<p><strong>ಬೆಂಗಳೂರು:</strong> ಇಂದಿನ ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.</p>.<p>ಟೆಲಿಮೆಡಿಸನ್ ಸೇವೆ ವಿಸ್ತರಣೆ, ತೀವ್ರ ನಿಗಾ ಘಟಕ ನಿರ್ವಹಣೆ, ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆಗೆ ಅನುದಾನ, ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ, ಕ್ಯಾತ್ಲ್ಯಾಬ್ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಯಡಿಯೂರಪ್ಪ ಮಾತನಾಡಿದ್ದಾರೆ.</p>.<p><strong>ಆರೋಗ್ಯ ಕ್ಷೇತ್ರಕ್ಕೆ ಅಭಿವೃದ್ಧಿಗೆ ಬಿಎಸ್ವೈ ಯೋಜನೆಗಳು</strong></p>.<p>* ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ / ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಂತ ಹಂತವಾಗಿ 19 ಕೋಟಿ ರೂ. ವೆಚ್ಚದಲ್ಲಿ ಟೆಲಿಮೆಡಿಸನ್ ಸೇವೆ ವಿಸ್ತರಣೆ.</p>.<p>* ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ 200 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.</p>.<p>* ಆರು ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ ಕಿವುಡುತನ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆಗೆ 28 ಕೋಟಿ ರೂ. ಅನುದಾನ.</p>.<p>* ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ ತಾಲ್ಲೂಕು ಆಸ್ಪತ್ರೆಗಳ ತೀವ್ರ ನಿಗಾ ಘಟಕ ನಿರ್ವಹಣೆ.</p>.<p>* ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಬಡ ರೋಗಿಗಳಿಗೆ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ.</p>.<p>* ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇತರೆ ಐದು ಆಸ್ಪತ್ರೆಗಳ ತುರ್ತು ವೈದ್ಯಕೀಯ ಚಿಕಿತ್ಸಾ ವಿಭಾಗಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಿ ಉತ್ಕಂಷ್ಟತಾ ಕೇಂದ್ರಗಳನ್ನಾಗಿ (Centre of Excellence) ಅಭಿವೃದ್ಧಿಪಡಿಸಲು ಐದು ಕೋಟಿ ರೂ. ಅನುದಾನ.</p>.<p>* ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಸಿ.ವಿ. ರಾಮನ್ ಆಸ್ಪತ್ರೆಗಳಲ್ಲಿ ಹೃದಯ ರೋಗದ ಚಿಕಿತ್ಸೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಕ್ಯಾತ್ಲ್ಯಾಬ್ ಸ್ಥಾಪನೆ.</p>.<p>* ಹಾವೇರಿ ಜಿಲ್ಲೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 20 ಹಾಸಿಗೆಗಳ ಆಯುಷ್ ಸಂಯುಕ್ತ ಆಸ್ಪತ್ರೆ ಪ್ರಾರಂಭ. ಐದು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.</p>.<p>* ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿ ಮತ್ತು ಆಚರಣೆಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಎರಡು ಕೋಟಿ ರೂ. ಅನುದಾನ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇಂದಿನ ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.</p>.<p>ಟೆಲಿಮೆಡಿಸನ್ ಸೇವೆ ವಿಸ್ತರಣೆ, ತೀವ್ರ ನಿಗಾ ಘಟಕ ನಿರ್ವಹಣೆ, ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆಗೆ ಅನುದಾನ, ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ, ಕ್ಯಾತ್ಲ್ಯಾಬ್ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಯಡಿಯೂರಪ್ಪ ಮಾತನಾಡಿದ್ದಾರೆ.</p>.<p><strong>ಆರೋಗ್ಯ ಕ್ಷೇತ್ರಕ್ಕೆ ಅಭಿವೃದ್ಧಿಗೆ ಬಿಎಸ್ವೈ ಯೋಜನೆಗಳು</strong></p>.<p>* ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ / ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಂತ ಹಂತವಾಗಿ 19 ಕೋಟಿ ರೂ. ವೆಚ್ಚದಲ್ಲಿ ಟೆಲಿಮೆಡಿಸನ್ ಸೇವೆ ವಿಸ್ತರಣೆ.</p>.<p>* ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ 200 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.</p>.<p>* ಆರು ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ ಕಿವುಡುತನ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆಗೆ 28 ಕೋಟಿ ರೂ. ಅನುದಾನ.</p>.<p>* ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ ತಾಲ್ಲೂಕು ಆಸ್ಪತ್ರೆಗಳ ತೀವ್ರ ನಿಗಾ ಘಟಕ ನಿರ್ವಹಣೆ.</p>.<p>* ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಬಡ ರೋಗಿಗಳಿಗೆ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ.</p>.<p>* ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇತರೆ ಐದು ಆಸ್ಪತ್ರೆಗಳ ತುರ್ತು ವೈದ್ಯಕೀಯ ಚಿಕಿತ್ಸಾ ವಿಭಾಗಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಿ ಉತ್ಕಂಷ್ಟತಾ ಕೇಂದ್ರಗಳನ್ನಾಗಿ (Centre of Excellence) ಅಭಿವೃದ್ಧಿಪಡಿಸಲು ಐದು ಕೋಟಿ ರೂ. ಅನುದಾನ.</p>.<p>* ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಸಿ.ವಿ. ರಾಮನ್ ಆಸ್ಪತ್ರೆಗಳಲ್ಲಿ ಹೃದಯ ರೋಗದ ಚಿಕಿತ್ಸೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಕ್ಯಾತ್ಲ್ಯಾಬ್ ಸ್ಥಾಪನೆ.</p>.<p>* ಹಾವೇರಿ ಜಿಲ್ಲೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 20 ಹಾಸಿಗೆಗಳ ಆಯುಷ್ ಸಂಯುಕ್ತ ಆಸ್ಪತ್ರೆ ಪ್ರಾರಂಭ. ಐದು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.</p>.<p>* ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿ ಮತ್ತು ಆಚರಣೆಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಎರಡು ಕೋಟಿ ರೂ. ಅನುದಾನ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>