<p><strong>ಬೆಂಗಳೂರು</strong>: ‘2025-26ನೇ ಸಾಲಿನ ಬಜೆಟ್ ರಾಜ್ಯದ ಸುಸ್ಥಿರ ಬೆಳವಣಿಗೆಗೆ ಪ್ರಾಯೋಗಿಕ ನೀಲನಕ್ಷೆಯಾಗಿದೆ’ ಎಂದು ಎಫ್ಕೆಸಿಸಿಐ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಹೇಳಿದ್ದಾರೆ.</p>.<p>ಮೆಟ್ರೊ ರೈಲನ್ನು ದೇವನಹಳ್ಳಿಯವರೆಗೆ ವಿಸ್ತರಿಸಿರುವುದರಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.</p>.<p>ಕೈಗಾರಿಕೆ ಮತ್ತು ವ್ಯಾಪಾರ ವಲಯಕ್ಕೆ ಉತ್ತೇಜನ ನೀಡಲು ಹೈಬ್ರಿಡ್ ವಾಹನಗಳಿಗೆ ತೆರಿಗೆ ವಿನಾಯಿತಿ, ವಿದ್ಯುತ್ಚಾಲಿತ ವಾಹನಗಳಿಗೆ ಪ್ರೋತ್ಸಾಹ, ಇ.ವಿ ಕ್ಲಸ್ಟರ್ ಸ್ಥಾಪನೆಗೆ ₹25 ಕೋಟಿ ನೀಡಿರುವುದು ಉತ್ತಮ ಬೆಳವಣಿಗೆ. ವಿವಿಧ ಜಿಲ್ಲೆಗಳಿಗೆ ಅನುದಾನ ಹಂಚಿಕೆಯೊಂದಿಗೆ ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಬಜೆಟ್ ಒತ್ತು ನೀಡಿದೆ. ಆದರೂ, ದೊಡ್ಡ ಪ್ರಮಾಣದ ಮೂಲಸೌಕರ್ಯ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ನಿಖರವಾದ ಯೋಜನೆ ಮತ್ತು ಸಮನ್ವಯದ ಅಗತ್ಯವಿದೆ ಎಂದು ಹೇಳಿದ್ದಾರೆ.</p>.<p>ಕರ್ನಾಟಕದ ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸಲು ಪ್ರತ್ಯೇಕ ಎಂಎಸ್ಎಂಇ ನೀತಿ ರೂಪಿಸುವ ಕ್ರಮವನ್ನು ಎಫ್ಕೆಸಿಸಿಐ ಸ್ವಾಗತಿಸುತ್ತದೆ. ಈ ನೀತಿ ರೂಪಿಸಲು ಸರ್ಕಾರಕ್ಕೆ ಒತ್ತಾಯಿಸಲಾಗಿತ್ತು. ಮಹಾಸಂಸ್ಥೆಯ ಮನವಿಗೆ ಸರ್ಕಾರ ಸ್ಪಂದಿಸಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘2025-26ನೇ ಸಾಲಿನ ಬಜೆಟ್ ರಾಜ್ಯದ ಸುಸ್ಥಿರ ಬೆಳವಣಿಗೆಗೆ ಪ್ರಾಯೋಗಿಕ ನೀಲನಕ್ಷೆಯಾಗಿದೆ’ ಎಂದು ಎಫ್ಕೆಸಿಸಿಐ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಹೇಳಿದ್ದಾರೆ.</p>.<p>ಮೆಟ್ರೊ ರೈಲನ್ನು ದೇವನಹಳ್ಳಿಯವರೆಗೆ ವಿಸ್ತರಿಸಿರುವುದರಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.</p>.<p>ಕೈಗಾರಿಕೆ ಮತ್ತು ವ್ಯಾಪಾರ ವಲಯಕ್ಕೆ ಉತ್ತೇಜನ ನೀಡಲು ಹೈಬ್ರಿಡ್ ವಾಹನಗಳಿಗೆ ತೆರಿಗೆ ವಿನಾಯಿತಿ, ವಿದ್ಯುತ್ಚಾಲಿತ ವಾಹನಗಳಿಗೆ ಪ್ರೋತ್ಸಾಹ, ಇ.ವಿ ಕ್ಲಸ್ಟರ್ ಸ್ಥಾಪನೆಗೆ ₹25 ಕೋಟಿ ನೀಡಿರುವುದು ಉತ್ತಮ ಬೆಳವಣಿಗೆ. ವಿವಿಧ ಜಿಲ್ಲೆಗಳಿಗೆ ಅನುದಾನ ಹಂಚಿಕೆಯೊಂದಿಗೆ ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಬಜೆಟ್ ಒತ್ತು ನೀಡಿದೆ. ಆದರೂ, ದೊಡ್ಡ ಪ್ರಮಾಣದ ಮೂಲಸೌಕರ್ಯ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ನಿಖರವಾದ ಯೋಜನೆ ಮತ್ತು ಸಮನ್ವಯದ ಅಗತ್ಯವಿದೆ ಎಂದು ಹೇಳಿದ್ದಾರೆ.</p>.<p>ಕರ್ನಾಟಕದ ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸಲು ಪ್ರತ್ಯೇಕ ಎಂಎಸ್ಎಂಇ ನೀತಿ ರೂಪಿಸುವ ಕ್ರಮವನ್ನು ಎಫ್ಕೆಸಿಸಿಐ ಸ್ವಾಗತಿಸುತ್ತದೆ. ಈ ನೀತಿ ರೂಪಿಸಲು ಸರ್ಕಾರಕ್ಕೆ ಒತ್ತಾಯಿಸಲಾಗಿತ್ತು. ಮಹಾಸಂಸ್ಥೆಯ ಮನವಿಗೆ ಸರ್ಕಾರ ಸ್ಪಂದಿಸಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>