<p>ಬೆಂಗಳೂರು: ನಗರದಲ್ಲಿ ರಾತ್ರಿ 11 ಗಂಟೆಯವರೆಗಿದ್ದ ವಹಿವಾಟಿನ ಅವಕಾಶವನ್ನು ವಾಣಿಜ್ಯ ಮತ್ತು ವ್ಯಾಪಾರವನ್ನು ವೃದ್ಧಿಸುವ ಹಿನ್ನೆಲೆಯಲ್ಲಿ ರಾತ್ರಿ 1ರವರೆಗೆ ವಿಸ್ತರಿಸುವುದಾಗಿ ಪ್ರಕಟಿಸಲಾಗಿದೆ.</p><p>ತಿಂಡಿ–ತಿನಿಸು ಮಾರುವ ಅಂಗಡಿಗಳು ಹಾಗೂ ಹೋಟೆಲ್ಗಳ ವಹಿವಾಟು ಅವಧಿಯನ್ನು ರಾತ್ರಿ 1 ಗಂಟೆಯವರೆಗೂ ವಿಸ್ತರಿಸಿ, ಅಂದಿನ ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು 2022 ಅ.14ರಂದು ಆದೇಶ ಹೊರಡಿಸಿದ್ದರು. ಆದರೆ ನಂತರದ ದಿನಗಳಲ್ಲಿ ಯಾವುದೇ ಆದೇಶವಿಲ್ಲದೇ 11ರ ನಂತರದ ವಹಿವಾಟಿಗೆ ತೆರೆ ಬಿದ್ದಿತ್ತು.</p><p>ಇದೀಗ ನಗರದಲ್ಲಿ ರಾತ್ರಿ 1ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿ ಬಜೆಟ್ನಲ್ಲಿ ಪ್ರಕಟಿಸಲಾಗಿದೆ. ಇದು ಎಂದಿನಿಂದ ಜಾರಿಯಾಗುತ್ತದೆ ಎಂಬುದನ್ನು ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಆದೇಶ ಹೊರಡಿಸಲಿದೆ.</p><p>*ನಗರದ ಪ್ರಮುಖ ರಸ್ತೆಗಳಲ್ಲಿ ₹1,700 ಕೋಟಿ ವೆಚ್ಚದಲ್ಲಿ 147 ಕಿ.ಮೀ ಉದ್ದದ ವೈಟ್ ಟಾಪಿಂಗ್ ರಸ್ತೆ ಕಾಮಗಾರಿ 2025 ಡಿಸೆಂಬರ್ಗೆ ಪೂರ್ಣ.</p><p>*ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿರುವ ಹೆಬ್ಬಾಳ ಜಂಕ್ಷನ್ನಲ್ಲಿ ಪ್ರಾಯೋಗಿಕವಾಗಿ ಸುರಂಗ ರಸ್ತೆ ಈ ವರ್ಷ ನಿರ್ಮಾಣ.</p><p>*ರಾಜಕಾಲುವೆ ಬಫರ್ ಝೋನ್ನಲ್ಲಿ ಸರ್ವಋತು ರಸ್ತೆ ನಿರ್ಮಾಣ ₹200 ಕೋಟಿಯಲ್ಲಿ ಆರಂಭವಾಗಿದ್ದು, 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿ.</p><p>*ಆರ್ಥಿಕ ಚಟುವಟಿಕೆಗಳು ದೊಡ್ಡ ಪ್ರಮಾಣದಲ್ಲಿ ವೃದ್ಧಿಸಲು ಸಹಕಾರಿಯಾಗಲು ಪೆರಿಫೆರಲ್ ವರ್ತುಲ ರಸ್ತೆ (ಪಿಆರ್ಆರ್) ಅನ್ನು ‘ಬೆಂಗಳೂರು ಬಿಸಿನೆಸ್ ಕಾರಿಡಾರ್’ ಪರಿಕಲ್ಪನೆಯಲ್ಲಿ ಪರಿಚಯ. ಪಿಪಿಪಿ ಮಾದರಿಯಲ್ಲಿ ₹27 ಸಾವಿರ ಕೋಟಿಯಲ್ಲಿ 73 ಕಿ.ಮೀ ಅಭಿವೃದ್ಧಿ.</p><p>*ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸ್ಕೈ-ಡೆಕ್ ನಿರ್ಮಾಣಕ್ಕೆ ಅಂತರರಾಷ್ಟ್ರೀಯ ಮಟ್ಟದ ವಾಸ್ತುವಿನ್ಯಾಸಗಾರರ ಆಹ್ವಾನ.</p><p>*ಬಿಬಿಎಂಪಿ, ಬಿಎಂಆರ್ಸಿಎಲ್, ಬಿಡಬ್ಲ್ಯುಎಸ್ಎಸ್ಬಿ, ಬಿಡಿಎ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ್ ಸ್ಥಾಪನೆ.