ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget 2023 | ಬಜೆಟ್‌ನಲ್ಲಿ ನೇಕಾರರಿಗೆ ನೆರವು: ಸಿಎಂ ಬೊಮ್ಮಾಯಿ

Last Updated 22 ಜನವರಿ 2023, 16:16 IST
ಅಕ್ಷರ ಗಾತ್ರ

ಬೆಂಗಳೂರು: ನೇಕಾರರು ಕಚ್ಚಾ ವಸ್ತು ಖರೀದಿಯಿಂದ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವವರೆಗೆ ಅನುಕೂಲವಾಗುವಂತೆ ಬಜೆಟ್‌ನಲ್ಲಿ ನೆರವು ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಸೆಂಟ್ರಲ್‌ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಭಾನುವಾರ ನಡೆದ ರಾಜ್ಯ ತೊಗಟವೀರ ಕ್ಷತ್ರಿಯ ನೇಕಾರ ಸಂಘದ ಅಮೃತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ‘ನೇಕಾರರ ಮೂಲ ವೃತ್ತಿ ಉಳಿಯಬೇಕು. ಅದರ ಜತೆಯಲ್ಲೇ ಅವರ ಮಕ್ಕಳು ಬೇರೆ ಬೇರೆ ವೃತ್ತಿಗಳನ್ನು ಆಯ್ದುಕೊಳ್ಳಲು ಅವಕಾಶ ಆಗಬೇಕು. ಅದಕ್ಕೆ ಪೂರಕವಾಗಿ ಸರ್ಕಾರ ಸಹಾಯ ಮಾಡಲಿದೆ’ ಎಂದರು.

ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಲು ನೇಕಾರರು ಉತ್ಪಾದಿಸುವ ಬಟ್ಟೆಯನ್ನು ಸಂಪೂರ್ಣವಾಗಿ ಖರೀದಿಸಲು ಆದೇಶ ನೀಡಲಾಗಿದೆ. ನೇಕಾರ ಸಮ್ಮಾನ್‌ ಯೋಜನೆ ನೆರವು ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನೂ ಸರ್ಕಾರ ಈಡೇರಿಸಿದೆ. ಸಾಲ ಮತ್ತು ಸಹಾಯಧನ ಹೆಚ್ಚಳ, ಕಾಟೇಜ್‌ ಉದ್ದಿಮೆಯನ್ನಾಗಿ ಪರಿಗಣಿಸುವುದು ಸೇರಿದಂತೆ ನೇಕಾರರ ಇನ್ನೂ ಕೆಲವು ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ ಎಂದು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ತಪಸೀಹಳ್ಳಿ ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ, ನೆಲಮಂಗಲ ಸಮೀಪದ ಅರಿಶಿನಕುಂಟೆಯ ತೈಲೇಶ್ವರ ಗಾಣಿಗರ ಮಹಾಸಂಸ್ಥಾನದ ಪೂರ್ಣಾನಂದಪುರಿ ಸ್ವಾಮೀಜಿ, ಸಚಿವ ಕೆ.ಸಿ.ನಾರಾಯಣಗೌಡ, ಸಂಸದ ಪಿ.ಸಿ.ಮೋಹನ್, ರಾಜ್ಯ ತೊಗಟವೀರ ಕ್ಷತ್ರಿಯ ನೇಕಾರ ಸಂಘದ ಅಧ್ಯಕ್ಷ ಬಿ.ಎಸ್. ಸೋಮಶೇಖರ್, ಅಖಿಲ ಭಾರತ ತೊಗಟವೀರ ಕ್ಷತ್ರಿಯ ಸಂಘದ ಅಧ್ಯಕ್ಷ ಎಸ್. ಹರೀಶ್, ಬಿಜೆಪಿ ಮುಖಂಡ ಎಂ.ಡಿ ಲಕ್ಷ್ಮೀನಾರಾಯಣ, ಪುಷ್ಪಾಂಡಜ ಆಶ್ರಮ ಗುರುಪೀಠ ಟ್ರಸ್ಟ್‌ ಅಧ್ಯಕ್ಷ ಸಿ. ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT