<p><strong>ಬೆಂಗಳೂರು:</strong> ‘ಪಾನೀಯದಲ್ಲಿರುವ ಆಲ್ಕೋಹಾಲ್ ಆಧರಿಸಿ ಅಬಕಾರಿ ಸುಂಕ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಏ. 1ರಿಂದಲೇ ಕಾರ್ಯರೂಪಕ್ಕೆ ತರಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p><p>2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ‘ಅಬಕಾರಿ ಸುಂಕವು ಏಕರೂಪವಾಗಿರಲಿದ್ದು, ಹೆಚ್ಚುವರಿ ಅಬಕಾರಿ ಸುಂಕವನ್ನು ಮದ್ಯ ಉತ್ಪಾದನೆ ಆಚೆಗಿನ ದರ ಪಟ್ಟಿಗಳ ಆಧಾರದ ಮೇಲೆ ವಿಧಿಸಲಾಗುವುದು. ಸರ್ಕಾರ ಮದ್ಯದ ಬೆಲೆ ನಿರ್ಧರಿಸುವುದರಿಂದ ಮುಕ್ತಗೊಳಿಸಲಾಗುವುದು’ ಎಂದಿದ್ದಾರೆ.</p><p>ದರ ನಿಗದಿ ಸ್ಲಾಬ್ಗಳನ್ನು 16ರಿಂದ 8ಕ್ಕೆ ಇಳಿಸಲಾಗಿದೆ. ತೆರಿಗೆ ಸೋರಿಕೆಯನ್ನು ತಡೆಯಲು ಬ್ಲಾಕ್ಚೈನ್ ಡಿಜಿಟಲ್ ಟ್ರ್ಯಾಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗುವುದು. 2026-27ನೇ ಸಾಲಿಗೆ ಅಬಕಾರಿ ಇಲಾಖೆಗೆ ₹ 45,000 ಕೋಟಿಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.</p>.ಕರ್ನಾಟಕ ಬಜೆಟ್ 2026: ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ, 11 ತಾರಾಲಯ ಆರಂಭ.Karnataka Budget 2026| ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ; ಸುದೀರ್ಘ ಭಾಷಣ .ಬಜೆಟ್:‘ವಿಕ್ಟೋರಿಯಾ’ ಹೆಸರು ಬದಲಾವಣೆ, ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.ಕರ್ನಾಟಕ ಬಜೆಟ್ 2026: ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ, 11 ತಾರಾಲಯ ಆರಂಭ.<h4>ನೋಂದಣಿ ಮತ್ತು ಮುದ್ರಾಂಕದಿಂದ ₹29 ಸಾವಿರ ಕೋಟಿ ನಿರೀಕ್ಷೆ</h4><p>2026–27ನೇ ಸಾಲಿಗೆ ನೋಂದಣಿ ಮತ್ತ ಮುದ್ರಾಂಕ ಶುಲ್ಕದಿಂದ ₹29 ಸಾವಿರ ಕೋಟಿ ರಾಜಸ್ವ ಸಂಗ್ರಹದ ಗುರಿಯನ್ನು ಸರ್ಕಾರ ನಿಗದಿಪಡಿಸಿದೆ.</p><p>ಸಾರಿಗೆ ಇಲಾಖೆಯಲ್ಲಿ ಮೋಟಾರು ವಾಹನ ತೆರಿಗೆಯಿಂದ ₹15,500 ಕೋಟಿ ರಾಜಸ್ವ ಸಂಗ್ರಹದ ಗುರಿಯನ್ನು ಸರ್ಕಾರ ಹೊಂದಿದೆ.</p><p>ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಖನಿಜ ಗಣಿಗಾರಿಕೆ ಮೇಲೆ ವಿಧಿಸುವ ತೆರಿಗೆಯಿಂದ ₹3,000 ಕೋಟಿ ರಾಜಸ್ವ ಸಂಗ್ರಹಣೆ ಗುರಿ ನಿಗದಿ ಹಾಗೂ ಗಣಿಗಾರಿಕೆಯಿಂದ ಸ್ವೀಕೃತವಾಗುವ ಸ್ವಾಮ್ಯ ಶುಲ್ಕದಿಂದ ₹11,000 ಕೋಟಿ ರಾಜಸ್ವ ಸಂಗ್ರಹಣೆ ಗುರಿ ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.</p>.ಕರ್ನಾಟಕ ಬಜೆಟ್ 2026: ಮೈಸೂರು ರಾಜ್ಯದ 2ನೇ ಐಟಿ ರಾಜಧಾನಿ, AIಗೆ ಒತ್ತು.