ರಾಜ್ಯದ ಅಭಿವೃದ್ಧಿಯ ಮುನ್ನೋಟ ನೀಡುವ 2024–25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ.
ಇದು ಅವರು ಮಂಡಿಸಿದ 15ನೇ ಬಜೆಟ್ ಆಗಿದ್ದು, ಬಜೆಟ್ನ ಪ್ರಮುಖಾಂಶಗಳು ಇಲ್ಲಿವೆ...
ಅನ್ನಭಾಗ್ಯ ಯೋಜನೆ: 2024ರ ಜನವರಿ ವರೆಗೆ 4.02 ಕೋಟಿ ಫಲಾನುಭವಿಗಳಿಗೆ ₹ 4,595 ಕೋಟಿ ವರ್ಗಾವಣೆ
80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆ ಬಾಗಿಲಿಗೆ ಆಹಾರ ಧಾನ್ಯ ತಲುಪಿಸುವ ಅನ್ನ–ಸುವಿಧಾ ಯೋಜನೆ ಜಾರಿ
2024–25ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ
ಕಟ್ಟಡ ಕಾರ್ಮಿಕರಿಗೆ ತಾತ್ಕಾಲಿಕ ವಸತಿ: 10 ಜಿಲ್ಲೆಗಳಲ್ಲಿ ₹ 100 ಕೋಟಿ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯ
ಬಳ್ಳಾರಿಯ ಸಂಡೂರಿನಯಲ್ಲಿ ಸ್ಕಿಲ್ ಅಕಾಡೆಮಿ
ನರೇಗಾ ಯೋಜನೆಯಡಿ 16 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ
50 ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ದೀಪ ಅಳವಡಿಕೆ
ಜೀತ ಪದ್ದತಿಯಿಂದ ಬಿಡುಗಡೆಗೊಂಡವರಿಗೆ ಮಾಸಿಕ ಪ್ರೋತ್ಸಾಹಧನ ₹ 2,000ಕ್ಕೆ ಏರಿಕೆ
ಇ.ಎಸ್.ಐ ಯೋಜನೆ: ₹ 311 ಕೋಟಿ ವೆಚ್ಚದಲ್ಲಿ ವಿವಿಧ ಸೇವೆ, ಸೌಲಭ್ಯ
ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ ₹ 400 ಕೋಟಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ ₹ 130 ಕೋಟಿ ಅನುದಾನ
ಜಲಸಂಪನ್ಮೂಲ
ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಪ್ರತ್ಯೇಕ ಯೋಜನಾ ವಿಭಾಗ
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥವಾಗಿ ನೀರು ಹರಿಸಿ ಚಾಲನೆಗೊಳಿಸಲಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅಡಿಯಲ್ಲಿ ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಭೂಸ್ವಾಧೀನ ಮತ್ತು ಪುನರ್ ವಸತಿ ಹಾಗೂ ಪುನರ್ ನಿರ್ಮಾಣಕ್ಕೆ ಆದ್ಯತೆ
ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು 2023-24ನೇ ಸಾಲಿನ ಬಜೆಟ್ನಲ್ಲಿ ₹ 5,300 ಕೋಟಿ ಅನುದಾನ ಘೋಷಿಸಿತ್ತು. ಆದರೆ ಈವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ.
ವಿವಿಧ ಜಿಲ್ಲೆಗಳಲ್ಲಿ ₹ 7,280 ಕೋಟಿ ವೆಚ್ಚದಲ್ಲಿ ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿ 97,698 ಹೆಕ್ಟರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವುದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.