<p><strong>ಬೆಂಗಳೂರು</strong>: ವಕ್ಫ್ ಸಂಸ್ಥೆಗಳ ದುರಸ್ತಿ, ಸಂರಕ್ಷಣೆಗೆ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಮೀಸಲಿಡುವ ಮೂಲಕ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಒತ್ತು ನೀಡಿದ್ದಾರೆ.</p>.<p>ಜತೆಗೆ, ದೇವಾಲಯಗಳ ಅರ್ಚಕರ ವಾರ್ಷಿಕ ತಸ್ತೀಕ್ ಮೊತ್ತವನ್ನೂ ಹೆಚ್ಚಿಸಿದ್ದಾರೆ. 328 ದೇವಸ್ಥಾನಗಳ ಆಸ್ತಿ ಉಳಿಸುವುದಾಗಿಯೂ ಬಜೆಟ್ನಲ್ಲಿ ಘೋಷಿಸಿದ್ದಾರೆ. ಜೈನ, ಬೌದ್ಧ, ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗೂ ಅನುದಾನ ಮೀಸಲಿಡಲಾಗಿದೆ. </p>.<p>ವಕ್ಫ್ ಸಂಸ್ಥೆಗಳ ದುರಸ್ತಿ, ಜೀರ್ಣೋದ್ದಾರ, ಖಬರಸ್ತಾನಗಳಲ್ಲಿ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಅವುಗಳ ಆಸ್ತಿಗಳ ಸಂರಕ್ಷಣೆಗೆ ₹150 ಕೋಟಿ ಅನುದಾನ ಮೀಸಲಿಡಲಾಗಿದೆ.</p>.<p>ಹಜ್ ಯಾತ್ರಿಕರು, ಅವರ ಸಂಬಂಧಿಕರಿಗೆ ಸೌಲಭ್ಯ ಕಲ್ಪಿಸಲು ಬೆಂಗಳೂರಿನ ಹಜ್ ಭವನದ ಬಳಿಯೇ ಹೆಚ್ಚುವರಿ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. ಗುರುದ್ವಾರಗಳಿಗೆ ಮೂಲಸೌಕರ್ಯ ಕಲ್ಪಿಸಲು ₹2 ಕೋಟಿ ಅನುದಾನ ಒದಗಿಸಲಾಗುತ್ತಿದೆ.</p>.<p>ಬೆಂಗಳೂರಿನಲ್ಲಿ ‘ಬೌದ್ಧ ಅಧ್ಯಯನ ಅಕಾಡೆಮಿ’ ಸ್ಥಾಪನೆ, ಮಹಾಬೋಧಿ ಅಧ್ಯಯನ ಕೇಂದ್ರದ ಹಳೆಯ ಗ್ರಂಥಾಲಯವನ್ನು ₹1 ಕೋಟಿ ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸಲು ಉದ್ದೇಶಿಸಲಾಗಿದೆ. ಜೈನ, ಬೌದ್ಧ, ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ₹100 ಕೋಟಿ ಅನುದಾನ ಘೋಷಿಸಲಾಗಿದೆ. ಕ್ರೈಸ್ತ ಸಮುದಾಯದ ಅಭಿವೃದ್ಧಿಗೂ ₹250 ಕೋಟಿ ಒದಗಿಸಲಾಗಿದೆ. </p>.<p>ಜೈನ ಅರ್ಚಕರು, ಸಿಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್ಗಳಿಗೆ ನೀಡುತ್ತಿರುವ ತಿಂಗಳ ಗೌರವಧನವನ್ನು ₹6 ಸಾವಿರಕ್ಕೆ ಏರಿಸಲಾಗಿದೆ. ಸಿಖ್ ಸಹಾಯಕ ಗ್ರಂಥಿಗಳು, ಮೋಝಿನ್ಗಳಿಗೆ ನೀಡುತ್ತಿರುವ ತಿಂಗಳ ಗೌರವಧನವನ್ನು ₹5 ಸಾವಿರಕ್ಕೆ ಏರಿಸಲಾಗಿದೆ. ಕಲಬುರಗಿಯ ಚಿತ್ತಾಪುರ ತಾಲ್ಲೂಕಿನಲ್ಲಿ ‘ಸನ್ನತಿ ಅಭಿವೃದ್ಧಿ ಪ್ರಾಧಿಕಾರ’ ರಚಿಸುವುದಾಗಿ ಘೋಷಿಸಲಾಗಿದೆ.