<p><strong>ಬೆಂಗಳೂರು:</strong> ಇಂದು (ಶುಕ್ರವಾರ) 16ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿನ ಸಾರಿಗೆ ಸಂಪರ್ಕವನ್ನು ಸಧೃಡಗೊಳಿಸಲು ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ.</p><p>2024-25 ನೇ ಸಾಲಿನಲ್ಲಿ ನಾಲ್ಕು ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಒಟ್ಟಾರೆಯಾಗಿ 2,381 ಡೀಸೆಲ್ ಬಸ್ಗಳು ಹಾಗೂ 716 ವಿದ್ಯುತ್ ಚಾಲಿತ ಬಸ್ಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ತಿಳಿಸಿದ್ದಾರೆ.</p><p>2025–26ನೇ ಸಾಲಿನಲ್ಲಿ ಸ್ವಚ್ಚ ಪರಿಸರದ ಹಿತದೃಷ್ಟಿಯಿಂದ ವಿದ್ಯುತ್ ಚಾಲಿತ ಬಸ್ಗಳನ್ನು ಸೇರ್ಪಡೆ ಮಾಡಲು ಆದ್ಯತೆ ನೀಡಲಾಗುತ್ತಿದ್ದು, ಪಿಎಂ ಇ–ಡ್ರೈವ್, ಪಿಎಂ –ಇಬಸ್ ಸೇವಾ (PM E-DRIVE, PM-eBus Sewa) ಮತ್ತು ಬಾಹ್ಯ ನೆರವಿನ ಯೋಜನೆಯಡಿ ಒಟ್ಟಾರೆ 14,750 ಹೊಸ ವಿದ್ಯುತ್ ಚಾಲಿತ ಬಸ್ಗಳನ್ನು ಸೇರ್ಪಡೆ ಮಾಡುವ ಗುರಿ ಹೊಂದಿದ್ದು, ಇದರಲ್ಲಿ 9,000 ಬಸ್ಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರ್ಪಡೆ ಮಾಡಲು ಉದ್ದೇಶಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. </p><p>ರಾಜ್ಯದ ವಿವಿಧ ಸಾರಿಗೆ ನಿಗಮಗಳಲ್ಲಿ 1,000 ಹೊಸ ಡೀಸೆಲ್ ಬಸ್ಗಳನ್ನು ಜಿಸಿಸಿ (GCC) ಆಧಾರದಲ್ಲಿ ಸೇರ್ಪಡೆಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p><p>ಸಾರಿಗೆ ನಿಗಮಗಳಿಗೆ ಆರ್ಥಿಕ ಚೈತನ್ಯ ತುಂಬುವ ಉದ್ದೇಶದಿಂದ ₹2,000 ಕೋಟಿ ಸಾಲವನ್ನು ಹಣಕಾಸು ಸಂಸ್ಥೆಗಳಿಂದ ಪಡೆಯಲು ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರದ ಖಾತರಿ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.</p><p>ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹಾಗೂ ಸಾರಿಗೆ ನಿಗಮಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಸಕ್ತ ವರ್ಷ ಬೆಂಗಳೂರು ಪೂರ್ವ ಭಾಗದ ಕೆ.ಆರ್.ಪುರಂನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದಲ್ಲಿ ಹೊಸ ಸ್ಯಾಟಲೈಟ್ ಬಸ್ ನಿಲ್ದಾಣವನ್ನು ನಿರ್ಮಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.</p><p>ಮೈಸೂರಿನ ಬನ್ನಿಮಂಟಪದಲ್ಲಿ ಆತ್ಯಾಧುನಿಕ ಬಸ್ ನಿಲ್ದಾಣವನ್ನು ಒಟ್ಟಾರೆ ₹120 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.</p>.Budget 2025: ಚಿತ್ರಮಂದಿರ ದರ ₹200 ನಿಗದಿ, ₹500 ಕೋಟಿ ವೆಚ್ಚದಲ್ಲಿ ಚಿತ್ರನಗರಿ.Budget 2025: ಅರ್ಚಕರಿಗೆ ವಾರ್ಷಿಕ ತಸ್ತೀಕ್ ₹12,000 ಹೆಚ್ಚಿಸಿದ ಸಿದ್ದರಾಮಯ್ಯ.Budget: ಒಲಿಂಪಿಕ್ಸ್ಗೆ ತಯಾರಾಗುತ್ತಿರುವ ಕ್ರೀಡಾಪಟುಗಳಿಗೆ ತಲಾ ₹10 ಲಕ್ಷ.Karnataka Budget: ಬೆಂಗಳೂರು ಮೂಲಸೌಕರ್ಯ ಅನುದಾನ ₹7,000 ಕೋಟಿಗೆ ಹೆಚ್ಚಳ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇಂದು (ಶುಕ್ರವಾರ) 16ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿನ ಸಾರಿಗೆ ಸಂಪರ್ಕವನ್ನು ಸಧೃಡಗೊಳಿಸಲು ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ.