<p><strong>ಬೆಂಗಳೂರು</strong>: 2026ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿದ್ಧರಾಮಯ್ಯ ಅವರು ಶುಕ್ರವಾರ ಮಂಡಿಸಿದ್ದಾರೆ. ಬೆಂಗಳೂರಿಗೆ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. </p><p>ಬೆಂಗಳೂರಿಗೆ ಏನೆಲ್ಲಾ ಸಿಕ್ಕಿದೆ ಎಂಬುದನ್ನು ನೋಡುವುದಾದರೆ;</p><p>* ಬೆಂಗಳೂರಿನ ನಾಗರಿಕರಿಗೆ ಪಾರದರ್ಶಕ, ಜನಸ್ನೇಹಿ, ಸಹಭಾಗಿತ್ವವುಳ್ಳ ತುರ್ತು ಸ್ಪಂದನೆಯ ಆಡಳಿತವನ್ನು ಒದಗಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಮಹಾನಗರ ಪಾಲಿಕೆಗಳನ್ನು ಸ್ಥಾಪಿಸಲಾಗಿದೆ.</p><p>* 2025-26ನೇ ಸಾಲಿನಲ್ಲಿ ಬೆಂಗಳೂರು ಅಭಿವೃದ್ಧಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ₹3,000 ಕೋಟಿ ಅನುದಾನವನ್ನು ₹7,000 ಕೋಟಿಗೆ ಹೆಚ್ಚಳ. </p><p>* ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯ ಗೋಪಾಲಪುರ ಕೆರೆಯಿಂದ 119 ಕೆರೆಗಳಿಗೆ ಏತ ನೀರಾವರಿ ಯೋಜನೆ.</p>.ಮಡಿವಾಳರಿಗೆ ಬೆಂಗಳೂರು, ಮೈಸೂರಿನಲ್ಲಿ ಲಾಂಡ್ರಿ;ಸಲೂನ್ಗಾಗಿ ಸವಿತಾ ಸಮಾಜಕ್ಕೆ ಸಾಲ.ಈ ಸಾರಿಯ ರಾಜ್ಯ ಬಜೆಟ್ನಲ್ಲಿ ಹಾವೇರಿ ಜಿಲ್ಲೆಗೆ ಸಿಕ್ಕಿದ್ದೇನು? ಸಿಗಲಾರದ್ದೇನು?. <p>* ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಕೆರೆಯಿಂದ ಪೋಷಕ ಕಾಲುವೆ ಅಭಿವೃದ್ಧಿ.</p><p>* ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ₹1,255 ಕೋಟಿ ಮೊತ್ತದ ವಾರ್ಡ್ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಹೊತ್ತು.</p><p>* ಬೆಂಗಳೂರು ನಗರ ಪಾಲಿಕೆಗಳ ಸ್ವಂತ ಸಂಪನ್ಮೂಲದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 175 ಜಂಕ್ಷನ್ಗಳ ಸೌಂದರ್ಯೀಕರಣ, 500 ಕಿ.ಮೀ. ಉದ್ದದ ಪಾದಚಾರಿ ಮಾರ್ಗವನ್ನು ಮೇಲ್ದರ್ಜೆಗೇರಿಸಲು ಮತ್ತು 100 ಸ್ಕೈ ವಾಕ್ಗಳ ನಿರ್ಮಾಣ. </p><p>* ʻನಮ್ಮ ಮೆಟ್ರೊ’ ದೇಶದ ಎರಡನೇ ಅತಿದೊಡ್ಡ ಮೆಟ್ರೊ ರೈಲು ಜಾಲವಾಗಿದೆ. ಪ್ರಸ್ತುತ ಮೆಟ್ರೊ ಕಾರ್ಯಾಚರಣೆಯು 96 ಕಿ.