ಬಜೆಟ್ 2026: ಉರ್ದು ಮಾದರಿ ಶಾಲೆಗಳ ಅಭಿವೃದ್ಧಿಗೆ ₹400 ಕೋಟಿ ಹೆಚ್ಚುವರಿ ಅನುದಾನ.Karnataka Budget: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ.Karnataka Budget 2026: ಬಜೆಟ್ ಮುಖ್ಯಾಂಶಗಳು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪಾನೀಯದಲ್ಲಿರುವ ಆಲ್ಕೋಹಾಲ್ ಆಧರಿಸಿ ಅಬಕಾರಿ ಸುಂಕ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಏ. 1ರಿಂದಲೇ ಕಾರ್ಯರೂಪಕ್ಕೆ ತರಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p><p>2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ‘ಅಬಕಾರಿ ಸುಂಕವು ಏಕರೂಪವಾಗಿರಲಿದ್ದು, ಹೆಚ್ಚುವರಿ ಅಬಕಾರಿ ಸುಂಕವನ್ನು ಮದ್ಯ ಉತ್ಪಾದನೆ ಆಚೆಗಿನ ದರ ಪಟ್ಟಿಗಳ ಆಧಾರದ ಮೇಲೆ ವಿಧಿಸಲಾಗುವುದು. ಸರ್ಕಾರ ಮದ್ಯದ ಬೆಲೆ ನಿರ್ಧರಿಸುವುದರಿಂದ ಮುಕ್ತಗೊಳಿಸಲಾಗುವುದು’ ಎಂದಿದ್ದಾರೆ.</p><p>ದರ ನಿಗದಿ ಸ್ಲಾಬ್ಗಳನ್ನು 16ರಿಂದ 8ಕ್ಕೆ ಇಳಿಸಲಾಗಿದೆ. ತೆರಿಗೆ ಸೋರಿಕೆಯನ್ನು ತಡೆಯಲು ಬ್ಲಾಕ್ಚೈನ್ ಡಿಜಿಟಲ್ ಟ್ರ್ಯಾಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗುವುದು. 2026-27ನೇ ಸಾಲಿಗೆ ಅಬಕಾರಿ ಇಲಾಖೆಗೆ ₹ 45,000 ಕೋಟಿಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.</p>.ಕರ್ನಾಟಕ ಬಜೆಟ್ 2026: ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ, 11 ತಾರಾಲಯ ಆರಂಭ.Karnataka Budget 2026| ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ; ಸುದೀರ್ಘ ಭಾಷಣ .ಬಜೆಟ್:‘ವಿಕ್ಟೋರಿಯಾ’ ಹೆಸರು ಬದಲಾವಣೆ, ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.ಕರ್ನಾಟಕ ಬಜೆಟ್ 2026: ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ, 11 ತಾರಾಲಯ ಆರಂಭ.<h4>ನೋಂದಣಿ ಮತ್ತು ಮುದ್ರಾಂಕದಿಂದ ₹29 ಸಾವಿರ ಕೋಟಿ ನಿರೀಕ್ಷೆ</h4><p>2026–27ನೇ ಸಾಲಿಗೆ ನೋಂದಣಿ ಮತ್ತ ಮುದ್ರಾಂಕ ಶುಲ್ಕದಿಂದ ₹29 ಸಾವಿರ ಕೋಟಿ ರಾಜಸ್ವ ಸಂಗ್ರಹದ ಗುರಿಯನ್ನು ಸರ್ಕಾರ ನಿಗದಿಪಡಿಸಿದೆ.</p><p>ಸಾರಿಗೆ ಇಲಾಖೆಯಲ್ಲಿ ಮೋಟಾರು ವಾಹನ ತೆರಿಗೆಯಿಂದ ₹15,500 ಕೋಟಿ ರಾಜಸ್ವ ಸಂಗ್ರಹದ ಗುರಿಯನ್ನು ಸರ್ಕಾರ ಹೊಂದಿದೆ.</p><p>ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಖನಿಜ ಗಣಿಗಾರಿಕೆ ಮೇಲೆ ವಿಧಿಸುವ ತೆರಿಗೆಯಿಂದ ₹3,000 ಕೋಟಿ ರಾಜಸ್ವ ಸಂಗ್ರಹಣೆ ಗುರಿ ನಿಗದಿ ಹಾಗೂ ಗಣಿಗಾರಿಕೆಯಿಂದ ಸ್ವೀಕೃತವಾಗುವ ಸ್ವಾಮ್ಯ ಶುಲ್ಕದಿಂದ ₹11,000 ಕೋಟಿ ರಾಜಸ್ವ ಸಂಗ್ರಹಣೆ ಗುರಿ ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.</p>.ಕರ್ನಾಟಕ ಬಜೆಟ್ 2026: ಮೈಸೂರು ರಾಜ್ಯದ 2ನೇ ಐಟಿ ರಾಜಧಾನಿ, AIಗೆ ಒತ್ತು.ಬಜೆಟ್ 2026: ಉರ್ದು ಮಾದರಿ ಶಾಲೆಗಳ ಅಭಿವೃದ್ಧಿಗೆ ₹400 ಕೋಟಿ ಹೆಚ್ಚುವರಿ ಅನುದಾನ.Karnataka Budget: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ.Karnataka Budget 2026: ಬಜೆಟ್ ಮುಖ್ಯಾಂಶಗಳು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>