</p>.<p>ಅಲ್ಪಸಂಖ್ಯಾತ ಸಮುದಾಯದವರಿಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆ ನಡೆಸಲು ಹೋಬಳಿ, ತಾಲ್ಲೂಕುಮಟ್ಟದಲ್ಲಿ ₹50 ಲಕ್ಷ ಅನುದಾನ ಒದಗಿಸಲಾಗಿದೆ. ‘ಭೂ–ವರಾಹ ಯೋಜನೆ’ ಅಡಿಯಲ್ಲಿ ದೇವಾಲಯಗಳ ಸ್ಥಿರಾಸ್ತಿ ದಾಖಲೀಕರಣಕ್ಕೆ ಒತ್ತು ನೀಡುವುದಾಗಿಯೂ ಘೋಷಿಸಲಾಗಿದೆ.</p>.<p>ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ 25,551 ಧಾರ್ಮಿಕ ಸಂಸ್ಥೆ/ದೇವಾಲಯಗಳ ಅರ್ಚಕರಿಗೆ ಪಾವತಿಸುತ್ತಿರುವ ವಾರ್ಷಿಕ ತಸ್ತೀಕ್ ಮೊತ್ತವನ್ನು ₹60 ಸಾವಿರದಿಂದ ₹72 ಸಾವಿರಕ್ಕೆ ಏರಿಸಲಾಗಿದೆ. ‘ಕರ್ನಾಟಕ ದೇವಾಲಯಗಳ ವಸತಿ ಕೋಶ’ ಸ್ಥಾಪಿಸಲು ನಿರ್ಧರಿಸಲಾಗಿದೆ. ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿಯೂ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಕ್ಫ್ ಸಂಸ್ಥೆಗಳ ದುರಸ್ತಿ, ಸಂರಕ್ಷಣೆಗೆ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಮೀಸಲಿಡುವ ಮೂಲಕ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಒತ್ತು ನೀಡಿದ್ದಾರೆ.</p>.<p>ಜತೆಗೆ, ದೇವಾಲಯಗಳ ಅರ್ಚಕರ ವಾರ್ಷಿಕ ತಸ್ತೀಕ್ ಮೊತ್ತವನ್ನೂ ಹೆಚ್ಚಿಸಿದ್ದಾರೆ. 328 ದೇವಸ್ಥಾನಗಳ ಆಸ್ತಿ ಉಳಿಸುವುದಾಗಿಯೂ ಬಜೆಟ್ನಲ್ಲಿ ಘೋಷಿಸಿದ್ದಾರೆ. ಜೈನ, ಬೌದ್ಧ, ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗೂ ಅನುದಾನ ಮೀಸಲಿಡಲಾಗಿದೆ. </p>.<p>ವಕ್ಫ್ ಸಂಸ್ಥೆಗಳ ದುರಸ್ತಿ, ಜೀರ್ಣೋದ್ದಾರ, ಖಬರಸ್ತಾನಗಳಲ್ಲಿ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಅವುಗಳ ಆಸ್ತಿಗಳ ಸಂರಕ್ಷಣೆಗೆ ₹150 ಕೋಟಿ ಅನುದಾನ ಮೀಸಲಿಡಲಾಗಿದೆ.</p>.