</p><p>*ತ್ಯಾಜ್ಯ ವಿಲೇವಾರಿಗೆ ನಗರ ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡಿಸಿ, ಪ್ರತಿಯೊಂದು ವಲಯಕ್ಕೂ ನುರಿತ ಸಂಸ್ಥೆಯನ್ನು ಪಾರದರ್ಶಕವಾಗಿ ನೇಮಿಸಲಾಗುವುದು.</p><p>*ಬಿಬಿಎಂಪಿಯ ಅರಣ್ಯ, ಕೆರೆ ಮತ್ತು ತೋಟಗಾರಿಕಾ ವಿಭಾಗವನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ವಹಣಾ ವಿಭಾಗ ಎಂದು ಮರುನಾಮಕರಣ. ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕ ಸಹಭಾಗಿತ್ವಕ್ಕೆ ಪ್ರತ್ಯೇಕ ನೀತಿ.</p><p>*ಬಿಬಿಎಂಪಿ ಸಹಯೋಗದೊಂದಿಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ‘ಸರ್ವಜ್ಞ ಉದ್ಯಾನ’ ಅಭಿವೃದ್ಧಿ.</p><p>*ನಮ್ಮ ಮೆಟ್ರೊಗೆ 2025ರ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ ಮಾರ್ಗ</p><p>*ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಸರ್ಜಾಪುರದಿಂದ ಹೆಬ್ಬಾಳ ಸಂಪರ್ಕಿಸುವ ಮಾರ್ಗಕ್ಕೆ ಡಿ.ಪಿ.ಆರ್. ಕರಡು ಸಿದ್ಧ. ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಸಲು ನಿರ್ಧಾರ.</p><p>*ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 1,334 ಹೊಸ ಎಲೆಕ್ಟ್ರಿಕ್ ಬಸ್ ಹಾಗೂ 820 ಬಿಎಸ್-6 ಡೀಸೆಲ್ ಬಸ್ಗಳ ಸೇರ್ಪಡೆ.</p><p>*ಬಿಎಂಟಿಸಿಯಲ್ಲಿ ಮಹಿಳಾ ಸುರಕ್ಷತೆಯನ್ನು ಒಳಗೊಂಡ ‘ವೆಹಿಕಲ್ ಟ್ರ್ಯಾಕಿಂಗ್’ ಮೊಬೈಲ್ ಆ್ಯಪ್ ಅನುಷ್ಠಾನ.</p><p>*ಜಲಮಂಡಳಿಯಿಂದ ಕಾವೇರಿ ಹಂತ-5 ಯೋಜನೆಯಡಿ ಮೇ 2024ರ ವೇಳೆಗೆ 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು.</p><p>*ಕಾವೇರಿ ಹಂತ-5 ರಡಿಯಲ್ಲಿ ಒಳಚರಂಡಿ ಕಾಮಗಾರಿಗಳನ್ನು ಡಿಸೆಂಬರ್ 2024ರಲ್ಲಿ ಪೂರ್ಣಗೊಳಿಸಲಾಗುವುದು. </p><p>*ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ₹441 ಕೋಟಿ ವೆಚ್ಚದಲ್ಲಿ ಉನ್ನತೀಕರಣ. 268 ಎಂಎಲ್ಡಿ ತ್ಯಾಜ್ಯ ನೀರು ಸಂಸ್ಕರಣೆ.