<p><strong>ಬೆಂಗಳೂರು</strong>: ಮುಖ್ಯಮಂತ್ರಿಯ ಒಂದು ಲಕ್ಷ ಮನೆ ಯೋಜನೆಯ 12,153 ಫಲಾನುಭವಿಗಳ ವಂತಿಕೆಯ ಪಾಲಿನಲ್ಲಿ ₹1 ಲಕ್ಷವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಜೆಟ್ನಲ್ಲಿ ₹121 ಕೋಟಿ ಘೋಷಿಸಿದ್ದಾರೆ.</p>.<p>ಕರ್ನಾಟಕ ಗೃಹ ಮಂಡಳಿಯಿಂದ ಆನೇಕಲ್ ತಾಲ್ಲೂಕಿನ ಸೂರ್ಯ ನಗರದ 4ನೇ ಹಂತದ ಯೋಜನೆಯಡಿ 16,410 ನಿವೇಶನಗಳನ್ನು 2025–26ನೇ ಸಾಲಿನಲ್ಲಿ ಅಭಿವೃದ್ಧಿಪಡಿಸಲಾಗುವುದು. 50:50 ಅನುಪಾತದ ಪಾಲುದಾರಿಕೆಯಡಿ ಭೂ ಮಾಲೀಕರ ಪಾಲಿನ ನಿವೇಶನಗಳನ್ನು ನೀಡಿ, ಉಳಿದ ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.</p>.<p>ರಾಜೀವ್ ಗಾಂಧಿ ವಸತಿ ಯೋಜನೆಯಡಿಯ ಆಶ್ರಯ ಮನೆಗಳ (ಎಎಚ್ಪಿ) ಫಲಾನುಭವಿಗಳಿಗೆ ಸಾಲದ ಮೇಲಿನ ಬಡ್ಡಿ ಹೊರೆ ಕಡಿಮೆ ಮಾಡಲು ಬಡ್ಡಿ ಸಹಾಯಧನ ಯೋಜನೆ ಜಾರಿಗೊಳಿಸಲಾಗುತ್ತದೆ.</p>.<p>ಅಲ್ಲದೇ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ವಂತಿಕೆಯನ್ನು ಒಂದು ಲಕ್ಷ ರೂಪಾಯಿಗೆ ಇಳಿಕೆ ಮಾಡಿದೆ. ₹5 ಲಕ್ಷವನ್ನು ಫಲಾನುಭವಿ ಪರವಾಗಿ ಸರ್ಕಾರವೇ ಭರಿಸುತ್ತಿದೆ. ಈಗಾಗಲೇ 86,651ಮನೆಗಳು ಪೂರ್ಣಗೊಂಡಿದೆ.</p>.<p>ಸರ್ಕಾರದ ಭೂಮಿಯನ್ನು ಬಳಸಿ ಖಾಸಗಿ ಸಹಭಾಗಿತ್ವದೊಂದಿಗೆ ವಸತಿ ಘಟಕಗಳನ್ನು ನಿರ್ಮಿಸಿ, ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಹಂಚಿಕೆ ಮಾಡಲು ಯೋಜನೆ ರೂಪಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಖ್ಯಮಂತ್ರಿಯ ಒಂದು ಲಕ್ಷ ಮನೆ ಯೋಜನೆಯ 12,153 ಫಲಾನುಭವಿಗಳ ವಂತಿಕೆಯ ಪಾಲಿನಲ್ಲಿ ₹1 ಲಕ್ಷವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಜೆಟ್ನಲ್ಲಿ ₹121 ಕೋಟಿ ಘೋಷಿಸಿದ್ದಾರೆ.</p>.<p>ಕರ್ನಾಟಕ ಗೃಹ ಮಂಡಳಿಯಿಂದ ಆನೇಕಲ್ ತಾಲ್ಲೂಕಿನ ಸೂರ್ಯ ನಗರದ 4ನೇ ಹಂತದ ಯೋಜನೆಯಡಿ 16,410 ನಿವೇಶನಗಳನ್ನು 2025–26ನೇ ಸಾಲಿನಲ್ಲಿ ಅಭಿವೃದ್ಧಿಪಡಿಸಲಾಗುವುದು. 50:50 ಅನುಪಾತದ ಪಾಲುದಾರಿಕೆಯಡಿ ಭೂ ಮಾಲೀಕರ ಪಾಲಿನ ನಿವೇಶನಗಳನ್ನು ನೀಡಿ, ಉಳಿದ ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.</p>.<p>ರಾಜೀವ್ ಗಾಂಧಿ ವಸತಿ ಯೋಜನೆಯಡಿಯ ಆಶ್ರಯ ಮನೆಗಳ (ಎಎಚ್ಪಿ) ಫಲಾನುಭವಿಗಳಿಗೆ ಸಾಲದ ಮೇಲಿನ ಬಡ್ಡಿ ಹೊರೆ ಕಡಿಮೆ ಮಾಡಲು ಬಡ್ಡಿ ಸಹಾಯಧನ ಯೋಜನೆ ಜಾರಿಗೊಳಿಸಲಾಗುತ್ತದೆ.</p>.<p>ಅಲ್ಲದೇ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ವಂತಿಕೆಯನ್ನು ಒಂದು ಲಕ್ಷ ರೂಪಾಯಿಗೆ ಇಳಿಕೆ ಮಾಡಿದೆ. ₹5 ಲಕ್ಷವನ್ನು ಫಲಾನುಭವಿ ಪರವಾಗಿ ಸರ್ಕಾರವೇ ಭರಿಸುತ್ತಿದೆ. ಈಗಾಗಲೇ 86,651ಮನೆಗಳು ಪೂರ್ಣಗೊಂಡಿದೆ.</p>.<p>ಸರ್ಕಾರದ ಭೂಮಿಯನ್ನು ಬಳಸಿ ಖಾಸಗಿ ಸಹಭಾಗಿತ್ವದೊಂದಿಗೆ ವಸತಿ ಘಟಕಗಳನ್ನು ನಿರ್ಮಿಸಿ, ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಹಂಚಿಕೆ ಮಾಡಲು ಯೋಜನೆ ರೂಪಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>