<p>ಹಜ್ ಯಾತ್ರಿಕರು, ಅವರ ಸಂಬಂಧಿಕರಿಗೆ ಸೌಲಭ್ಯ ಕಲ್ಪಿಸಲು ಬೆಂಗಳೂರಿನ ಹಜ್ ಭವನದ ಬಳಿಯೇ ಹೆಚ್ಚುವರಿ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. ಗುರುದ್ವಾರಗಳಿಗೆ ಮೂಲಸೌಕರ್ಯ ಕಲ್ಪಿಸಲು ₹2 ಕೋಟಿ ಅನುದಾನ ಒದಗಿಸಲಾಗುತ್ತಿದೆ.</p>.<p>ಬೆಂಗಳೂರಿನಲ್ಲಿ ‘ಬೌದ್ಧ ಅಧ್ಯಯನ ಅಕಾಡೆಮಿ’ ಸ್ಥಾಪನೆ, ಮಹಾಬೋಧಿ ಅಧ್ಯಯನ ಕೇಂದ್ರದ ಹಳೆಯ ಗ್ರಂಥಾಲಯವನ್ನು ₹1 ಕೋಟಿ ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸಲು ಉದ್ದೇಶಿಸಲಾಗಿದೆ. ಜೈನ, ಬೌದ್ಧ, ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ₹100 ಕೋಟಿ ಅನುದಾನ ಘೋಷಿಸಲಾಗಿದೆ. ಕ್ರೈಸ್ತ ಸಮುದಾಯದ ಅಭಿವೃದ್ಧಿಗೂ ₹250 ಕೋಟಿ ಒದಗಿಸಲಾಗಿದೆ. </p>.<p>ಜೈನ ಅರ್ಚಕರು, ಸಿಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್ಗಳಿಗೆ ನೀಡುತ್ತಿರುವ ತಿಂಗಳ ಗೌರವಧನವನ್ನು ₹6 ಸಾವಿರಕ್ಕೆ ಏರಿಸಲಾಗಿದೆ. ಸಿಖ್ ಸಹಾಯಕ ಗ್ರಂಥಿಗಳು, ಮೋಝಿನ್ಗಳಿಗೆ ನೀಡುತ್ತಿರುವ ತಿಂಗಳ ಗೌರವಧನವನ್ನು ₹5 ಸಾವಿರಕ್ಕೆ ಏರಿಸಲಾಗಿದೆ. ಕಲಬುರಗಿಯ ಚಿತ್ತಾಪುರ ತಾಲ್ಲೂಕಿನಲ್ಲಿ ‘ಸನ್ನತಿ ಅಭಿವೃದ್ಧಿ ಪ್ರಾಧಿಕಾರ’ ರಚಿಸುವುದಾಗಿ ಘೋಷಿಸಲಾಗಿದೆ.</p>.<p>ಅಲ್ಪಸಂಖ್ಯಾತ ಸಮುದಾಯದವರಿಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆ ನಡೆಸಲು ಹೋಬಳಿ, ತಾಲ್ಲೂಕುಮಟ್ಟದಲ್ಲಿ ₹50 ಲಕ್ಷ ಅನುದಾನ ಒದಗಿಸಲಾಗಿದೆ. ‘ಭೂ–ವರಾಹ ಯೋಜನೆ’ ಅಡಿಯಲ್ಲಿ ದೇವಾಲಯಗಳ ಸ್ಥಿರಾಸ್ತಿ ದಾಖಲೀಕರಣಕ್ಕೆ ಒತ್ತು ನೀಡುವುದಾಗಿಯೂ ಘೋಷಿಸಲಾಗಿದೆ.</p>.<p>ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ 25,551 ಧಾರ್ಮಿಕ ಸಂಸ್ಥೆ/ದೇವಾಲಯಗಳ ಅರ್ಚಕರಿಗೆ ಪಾವತಿಸುತ್ತಿರುವ ವಾರ್ಷಿಕ ತಸ್ತೀಕ್ ಮೊತ್ತವನ್ನು ₹60 ಸಾವಿರದಿಂದ ₹72 ಸಾವಿರಕ್ಕೆ ಏರಿಸಲಾಗಿದೆ. ‘ಕರ್ನಾಟಕ ದೇವಾಲಯಗಳ ವಸತಿ ಕೋಶ’ ಸ್ಥಾಪಿಸಲು ನಿರ್ಧರಿಸಲಾಗಿದೆ. ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿಯೂ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>