</p><p>*₹200 ಕೋಟಿ ವೆಚ್ಚದಲ್ಲಿ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದಲ್ಲಿ ರಾತ್ರಿ 11 ಗಂಟೆಯವರೆಗಿದ್ದ ವಹಿವಾಟಿನ ಅವಕಾಶವನ್ನು ವಾಣಿಜ್ಯ ಮತ್ತು ವ್ಯಾಪಾರವನ್ನು ವೃದ್ಧಿಸುವ ಹಿನ್ನೆಲೆಯಲ್ಲಿ ರಾತ್ರಿ 1ರವರೆಗೆ ವಿಸ್ತರಿಸುವುದಾಗಿ ಪ್ರಕಟಿಸಲಾಗಿದೆ.</p><p>ತಿಂಡಿ–ತಿನಿಸು ಮಾರುವ ಅಂಗಡಿಗಳು ಹಾಗೂ ಹೋಟೆಲ್ಗಳ ವಹಿವಾಟು ಅವಧಿಯನ್ನು ರಾತ್ರಿ 1 ಗಂಟೆಯವರೆಗೂ ವಿಸ್ತರಿಸಿ, ಅಂದಿನ ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು 2022 ಅ.14ರಂದು ಆದೇಶ ಹೊರಡಿಸಿದ್ದರು. ಆದರೆ ನಂತರದ ದಿನಗಳಲ್ಲಿ ಯಾವುದೇ ಆದೇಶವಿಲ್ಲದೇ 11ರ ನಂತರದ ವಹಿವಾಟಿಗೆ ತೆರೆ ಬಿದ್ದಿತ್ತು.</p><p>ಇದೀಗ ನಗರದಲ್ಲಿ ರಾತ್ರಿ 1ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿ ಬಜೆಟ್ನಲ್ಲಿ ಪ್ರಕಟಿಸಲಾಗಿದೆ. ಇದು ಎಂದಿನಿಂದ ಜಾರಿಯಾಗುತ್ತದೆ ಎಂಬುದನ್ನು ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಆದೇಶ ಹೊರಡಿಸಲಿದೆ.</p><p>*ನಗರದ ಪ್ರಮುಖ ರಸ್ತೆಗಳಲ್ಲಿ ₹1,700 ಕೋಟಿ ವೆಚ್ಚದಲ್ಲಿ 147 ಕಿ.ಮೀ ಉದ್ದದ ವೈಟ್ ಟಾಪಿಂಗ್ ರಸ್ತೆ ಕಾಮಗಾರಿ 2025 ಡಿಸೆಂಬರ್ಗೆ ಪೂರ್ಣ.</p><p>*ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿರುವ ಹೆಬ್ಬಾಳ ಜಂಕ್ಷನ್ನಲ್ಲಿ ಪ್ರಾಯೋಗಿಕವಾಗಿ ಸುರಂಗ ರಸ್ತೆ ಈ ವರ್ಷ ನಿರ್ಮಾಣ.</p><p>*ರಾಜಕಾಲುವೆ ಬಫರ್ ಝೋನ್ನಲ್ಲಿ ಸರ್ವಋತು ರಸ್ತೆ ನಿರ್ಮಾಣ ₹200 ಕೋಟಿಯಲ್ಲಿ ಆರಂಭವಾಗಿದ್ದು, 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿ.</p><p>*ಆರ್ಥಿಕ ಚಟುವಟಿಕೆಗಳು ದೊಡ್ಡ ಪ್ರಮಾಣದಲ್ಲಿ ವೃದ್ಧಿಸಲು ಸಹಕಾರಿಯಾಗಲು ಪೆರಿಫೆರಲ್ ವರ್ತುಲ ರಸ್ತೆ (ಪಿಆರ್ಆರ್) ಅನ್ನು ‘ಬೆಂಗಳೂರು ಬಿಸಿನೆಸ್ ಕಾರಿಡಾರ್’ ಪರಿಕಲ್ಪನೆಯಲ್ಲಿ ಪರಿಚಯ. ಪಿಪಿಪಿ ಮಾದರಿಯಲ್ಲಿ ₹27 ಸಾವಿರ ಕೋಟಿಯಲ್ಲಿ 73 ಕಿ.ಮೀ ಅಭಿವೃದ್ಧಿ.</p><p>*ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸ್ಕೈ-ಡೆಕ್ ನಿರ್ಮಾಣಕ್ಕೆ ಅಂತರರಾಷ್ಟ್ರೀಯ ಮಟ್ಟದ ವಾಸ್ತುವಿನ್ಯಾಸಗಾರರ ಆಹ್ವಾನ.</p><p>*ಬಿಬಿಎಂಪಿ, ಬಿಎಂಆರ್ಸಿಎಲ್, ಬಿಡಬ್ಲ್ಯುಎಸ್ಎಸ್ಬಿ, ಬಿಡಿಎ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ್ ಸ್ಥಾಪನೆ.