ಮೀ. ಆಗಿದ್ದು, ಇದರಿಂದ ಪ್ರತಿ ದಿನ 10 ಲಕ್ಷ ಪ್ರಯಾಣಿಕರಿಗೆ ಪ್ರಯೋಜನವಾಗಿದೆ. ಇಲ್ಲಿಯವರೆಗೂ ವೆಚ್ಚವಾಗಿರುವ ₹67,460 ಕೋಟಿಗಳಲ್ಲಿ ರಾಜ್ಯ ಸರ್ಕಾರದ ಪಾಲು ₹59,376 ಕೋಟಿ ಆಗಿದೆ. ಕೇಂದ್ರ ಸರ್ಕಾರದ ಪಾಲು ₹8,084 ಕೋಟಿ ಆಗಿದೆ. ಇದು ರಾಜ್ಯ ಸರ್ಕಾರದ ಪಾಲಿನ ಶೇ 88ರಷ್ಟಿದ್ದರೆ, ಕೇಂದ್ರದ ಪಾಲು ಕೇವಲ ಶೇ12 ರಷ್ಟಿದೆ.</p>.ಇನ್ನೂ ಕೈಗೂಡದ ‘ಮಹದಾಯಿ’ ಯೋಜನೆ: ಬಜೆಟ್ನಲ್ಲಿ ಬೇಸರ ಹೊರಹಾಕಿದ ಸಿ.ಎಂ.ಕರ್ನಾಟಕವನ್ನು 15 ವರ್ಷ ಹಿಂದಕ್ಕೆ ತಳ್ಳುವ ಸಿದ್ದರಾಮಯ್ಯ ಬಜೆಟ್: ಬೊಮ್ಮಾಯಿ ಟೀಕೆ. <p>* 2026–27ರ ಹಣಕಾಸು ವರ್ಷದಲ್ಲಿ ಒಟ್ಟು 41 ಕಿ.ಮೀ. ಹೆಚ್ಚುವರಿ ಮೆಟ್ರೊ ಮಾರ್ಗಗಳನ್ನು ಪೂರ್ಣಗೊಳಿಸಲು ಯೋಜಿಸಲಾಗಿದೆ. ಇದರಿಂದ ದಿನಕ್ಕೆ 15 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ.</p><p>* ಬೆಂಗಳೂರು ನಗರದ ದಟ್ಟಣೆಯನ್ನು ಕಡಿಮೆ ಮಾಡಲು ನೆಲಮಂಗಲ-ತಾವರೆಕೆರೆ-ಬಿಡದಿ ಮಧ್ಯಂತರ ವರ್ತುಲ ರಸ್ತೆಯನ್ನು ನಿರ್ಮಿಸಲಾಗುವುದು.</p><p>* ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಹೆಬ್ಬಾಳ ಜಂಕ್ಷನ್ನಿಂದ ಮೇಖ್ರಿ ಸರ್ಕಲ್ವರೆಗೆ ಸುರಂಗ ಮಾರ್ಗ ಹಾಗೂ ಮೇಲು ಸೇತುವೆ ರಸ್ತೆಯನ್ನು ₹2,250 ಕೋಟಿ ವೆಚ್ಚದಲ್ಲಿ ನಿರ್ಮಿಸಲಿದೆ.</p><p>* ಬೆಂಗಳೂರು ನಗರದ ಸುಮಾರು 1.40 ಕೋಟಿ ಜನರಿಗೆ ಕುಡಿಯುವ ನೀರು ಪೂರೈಸಲು ಕಾವೇರಿ ನೀರು ಸರಬರಾಜು ಯೋಜನೆಯಡಿ 1 ರಿಂದ 5ನೇ ಹಂತಗಳ ಒಟ್ಟು 2,225 ಎಂಎಲ್ಡಿ ನೀರು ಪೂರೈಸಲಾಗುತ್ತಿದೆ. ಇದೀಗ ಜಿಐಸಿಎ ನೆರವಿನಿಂದ ₹6,939 ಕೋಟಿ ವೆಚ್ಚದಲ್ಲಿ ಹೆಚ್ಚುವರಿಯಾಗಿ ಆರು ಟಿಎಂಸಿ. ನೀರನ್ನು ಪೂರೈಸಲು ಕಾವೇರಿ 6ನೇ ಹಂತದ ಯೋಜನೆಯನ್ನು ನಮ್ಮ ಸರ್ಕಾರದಿಂದ ರೂಪಿಸಲಾಗಿದೆ ಎಂದು ಸಿದ್ಧರಾಮಯ್ಯ ಬಜೆಟ್ನಲ್ಲಿ ತಿಳಿಸಿದ್ದಾರೆ.</p>.ಈ ಸಾರಿಯ ರಾಜ್ಯ ಬಜೆಟ್ನಲ್ಲಿ ಬೆಳಗಾವಿ ಜಿಲ್ಲೆಗೆ ಸಿಕ್ಕದ್ದೇನು?.