<p><strong>ಬೆಂಗಳೂರು</strong>: ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಮಹಾತ್ಮ ಗಾಂಧಿ ನಗರ ವಿಕಾಸ್ 2.0 ಯೋಜನೆಗೆ ಬಜೆಟ್ನಲ್ಲಿ ₹2 ಸಾವಿರ ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಯುಐಡಿಎಫ್ ಅಡಿ ₹ 600 ಕೋಟಿ ಅನುದಾನ ಒದಗಿಸಲಾಗಿದೆ.</p>.<p>ನಗರೋತ್ಥಾನ 4ನೇ ಹಂತದ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು 2024-26ನೇ ಸಾಲಿಗೆ ₹ 500 ಕೋಟಿ ಒದಗಿಸಲಾಗುತ್ತದೆ. ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು, ಜಿಲ್ಲಾ ನಗರಾಭಿವೃದ್ಧಿ ಕೋಶಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಸೆಂಟರ್ ಫಾರ್ ಇ-ಗವರ್ನೆನ್ಸ್ ಇಲಾಖೆಯ ಸಹಯೋಗದೊಂದಿಗೆ ಕಚೇರಿಯ ಸುಗಮ ಆಡಳಿತಕ್ಕೆ ‘ಇ–ಆಫೀಸ್’ ವ್ಯವಸ್ಥೆ ಕಡ್ಡಾಯಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p>.<p>ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ರಾಮನಗರ ಮತ್ತು ಉಲ್ಲಾಳಕ್ಕೆ ₹705 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. </p>.<p>ಅಮೃತ್-2 ಯೋಜನೆಯಡಿ 233 ಕುಡಿಯುವ ನೀರು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಉದ್ದೇಶಿಸಿದೆ. ಇದರೊಂದಿಗೆ ₹142 ಕೋಟಿ ವೆಚ್ಚದಲ್ಲಿ ಶಿಕಾರಿಪುರ, ಸಾಗರ, ಐನಾಪುರ, ಎಂ.ಕೆ ಹುಬ್ಬಳ್ಳಿ, ಕುಡಚಿ, ಬೈಲಹೊಂಗಲ, ಶಹಾಪುರ ಹಾಗೂ ಶ್ರೀರಂಗಪಟ್ಟಣಕ್ಕೆ ಒಳಚರಂಡಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.</p>.<p>ರಾಜ್ಯದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುವ ಬೆಂಗಳೂರು ನಗರದ ಮೂಲಸೌಲಭ್ಯಗಳ ಅಭಿವೃದ್ಧಿಗೆ ಬಜೆಟ್ನಲ್ಲಿ ಸರ್ಕಾರ ಆದ್ಯತೆ ನೀಡಿದ್ದು, ಈವರೆಗೂ ₹ 3 ಸಾವಿರ ಕೋಟಿ ನೀಡುತ್ತಿದ್ದ ಅನುದಾನವನ್ನು ಈ ಬಾರಿ ₹ 7 ಸಾವಿರಕ್ಕೆ ಕೋಟಿಗೆ ಹೆಚ್ಚಿಸಿದೆ.</p>.<p>ಈ ಅನುದಾನ ಬಳಸಿಕೊಂಡು ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಲು ಹೊಸದಾಗಿ ವಿಶೇಷ ಉದ್ದೇಶಿತ ಸಂಸ್ಥೆ ಸ್ಥಾಪಿಸಲು ನಿರ್ಧರಿಸಿದೆ.</p>.<p>ಬೆಂಗಳೂರು ಮಹಾನಗರ ಪಾಲಿಕೆ ಕೈಗೊಂಡಿರುವ ವಿವಿಧ ಸುಧಾರಣಾ ಕ್ರಮಗಳಿಂದ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಗಣನೀಯ ಹೆಚ್ಚಳವಾಗಿದೆ. ತಂತ್ರಜ್ಞಾನ ಬಳಸಿ ಆನ್ಲೈನ್ ಮೂಲಕ ಇ–ಖಾತಾ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ. ರಾಜಸ್ವ ಸಂಗ್ರಹ ಹೆಚ್ಚು ಮಾಡುವುದರೊಂದಿಗೆ ನಾಗರಿಕ ಸೇವೆಗಳನ್ನು ಸರಳವಾಗಿ ನೀಡಲಾಗುತ್ತಿದೆ. ಈ ಎಲ್ಲಾ ಸುಧಾರಣಾ ಕ್ರಮಗಳಿಂದ 2024–25ನೇ ಸಾಲಿನಲ್ಲಿ ಈವರೆಗೂ ₹4,556 ಕೋಟಿ ಸಂಗ್ರಹ ಮಾಡಲಾಗಿದೆ. ಇದರೊಂದಿಗೆ ಪಾಲಿಕೆಯ ಜಾಹೀರಾತು ಉಪ–ವಿಧಿಗಳು 2025ರ ಅನುಷ್ಠಾನದಿಂದ ವರ್ಷಕ್ಕೆ ₹ 750 ಕೋಟಿ ಆದಾಯ ಸಿಗುವುದಾಗಿ ಅಂದಾಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಮಹಾತ್ಮ ಗಾಂಧಿ ನಗರ ವಿಕಾಸ್ 2.0 ಯೋಜನೆಗೆ ಬಜೆಟ್ನಲ್ಲಿ ₹2 ಸಾವಿರ ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಯುಐಡಿಎಫ್ ಅಡಿ ₹ 600 ಕೋಟಿ ಅನುದಾನ ಒದಗಿಸಲಾಗಿದೆ.