</p><p>*ತ್ಯಾಜ್ಯ ವಿಲೇವಾರಿಗೆ ನಗರ ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡಿಸಿ, ಪ್ರತಿಯೊಂದು ವಲಯಕ್ಕೂ ನುರಿತ ಸಂಸ್ಥೆಯನ್ನು ಪಾರದರ್ಶಕವಾಗಿ ನೇಮಿಸಲಾಗುವುದು.</p><p>*ಬಿಬಿಎಂಪಿಯ ಅರಣ್ಯ, ಕೆರೆ ಮತ್ತು ತೋಟಗಾರಿಕಾ ವಿಭಾಗವನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ವಹಣಾ ವಿಭಾಗ ಎಂದು ಮರುನಾಮಕರಣ. ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕ ಸಹಭಾಗಿತ್ವಕ್ಕೆ ಪ್ರತ್ಯೇಕ ನೀತಿ.</p><p>*ಬಿಬಿಎಂಪಿ ಸಹಯೋಗದೊಂದಿಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ‘ಸರ್ವಜ್ಞ ಉದ್ಯಾನ’ ಅಭಿವೃದ್ಧಿ.</p><p>*ನಮ್ಮ ಮೆಟ್ರೊಗೆ 2025ರ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ ಮಾರ್ಗ</p><p>*ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಸರ್ಜಾಪುರದಿಂದ ಹೆಬ್ಬಾಳ ಸಂಪರ್ಕಿಸುವ ಮಾರ್ಗಕ್ಕೆ ಡಿ.ಪಿ.ಆರ್. ಕರಡು ಸಿದ್ಧ. ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಸಲು ನಿರ್ಧಾರ.</p><p>*ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 1,334 ಹೊಸ ಎಲೆಕ್ಟ್ರಿಕ್ ಬಸ್ ಹಾಗೂ 820 ಬಿಎಸ್-6 ಡೀಸೆಲ್ ಬಸ್ಗಳ ಸೇರ್ಪಡೆ.</p><p>*ಬಿಎಂಟಿಸಿಯಲ್ಲಿ ಮಹಿಳಾ ಸುರಕ್ಷತೆಯನ್ನು ಒಳಗೊಂಡ ‘ವೆಹಿಕಲ್ ಟ್ರ್ಯಾಕಿಂಗ್’ ಮೊಬೈಲ್ ಆ್ಯಪ್ ಅನುಷ್ಠಾನ.</p><p>*ಜಲಮಂಡಳಿಯಿಂದ ಕಾವೇರಿ ಹಂತ-5 ಯೋಜನೆಯಡಿ ಮೇ 2024ರ ವೇಳೆಗೆ 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು.</p><p>*ಕಾವೇರಿ ಹಂತ-5 ರಡಿಯಲ್ಲಿ ಒಳಚರಂಡಿ ಕಾಮಗಾರಿಗಳನ್ನು ಡಿಸೆಂಬರ್ 2024ರಲ್ಲಿ ಪೂರ್ಣಗೊಳಿಸಲಾಗುವುದು. </p><p>*ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ₹441 ಕೋಟಿ ವೆಚ್ಚದಲ್ಲಿ ಉನ್ನತೀಕರಣ. 268 ಎಂಎಲ್ಡಿ ತ್ಯಾಜ್ಯ ನೀರು ಸಂಸ್ಕರಣೆ.</p><p>*₹200 ಕೋಟಿ ವೆಚ್ಚದಲ್ಲಿ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>