ಒಳಮೀಸಲಾತಿ: ಪರಿಷ್ಕೃತ ರೋಸ್ಟರ್ ಬಿಂದು ಗುರುತಿಸಿ ನೇಮಕಾತಿ ಆರಂಭಿಸಲು ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 2026ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿದ್ಧರಾಮಯ್ಯ ಅವರು ಶುಕ್ರವಾರ ಮಂಡಿಸಿದ್ದಾರೆ. ಬೆಂಗಳೂರಿಗೆ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. </p><p>ಬೆಂಗಳೂರಿಗೆ ಏನೆಲ್ಲಾ ಸಿಕ್ಕಿದೆ ಎಂಬುದನ್ನು ನೋಡುವುದಾದರೆ;</p><p>* ಬೆಂಗಳೂರಿನ ನಾಗರಿಕರಿಗೆ ಪಾರದರ್ಶಕ, ಜನಸ್ನೇಹಿ, ಸಹಭಾಗಿತ್ವವುಳ್ಳ ತುರ್ತು ಸ್ಪಂದನೆಯ ಆಡಳಿತವನ್ನು ಒದಗಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಮಹಾನಗರ ಪಾಲಿಕೆಗಳನ್ನು ಸ್ಥಾಪಿಸಲಾಗಿದೆ.</p><p>* 2025-26ನೇ ಸಾಲಿನಲ್ಲಿ ಬೆಂಗಳೂರು ಅಭಿವೃದ್ಧಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ₹3,000 ಕೋಟಿ ಅನುದಾನವನ್ನು ₹7,000 ಕೋಟಿಗೆ ಹೆಚ್ಚಳ. </p><p>* ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯ ಗೋಪಾಲಪುರ ಕೆರೆಯಿಂದ 119 ಕೆರೆಗಳಿಗೆ ಏತ ನೀರಾವರಿ ಯೋಜನೆ.</p>.ಮಡಿವಾಳರಿಗೆ ಬೆಂಗಳೂರು, ಮೈಸೂರಿನಲ್ಲಿ ಲಾಂಡ್ರಿ;ಸಲೂನ್ಗಾಗಿ ಸವಿತಾ ಸಮಾಜಕ್ಕೆ ಸಾಲ.ಈ ಸಾರಿಯ ರಾಜ್ಯ ಬಜೆಟ್ನಲ್ಲಿ ಹಾವೇರಿ ಜಿಲ್ಲೆಗೆ ಸಿಕ್ಕಿದ್ದೇನು? ಸಿಗಲಾರದ್ದೇನು?. <p>* ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಕೆರೆಯಿಂದ ಪೋಷಕ ಕಾಲುವೆ ಅಭಿವೃದ್ಧಿ.</p><p>* ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ₹1,255 ಕೋಟಿ ಮೊತ್ತದ ವಾರ್ಡ್ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಹೊತ್ತು.</p><p>* ಬೆಂಗಳೂರು ನಗರ ಪಾಲಿಕೆಗಳ ಸ್ವಂತ ಸಂಪನ್ಮೂಲದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 175 ಜಂಕ್ಷನ್ಗಳ ಸೌಂದರ್ಯೀಕರಣ, 500 ಕಿ.ಮೀ. ಉದ್ದದ ಪಾದಚಾರಿ ಮಾರ್ಗವನ್ನು ಮೇಲ್ದರ್ಜೆಗೇರಿಸಲು ಮತ್ತು 100 ಸ್ಕೈ ವಾಕ್ಗಳ ನಿರ್ಮಾಣ. </p><p>* ʻನಮ್ಮ ಮೆಟ್ರೊ’ ದೇಶದ ಎರಡನೇ ಅತಿದೊಡ್ಡ ಮೆಟ್ರೊ ರೈಲು ಜಾಲವಾಗಿದೆ. ಪ್ರಸ್ತುತ ಮೆಟ್ರೊ ಕಾರ್ಯಾಚರಣೆಯು 96 ಕಿ.