<p><strong>ಬೆಂಗಳೂರು</strong>: ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಮಡಿವಾಳ ಸಮುದಾಯ ಮತ್ತು ಸವಿತಾ ಸಮಾಜದವರನ್ನು ಪರಿಗಣಿಸಿ ಕೆಲ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. </p><p>ಬೆಂಗಳೂರು ಮತ್ತು ಮೈಸೂರು ನಗರದ ಧೋಬಿಘಾಟ್ಗಳಲ್ಲಿ ಮಡಿವಾಳ ಸಮಾಜದವರಿಗೆ ವಾಷಿಂಗ್ ಮೆಷಿನ್, ಡ್ರೈಯರ್ ಮತ್ತು ಐರನಿಂಗ್ ಮೆಷಿನ್ ಇತ್ಯಾದಿ ಸಾಮಗ್ರಿಗಳನ್ನು ಒಳಗೊಂಡಂತೆ ತಲಾ ₹75 ಲಕ್ಷ ಘಟಕ ವೆಚ್ಚದಲ್ಲಿ ಆಧುನಿಕ ಲಾಂಡ್ರಿಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.</p><p>ಅಲ್ಲದೇ, ಈ ಸಮುದಾಯದ ನಿರುದ್ಯೋಗಿ ಯುವಕ/ ಯುವತಿಯರು ಸ್ವಂತ ಉದ್ಯೋಗಕ್ಕಾಗಿ ಆಧುನಿಕ ಲಾಂಡ್ರಿಗಳನ್ನು ಸ್ಥಾಪಿಸಲು ₹5 ಲಕ್ಷದ ವರೆಗೆ ಶೇ.4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಎಂದಿದ್ದಾರೆ.</p><p>ಸವಿತಾ ಸಮಾಜದವರು ಸಲೂನ್ಗಳನ್ನು ತೆರೆಯಲು ಶೇ.4 ರಷ್ಟು ಬಡ್ಡಿದರದಲ್ಲಿ ₹10 ಲಕ್ಷದ ವರೆಗೆ ಸಾಲ ಮತ್ತು ಸಹಾಯಧನವನ್ನು ಮಂಜೂರು ಮಾಡುವುದಾಗಿ ತಿಳಿಸಿದ್ದಾರೆ.</p><p><strong>ಹಿಂದುಳಿತ ವರ್ಗಕ್ಕೆ ಘೋಷಿಸಿದ ಇತರ ಯೋಜನೆಗಳು:</strong></p><ol><li><p>ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.</p></li><li><p>ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ₹30 ಕೋಟಿ ಘೋಷಣೆ. ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು ₹50 ಕೋಟಿ.</p></li><li><p>ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ₹5 ಕೋಟಿ ಘಟಕ ವೆಚ್ಚದಲ್ಲಿ 50<strong> </strong>ಸ್ವಂತ ಕಟ್ಟಡಗಳ ನಿರ್ಮಾಣ.</p></li><li><p>ಹಿಂದುಳಿದ ವರ್ಗಗಳ 250 ಇಂಜಿನಿಯರಿಂಗ್ ಪದವೀಧರರಿಗೆ ಅವರ ತಾಂತ್ರಿಕ ಕೌಶಲ್ಯವನ್ನು ಉತ್ಕೃಷ್ಟಗೊಳಿಸಲು ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ ಎಐಟಿ/ಐಐಟಿ/ಐಐಎಮ್ ಗಳಲ್ಲಿ ಎಐ ತರಬೇತಿ ಪಡೆಯಲು ತಲಾ ₹2 ಲಕ್ಷ ಸಾಲ.</p></li><li><p>ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನ, ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಮತ್ತು ಈ ವರ್ಗಗಳ ಅಭಿವೃದ್ಧಿ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಒಂದು ಉನ್ನತ ಮಟ್ಟದ ಸಮಿತಿಯನ್ನು ರಚನೆ.</p></li><li><p>ಹಿಂದುಳಿದ ವರ್ಗಗಳ ಪ್ರವರ್ಗ-1ರಡಿ ಬರುವ 46 ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡಲು ಉತ್ತೇಜಿಸುವ ಸಲುವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ನೀಡುವ ಸೌಲಭ್ಯಗಳನ್ನು ವಿಸ್ತರಿಸಲಾಗುವುದು.