಿತ್ರಗಾರ ಸಮುದಾಯಕ್ಕೆ ಹಾಗೂ ಕುಂಬಾರಿಕೆ, ಬಿದರಿ ಕಲೆ, ಕಸೂತಿ ಮುಂತಾದ ಕಲೆಗಳಲ್ಲಿ ಆಯ್ದ 100 ಅಭ್ಯರ್ಥಿಗಳಿಗೆ ಉನ್ನತ ಮಟ್ಟದ ಕೌಶಲವರ್ಧನೆ ತರಬೇತಿ ನೀಡಲು ಪ್ರಕಟಿಸಲಾಗಿದೆ. ಬೀದಿಬದಿ ವ್ಯಾಪಾರಿಗಳಿಗೆ ಯಾವುದೇ ಹೊಸ ಯೋಜನೆ ಘೋಷಣೆ ಮಾಡಿಲ್ಲ. ‘ಪ್ರಧಾನಮಂತ್ರಿ ಸ್ವನಿಧಿ’ ಯೋಜನೆಯಡಿ 2022ರ ನವೆಂಬರ್ ಅಂತ್ಯದವರೆಗೆ 69 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ₹70 ಕೋಟಿ ಸಾಲ ಮಂಜೂರು ಮಾಡಲಾಗಿದೆ ಎಂದಷ್ಟೇ ತಿಳಿಸಲಾಗಿದೆ.