ಮೀ. ಆಗಿದ್ದು, ಇದರಿಂದ ಪ್ರತಿ ದಿನ 10 ಲಕ್ಷ ಪ್ರಯಾಣಿಕರಿಗೆ ಪ್ರಯೋಜನವಾಗಿದೆ. ಇಲ್ಲಿಯವರೆಗೂ ವೆಚ್ಚವಾಗಿರುವ ₹67,460 ಕೋಟಿಗಳಲ್ಲಿ ರಾಜ್ಯ ಸರ್ಕಾರದ ಪಾಲು ₹59,376 ಕೋಟಿ ಆಗಿದೆ. ಕೇಂದ್ರ ಸರ್ಕಾರದ ಪಾಲು ₹8,084 ಕೋಟಿ ಆಗಿದೆ. ಇದು ರಾಜ್ಯ ಸರ್ಕಾರದ ಪಾಲಿನ ಶೇ 88ರಷ್ಟಿದ್ದರೆ, ಕೇಂದ್ರದ ಪಾಲು ಕೇವಲ ಶೇ12 ರಷ್ಟಿದೆ.</p>.ಇನ್ನೂ ಕೈಗೂಡದ ‘ಮಹದಾಯಿ’ ಯೋಜನೆ: ಬಜೆಟ್ನಲ್ಲಿ ಬೇಸರ ಹೊರಹಾಕಿದ ಸಿ.ಎಂ.ಕರ್ನಾಟಕವನ್ನು 15 ವರ್ಷ ಹಿಂದಕ್ಕೆ ತಳ್ಳುವ ಸಿದ್ದರಾಮಯ್ಯ ಬಜೆಟ್: ಬೊಮ್ಮಾಯಿ ಟೀಕೆ. <p>* 2026–27ರ ಹಣಕಾಸು ವರ್ಷದಲ್ಲಿ ಒಟ್ಟು 41 ಕಿ.ಮೀ. ಹೆಚ್ಚುವರಿ ಮೆಟ್ರೊ ಮಾರ್ಗಗಳನ್ನು ಪೂರ್ಣಗೊಳಿಸಲು ಯೋಜಿಸಲಾಗಿದೆ. ಇದರಿಂದ ದಿನಕ್ಕೆ 15 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ.</p><p>* ಬೆಂಗಳೂರು ನಗರದ ದಟ್ಟಣೆಯನ್ನು ಕಡಿಮೆ ಮಾಡಲು ನೆಲಮಂಗಲ-ತಾವರೆಕೆರೆ-ಬಿಡದಿ ಮಧ್ಯಂತರ ವರ್ತುಲ ರಸ್ತೆಯನ್ನು ನಿರ್ಮಿಸಲಾಗುವುದು.</p><p>* ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಹೆಬ್ಬಾಳ ಜಂಕ್ಷನ್ನಿಂದ ಮೇಖ್ರಿ ಸರ್ಕಲ್ವರೆಗೆ ಸುರಂಗ ಮಾರ್ಗ ಹಾಗೂ ಮೇಲು ಸೇತುವೆ ರಸ್ತೆಯನ್ನು ₹2,250 ಕೋಟಿ ವೆಚ್ಚದಲ್ಲಿ ನಿರ್ಮಿಸಲಿದೆ.</p><p>* ಬೆಂಗಳೂರು ನಗರದ ಸುಮಾರು 1.40 ಕೋಟಿ ಜನರಿಗೆ ಕುಡಿಯುವ ನೀರು ಪೂರೈಸಲು ಕಾವೇರಿ ನೀರು ಸರಬರಾಜು ಯೋಜನೆಯಡಿ 1 ರಿಂದ 5ನೇ ಹಂತಗಳ ಒಟ್ಟು 2,225 ಎಂಎಲ್ಡಿ ನೀರು ಪೂರೈಸಲಾಗುತ್ತಿದೆ. ಇದೀಗ ಜಿಐಸಿಎ ನೆರವಿನಿಂದ ₹6,939 ಕೋಟಿ ವೆಚ್ಚದಲ್ಲಿ ಹೆಚ್ಚುವರಿಯಾಗಿ ಆರು ಟಿಎಂಸಿ. ನೀರನ್ನು ಪೂರೈಸಲು ಕಾವೇರಿ 6ನೇ ಹಂತದ ಯೋಜನೆಯನ್ನು ನಮ್ಮ ಸರ್ಕಾರದಿಂದ ರೂಪಿಸಲಾಗಿದೆ ಎಂದು ಸಿದ್ಧರಾಮಯ್ಯ ಬಜೆಟ್ನಲ್ಲಿ ತಿಳಿಸಿದ್ದಾರೆ.</p>.ಈ ಸಾರಿಯ ರಾಜ್ಯ ಬಜೆಟ್ನಲ್ಲಿ ಬೆಳಗಾವಿ ಜಿಲ್ಲೆಗೆ ಸಿಕ್ಕದ್ದೇನು?.ಒಳಮೀಸಲಾತಿ: ಪರಿಷ್ಕೃತ ರೋಸ್ಟರ್ ಬಿಂದು ಗುರುತಿಸಿ ನೇಮಕಾತಿ ಆರಂಭಿಸಲು ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>