</p></li></ol>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಮಡಿವಾಳ ಸಮುದಾಯ ಮತ್ತು ಸವಿತಾ ಸಮಾಜದವರನ್ನು ಪರಿಗಣಿಸಿ ಕೆಲ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. </p><p>ಬೆಂಗಳೂರು ಮತ್ತು ಮೈಸೂರು ನಗರದ ಧೋಬಿಘಾಟ್ಗಳಲ್ಲಿ ಮಡಿವಾಳ ಸಮಾಜದವರಿಗೆ ವಾಷಿಂಗ್ ಮೆಷಿನ್, ಡ್ರೈಯರ್ ಮತ್ತು ಐರನಿಂಗ್ ಮೆಷಿನ್ ಇತ್ಯಾದಿ ಸಾಮಗ್ರಿಗಳನ್ನು ಒಳಗೊಂಡಂತೆ ತಲಾ ₹75 ಲಕ್ಷ ಘಟಕ ವೆಚ್ಚದಲ್ಲಿ ಆಧುನಿಕ ಲಾಂಡ್ರಿಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.</p><p>ಅಲ್ಲದೇ, ಈ ಸಮುದಾಯದ ನಿರುದ್ಯೋಗಿ ಯುವಕ/ ಯುವತಿಯರು ಸ್ವಂತ ಉದ್ಯೋಗಕ್ಕಾಗಿ ಆಧುನಿಕ ಲಾಂಡ್ರಿಗಳನ್ನು ಸ್ಥಾಪಿಸಲು ₹5 ಲಕ್ಷದ ವರೆಗೆ ಶೇ.4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಎಂದಿದ್ದಾರೆ.</p><p>ಸವಿತಾ ಸಮಾಜದವರು ಸಲೂನ್ಗಳನ್ನು ತೆರೆಯಲು ಶೇ.4 ರಷ್ಟು ಬಡ್ಡಿದರದಲ್ಲಿ ₹10 ಲಕ್ಷದ ವರೆಗೆ ಸಾಲ ಮತ್ತು ಸಹಾಯಧನವನ್ನು ಮಂಜೂರು ಮಾಡುವುದಾಗಿ ತಿಳಿಸಿದ್ದಾರೆ.</p><p><strong>ಹಿಂದುಳಿತ ವರ್ಗಕ್ಕೆ ಘೋಷಿಸಿದ ಇತರ ಯೋಜನೆಗಳು:</strong></p><ol><li><p>ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.</p></li><li><p>ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ₹30 ಕೋಟಿ ಘೋಷಣೆ. ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು ₹50 ಕೋಟಿ.</p></li><li><p>ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ₹5 ಕೋಟಿ ಘಟಕ ವೆಚ್ಚದಲ್ಲಿ 50<strong> </strong>ಸ್ವಂತ ಕಟ್ಟಡಗಳ ನಿರ್ಮಾಣ.</p></li><li><p>ಹಿಂದುಳಿದ ವರ್ಗಗಳ 250 ಇಂಜಿನಿಯರಿಂಗ್ ಪದವೀಧರರಿಗೆ ಅವರ ತಾಂತ್ರಿಕ ಕೌಶಲ್ಯವನ್ನು ಉತ್ಕೃಷ್ಟಗೊಳಿಸಲು ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ ಎಐಟಿ/ಐಐಟಿ/ಐಐಎಮ್ ಗಳಲ್ಲಿ ಎಐ ತರಬೇತಿ ಪಡೆಯಲು ತಲಾ ₹2 ಲಕ್ಷ ಸಾಲ.</p></li><li><p>ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನ, ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಮತ್ತು ಈ ವರ್ಗಗಳ ಅಭಿವೃದ್ಧಿ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಒಂದು ಉನ್ನತ ಮಟ್ಟದ ಸಮಿತಿಯನ್ನು ರಚನೆ.</p></li><li><p>ಹಿಂದುಳಿದ ವರ್ಗಗಳ ಪ್ರವರ್ಗ-1ರಡಿ ಬರುವ 46 ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡಲು ಉತ್ತೇಜಿಸುವ ಸಲುವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ನೀಡುವ ಸೌಲಭ್ಯಗಳನ್ನು ವಿಸ್ತರಿಸಲಾಗುವುದು.</p></li></ol>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>