ಹೀಗೆ ಬದ್ಧ ವೆಚ್ಚಳ ಹೆಚ್ಚಳದಿಂದಾಗಿ, ರಾಜ್ಯ ಸರ್ಕಾರಕ್ಕೆ ಲಭ್ಯ ಇರುವ ಹಣಕಾಸು ಅವಕಾಶವು ಸೀಮಿತವಾಗಿದೆ. ಇದರಿಂದಾಗಿ ರಾಜ್ಯದ ಅಭಿವೃದ್ಧಿಯ ಆದ್ಯತೆಗಳಿಗೆ ಅನುಗುಣವಾಗಿ ಸಂಪನ್ಮೂಲಗಳನ್ನು ಒದಗಿಸಲು, ಸುಸ್ಥಿರ ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡಲು ಕಷ್ಟಕರವಾಗಿದೆ. ಸರ್ಕಾರಕ್ಕೆ ತನ್ನ ವೆಚ್ಚ ನಿರ್ವಹಣೆಗಿರುವ ವಿತ್ತೀಯ ಅವಕಾಶವು ಕ್ಷೀಣಿಸಲಿದೆ. ಸರ್ಕಾರದ ಸಂಪನ್ಮೂಲ ಹಂಚಿಕೆ ಹಾಗೂ ರಾಜ್ಯದ ಒಟ್ಟಾರೆ ವಿತ್ತೀಯ ಪರಿಸ್ಥಿತಿಯ ಮೇಲೆ ಇದು ನೇರವಾಗಿ ಪರಿಣಾಮ ಬೀರಲಿದೆ ಎಂದೂ ವಿವರಿಸಿದೆ.