ಚಿತ್ರದುರ್ಗದ ಮುರುಘಾ ಮಠದ ಆವರಣದಲ್ಲಿ 325 ಅಡಿ ಎತ್ತರದ ‘ಜಗಜ್ಯೋತಿ ಬಸವೇಶ್ವರ’ ಅವರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ₹ 20 ಕೋಟಿ ಅನುದಾನ, ಹಾವೇರಿಯಲ್ಲಿರುವ ಸಂತ ಶಿಶುನಾಳ ಶರೀಫರ ಸಮಾಧಿ ಅಭಿವೃದ್ಧಿಗೆ ₹ 5 ಕೋಟಿ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸ ಹಾಗೂ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಹುಟ್ಟೂರಾದ ಹಾಸನ ಜಿಲ್ಲೆಯ ಸಂತೆಶಿವರ ಗ್ರಾಮದ ಅಭಿವೃದ್ಧಿಗೆ ತಲಾ ₹ 5 ಕೋಟಿ ಒದಗಿಸಲಾಗಿದೆ. ವೀರ ಮದಕರಿ ನಾಯಕ ಹಾಗೂ ಒನಕೆ ಓಬವ್ವ ಅವರನ್ನು ನೆನಪಿಸುವ ಚಿತ್ರದುರ್ಗವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದಾರೆ.