2024–25ನೇ ಸಾಲಿನಲ್ಲಿ ಮೂರು ಲಕ್ಷ ಮನೆಗಳ ನಿರ್ಮಾಣದ ಘೋಷಣೆ ಮಾಡಲಾಗಿದೆ. ಆದರೆ, ಹತ್ತು ಹಲವು ವಸತಿ ಯೋಜನೆಗಳ ಮೂಲಕ ಅನುದಾನ ನೀಡಿದರೂ, ಫಲಾನುಭವಿಗಳ ಆಯ್ಕೆಯ ರಾಜಕೀಯದಿಂದಾಗಿ ನಿಜವಾದ ವಸತಿ ರಹಿತರಿಗೆ, ಬಡವರಿಗೆ ಸೂರು ಸಿಗುತ್ತಿಲ್ಲ. ಇಂದಿಗೂ ರಾಜ್ಯದಲ್ಲಿ 20 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ವಸತಿ ಇಲ್ಲ. ಕೆಲ ವಸತಿ ಯೋಜನೆಗಳನ್ನು ಫಲಾನುಭವಿಗಳ ವಂತಿಗೆ, ಬ್ಯಾಂಕ್ ಸಾಲ ಸೌಲಭ್ಯಗಳಿಂದ ಅನುಷ್ಠಾನ ಮಾಡಲಾಗುತ್ತಿದೆ. ಅದರ ಬದಲು ಸರ್ಕಾರವೇ ಪೂರ್ಣ ಹಣ ಒದಗಿಸಬೇಕು. ಗುಣಮಟ್ಟದ ಮನೆಗಳನ್ನು ಕಟ್ಟಿಕೊಡಬೇಕು.