</p>.<p>ನಗರೋತ್ಥಾನ 4ನೇ ಹಂತದ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು 2024-26ನೇ ಸಾಲಿಗೆ ₹ 500 ಕೋಟಿ ಒದಗಿಸಲಾಗುತ್ತದೆ. ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು, ಜಿಲ್ಲಾ ನಗರಾಭಿವೃದ್ಧಿ ಕೋಶಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಸೆಂಟರ್ ಫಾರ್ ಇ-ಗವರ್ನೆನ್ಸ್ ಇಲಾಖೆಯ ಸಹಯೋಗದೊಂದಿಗೆ ಕಚೇರಿಯ ಸುಗಮ ಆಡಳಿತಕ್ಕೆ ‘ಇ–ಆಫೀಸ್’ ವ್ಯವಸ್ಥೆ ಕಡ್ಡಾಯಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p>.<p>ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ರಾಮನಗರ ಮತ್ತು ಉಲ್ಲಾಳಕ್ಕೆ ₹705 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. </p>.<p>ಅಮೃತ್-2 ಯೋಜನೆಯಡಿ 233 ಕುಡಿಯುವ ನೀರು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಉದ್ದೇಶಿಸಿದೆ. ಇದರೊಂದಿಗೆ ₹142 ಕೋಟಿ ವೆಚ್ಚದಲ್ಲಿ ಶಿಕಾರಿಪುರ, ಸಾಗರ, ಐನಾಪುರ, ಎಂ.ಕೆ ಹುಬ್ಬಳ್ಳಿ, ಕುಡಚಿ, ಬೈಲಹೊಂಗಲ, ಶಹಾಪುರ ಹಾಗೂ ಶ್ರೀರಂಗಪಟ್ಟಣಕ್ಕೆ ಒಳಚರಂಡಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.</p>.<p>ರಾಜ್ಯದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುವ ಬೆಂಗಳೂರು ನಗರದ ಮೂಲಸೌಲಭ್ಯಗಳ ಅಭಿವೃದ್ಧಿಗೆ ಬಜೆಟ್ನಲ್ಲಿ ಸರ್ಕಾರ ಆದ್ಯತೆ ನೀಡಿದ್ದು, ಈವರೆಗೂ ₹ 3 ಸಾವಿರ ಕೋಟಿ ನೀಡುತ್ತಿದ್ದ ಅನುದಾನವನ್ನು ಈ ಬಾರಿ ₹ 7 ಸಾವಿರಕ್ಕೆ ಕೋಟಿಗೆ ಹೆಚ್ಚಿಸಿದೆ.</p>.<p>ಈ ಅನುದಾನ ಬಳಸಿಕೊಂಡು ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಲು ಹೊಸದಾಗಿ ವಿಶೇಷ ಉದ್ದೇಶಿತ ಸಂಸ್ಥೆ ಸ್ಥಾಪಿಸಲು ನಿರ್ಧರಿಸಿದೆ.</p>.<p>ಬೆಂಗಳೂರು ಮಹಾನಗರ ಪಾಲಿಕೆ ಕೈಗೊಂಡಿರುವ ವಿವಿಧ ಸುಧಾರಣಾ ಕ್ರಮಗಳಿಂದ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಗಣನೀಯ ಹೆಚ್ಚಳವಾಗಿದೆ. ತಂತ್ರಜ್ಞಾನ ಬಳಸಿ ಆನ್ಲೈನ್ ಮೂಲಕ ಇ–ಖಾತಾ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ. ರಾಜಸ್ವ ಸಂಗ್ರಹ ಹೆಚ್ಚು ಮಾಡುವುದರೊಂದಿಗೆ ನಾಗರಿಕ ಸೇವೆಗಳನ್ನು ಸರಳವಾಗಿ ನೀಡಲಾಗುತ್ತಿದೆ. ಈ ಎಲ್ಲಾ ಸುಧಾರಣಾ ಕ್ರಮಗಳಿಂದ 2024–25ನೇ ಸಾಲಿನಲ್ಲಿ ಈವರೆಗೂ ₹4,556 ಕೋಟಿ ಸಂಗ್ರಹ ಮಾಡಲಾಗಿದೆ. ಇದರೊಂದಿಗೆ ಪಾಲಿಕೆಯ ಜಾಹೀರಾತು ಉಪ–ವಿಧಿಗಳು 2025ರ ಅನುಷ್ಠಾನದಿಂದ ವರ್ಷಕ್ಕೆ ₹ 750 ಕೋಟಿ ಆದಾಯ ಸಿಗುವುದಾಗಿ ಅಂದಾಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>