</p><p>2024-25 ನೇ ಸಾಲಿನಲ್ಲಿ ನಾಲ್ಕು ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಒಟ್ಟಾರೆಯಾಗಿ 2,381 ಡೀಸೆಲ್ ಬಸ್ಗಳು ಹಾಗೂ 716 ವಿದ್ಯುತ್ ಚಾಲಿತ ಬಸ್ಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ತಿಳಿಸಿದ್ದಾರೆ.</p><p>2025–26ನೇ ಸಾಲಿನಲ್ಲಿ ಸ್ವಚ್ಚ ಪರಿಸರದ ಹಿತದೃಷ್ಟಿಯಿಂದ ವಿದ್ಯುತ್ ಚಾಲಿತ ಬಸ್ಗಳನ್ನು ಸೇರ್ಪಡೆ ಮಾಡಲು ಆದ್ಯತೆ ನೀಡಲಾಗುತ್ತಿದ್ದು, ಪಿಎಂ ಇ–ಡ್ರೈವ್, ಪಿಎಂ –ಇಬಸ್ ಸೇವಾ (PM E-DRIVE, PM-eBus Sewa) ಮತ್ತು ಬಾಹ್ಯ ನೆರವಿನ ಯೋಜನೆಯಡಿ ಒಟ್ಟಾರೆ 14,750 ಹೊಸ ವಿದ್ಯುತ್ ಚಾಲಿತ ಬಸ್ಗಳನ್ನು ಸೇರ್ಪಡೆ ಮಾಡುವ ಗುರಿ ಹೊಂದಿದ್ದು, ಇದರಲ್ಲಿ 9,000 ಬಸ್ಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರ್ಪಡೆ ಮಾಡಲು ಉದ್ದೇಶಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. </p><p>ರಾಜ್ಯದ ವಿವಿಧ ಸಾರಿಗೆ ನಿಗಮಗಳಲ್ಲಿ 1,000 ಹೊಸ ಡೀಸೆಲ್ ಬಸ್ಗಳನ್ನು ಜಿಸಿಸಿ (GCC) ಆಧಾರದಲ್ಲಿ ಸೇರ್ಪಡೆಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p><p>ಸಾರಿಗೆ ನಿಗಮಗಳಿಗೆ ಆರ್ಥಿಕ ಚೈತನ್ಯ ತುಂಬುವ ಉದ್ದೇಶದಿಂದ ₹2,000 ಕೋಟಿ ಸಾಲವನ್ನು ಹಣಕಾಸು ಸಂಸ್ಥೆಗಳಿಂದ ಪಡೆಯಲು ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರದ ಖಾತರಿ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.</p><p>ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹಾಗೂ ಸಾರಿಗೆ ನಿಗಮಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಸಕ್ತ ವರ್ಷ ಬೆಂಗಳೂರು ಪೂರ್ವ ಭಾಗದ ಕೆ.ಆರ್.ಪುರಂನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದಲ್ಲಿ ಹೊಸ ಸ್ಯಾಟಲೈಟ್ ಬಸ್ ನಿಲ್ದಾಣವನ್ನು ನಿರ್ಮಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.</p><p>ಮೈಸೂರಿನ ಬನ್ನಿಮಂಟಪದಲ್ಲಿ ಆತ್ಯಾಧುನಿಕ ಬಸ್ ನಿಲ್ದಾಣವನ್ನು ಒಟ್ಟಾರೆ ₹120 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.</p>.Budget 2025: ಚಿತ್ರಮಂದಿರ ದರ ₹200 ನಿಗದಿ, ₹500 ಕೋಟಿ ವೆಚ್ಚದಲ್ಲಿ ಚಿತ್ರನಗರಿ.Budget 2025: ಅರ್ಚಕರಿಗೆ ವಾರ್ಷಿಕ ತಸ್ತೀಕ್ ₹12,000 ಹೆಚ್ಚಿಸಿದ ಸಿದ್ದರಾಮಯ್ಯ.Budget: ಒಲಿಂಪಿಕ್ಸ್ಗೆ ತಯಾರಾಗುತ್ತಿರುವ ಕ್ರೀಡಾಪಟುಗಳಿಗೆ ತಲಾ ₹10 ಲಕ್ಷ.Karnataka Budget: ಬೆಂಗಳೂರು ಮೂಲಸೌಕರ್ಯ ಅನುದಾನ ₹7,000 ಕೋಟಿಗೆ ಹೆಚ್ಚಳ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>