ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Karnataka Budget 2024: ಆಯ್ದ ಜಿಲ್ಲೆಗಳಲ್ಲಿ ’ಕಿಸಾನ್‌ ಮಾಲ್‌’

Published 16 ಫೆಬ್ರುವರಿ 2024, 23:33 IST
Last Updated 16 ಫೆಬ್ರುವರಿ 2024, 23:33 IST
ಅಕ್ಷರ ಗಾತ್ರ

ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಹಲವು ಯೋಜನೆ ಮತ್ತು ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಅವುಗಳ ವಿವರ ಇಂತಿವೆ:

ತೋಟಗಾರಿಕೆ

  • ಆಯ್ದ ಜಿಲ್ಲೆಗಳಲ್ಲಿ ‘ಕಿಸಾನ್‌ ಮಾಲ್‌’ಗಳನ್ನು ಸ್ಥಾಪಿಸಲ ನಿರ್ಧರಿಸಲಾಗಿದೆ.  ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ ಮಾಹಿತಿಗಳೊಂದಿಗೆ ಬೇಸಾಯ ಪರಿಕರಗಳ ಮತ್ತು ಉತ್ಪನ್ನಗಳೂ ಈ ಮಾಲ್‌ಗಳಲ್ಲಿ ಲಭ್ಯ ಇರಲಿವೆ

  • ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಸುಸಜ್ಜಿತ ಅಂತರರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ

  • ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತು ಪ್ರಮಾಣ ಹೆಚ್ಚಿಸಲು ಕೊಯ್ಲೋತ್ತರ ನಿರ್ವಹಣಾ ಕೇಂದ್ರ

  • ರಾಜ್ಯದಲ್ಲಿ ಸಾಂಬಾರ ಬೆಳೆಗಾರರನ್ನು ಪ್ರೋತ್ಸಾಹಿಸಲು ಹಾಗೂ ಬೆಳೆಗಳ ರಫ್ತನ್ನು ಉತ್ತೇಜಿಸಲು ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ‘ಸ್ಪೈಸ್‌ ಪಾರ್ಕ್‌’

  • ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು 

ಪಶುಸಂಗೋಪನೆ

  • ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲು ₹10 ಕೋಟಿ ಮೀಸಲು

  • ಬಾಡಿಗೆ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ ₹10 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡಗಳು

ಮೀನುಗಾರಿಕೆ

  • ಹೊನ್ನಾವರ ತಾಲ್ಲೂಕಿನ ಮಂಕಿ, ಕಾಸರಕೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ. ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ, ಅಕ್ವಾ ಪಾರ್ಕ್‌ಗಳು

  • ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಹೊರಬಂದರು 

  • ₹7 ಕೋಟಿ ವೆಚ್ಚದಲ್ಲಿ ಪ್ರಥಮ ಸಮುದ್ರ ಆಂಬುಲೆನ್ಸ್‌ ಖರೀದಿ 

  • ನಬಾರ್ಡ್‌ ಸಹಯೋಗದಲ್ಲಿ ₹20 ಕೋಟಿ ವೆಚ್ಚದಲ್ಲಿ 16 ಮೀನುಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣ

  • ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಗೆ ₹6 ಕೋಟಿ 

  • ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ ಹಾಗೂ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಒಟ್ಟು ₹50 ಕೋಟಿ ವೆಚ್ಚದಲ್ಲಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ ತಲಾ ₹40 ಕೋಟಿ ವೆಚ್ಚದಲ್ಲಿ ಶೀತಲಗೃಹಗಳು

  • ರಾಯಚೂರಿನಲ್ಲಿ ₹25 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಒಣ ಮೆಣಸಿನಕಾಯಿ ಮಾರುಕಟ್ಟೆ

  • ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಳಗಾವಿಯ ಮಾರುಕಟ್ಟೆಗಳಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಸಿಎನ್‌ಜಿ ಗ್ಯಾಸ್‌ ಪ್ಲಾಂಟ್‌ ಸ್ಥಾಪನೆ, ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳಾಗಿ ಪರಿವರ್ತನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT