ಕೃಷ್ಣ ಏತ ನೀರಾವರಿ ಯೋಜನೆಗೆ ₹ 3,771 ಕೋಟಿ, ಕಿತ್ತೂರು ಕರ್ನಾಟಕ ಭಾಗದಲ್ಲಿ ಒಂದು ಜವಳಿ ಪಾರ್ಕ್, ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ, ಕೇಂದ್ರ–ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಬೆಂಗಳೂರು–ಮುಂಬೈ ಎಕನಾಮಿಕ್ ಕಾರಿಡಾರ್ ಯೋಜನೆಯಡಿ ಧಾರವಾಡ ಬಳಿ 6 ಸಾವಿರ ಎಕರೆ ಜಮೀನಿನಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಒತ್ತು ನೀಡುವ ಸಂಬಂಧ ಕೈಗಾರಿಕಾ ಜಾಲಘಟಕ, ಹುಬ್ಬಳ್ಳಿಯಲ್ಲಿ ಕೌಶಲ ಮತ್ತು ನಾವೀನ್ಯತಾ ಕೇಂದ್ರ ಸ್ಥಾಪನೆ, ಬಸವನಬಾಗೇವಾಡಿಯಲ್ಲಿ ಬಸವ ಅಭಿವೃದ್ಧಿ ಪ್ರಾಧಿಕಾರ, ಸವದತ್ತಿಯ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ರಚನೆ, ಗದಗ ಜಿಲ್ಲೆಯ ಕಪ್ಪತಗುಡ್ಡದ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ, ಧಾರವಾಡ ವಾಲ್ಮಿ ಉನ್ನತೀಕರಣ ಮತ್ತು ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಯೋಜನೆಗೆ ಬಜೆಟ್ನಲ್ಲಿ ಆದ್ಯತೆ ಸಿಕ್ಕಿದೆ.