ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget: ಬೆಂಗಳೂರಲ್ಲಿ ಬೆಳಗಿನ ಜಾವದವೆರೆಗೆ ವ್ಯಾಪಾರಕ್ಕೆ ಅವಕಾಶ

Published 17 ಫೆಬ್ರುವರಿ 2024, 0:20 IST
Last Updated 17 ಫೆಬ್ರುವರಿ 2024, 0:20 IST
ಅಕ್ಷರ ಗಾತ್ರ

ಬೆಂಗಳೂರು: ಮುಂಜಾನೆ 1 ಗಂಟೆವರೆಗೆ ಬೆಂಗಳೂರಿನಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

  • ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಬೆಳಗಿನ ಜಾವ ಒಂದು ಗಂಟೆಯವರೆಗೆ ವಿಸ್ತರಿಸಲು ಉದ್ದೇಶಿಸಲಾಗಿದೆ.

  • ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

  • ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ₹ 2,000 ಕೋಟಿ ಅನುದಾನ

  • ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆ.ಜಿ.ಎಫ್‌, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌ ಅಭಿವೃದ್ಧಿ

  • ಮೈಸೂರು ನಗರಕ್ಕೆ ಪೆರಿಫೆರಲ್‌ ಹೊರ ವರ್ತುಲ ರಸ್ತೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಅಥವಾ ಟೌನ್‌ ಪ್ಲಾನಿಂಗ್‌ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರಿ

  • ನಗರ ಪ್ರದೇಶದ ಎಲ್ಲ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಅಮೃತ್ 2.0 (ಕೇಂದ್ರ ಪುರಸ್ಕೃತ) ಯೋಜನೆ ಅನುಷ್ಠಾನ. ರಾಜ್ಯದ ಪಾಲಿನ ₹ 4,615 ಕೋಟಿ ಪೈಕಿ ಕಳೆದ ವರ್ಷ ₹ 320 ಕೋಟಿ ಅನುದಾನ. ಈ ಬಾರಿ ₹ 200 ಕೋಟಿ ಅನುದಾನ ನೀಡಿ, 7.5 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ

  • ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ 2.0 ಅಡಿ ದ್ರವ ಹಾಗೂ ಘನ ತ್ಯಾಜ್ಯ ಸಂಸ್ಕರಣೆಗೆ ₹ 5,072 ಕೋಟಿ ವೆಚ್ಚ (ಕೇಂದ್ರ ಸರ್ಕಾರದ ಪಾಲು ₹ 2,185 ಕೋಟಿ).

  • ಸ್ಥಳೀಯ ಸಂಸ್ಥೆ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜಂಟಿ ಸಹಭಾಗಿತ್ವದಲ್ಲಿ ಅಮೃತ್‌ 2.0 ಯೋಜನೆ ಅಡಿ ₹ 539 ಕೋಟಿ ಮೊತ್ತದಲ್ಲಿ ಕೆರೆ ಹಾಗೂ ಜಲ ಮೂಲಗಳ ಪುನಶ್ಚೇತನ, ಉದ್ಯಾನಗಳ ಅಭಿವೃದ್ಧಿ

  • ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಯಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದು ಸರಳೀಕರಣಗೊಳಿಸಲು, ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆ.

  • ಆಸ್ತಿ ತೆರಿಗೆ ಮತ್ತು ಇತರೆ ಶುಲ್ಕವನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಹಾಗೂ ತೆರಿಗೆ ಸೋರಿಕೆ ತಡೆಗಟ್ಟಲು ’3ಡಿ‘ ಡ್ರೋನ್‌ ತಂತ್ರಜ್ಞಾನ ಬಳಸಿ ಮೌಲ್ಯಮಾಪನ

  • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಿ ಮಾಡಲು ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸಹಕಾರ

  • ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಎಲ್ಲ ಸ್ಥಳೀಯ ಯೋಜನಾ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತೀಕರಿಸುವ ನಿರ್ಧಾರ

  • ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಸಭೆಗಳ ಕಾರ್ಯ ಕಲಾಪ ನೇರ ಪ್ರಸಾರಕ್ಕೆ ಕ್ರಮ

  • ಮೈಸೂರಿನ ಪ್ರಖ್ಯಾತ ಲ್ಯಾನ್ಸ್‌ಡೌನ್‌ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿಯೇ ಅಭಿವೃದ್ಧಿಪಡಿಸಲು ಕ್ರಮ

ವಸತಿ

  • ಕೊಳೆಗೇರಿ ಜನರಿಗೆ ಮನೆ, ಸೆಸ್‌ ಪರಿಷ್ಕರಣೆ

  • 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣ. 2024-25ರಲ್ಲಿ ಮೂರು ಲಕ್ಷ ಮನೆಗಳ ನಿರ್ಮಾಣದ ಗುರಿ. ರಾಜ್ಯದಲ್ಲಿ ವಸತಿರಹಿತರ ಸಂಖ್ಯೆ ಗುರುತಿಸಲು ಸಮೀಕ್ಷೆ

  • ಕೊಳೆಗೇರಿ ಅಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆ ನಿರ್ಮಾಣ. ವಂತಿಗೆ ರೂಪದಲ್ಲಿ ನಿಗದಿ ಮಾಡಿದ್ದ  ₹ 5 ಲಕ್ಷದಿಂದ ₹ 1 ಲಕ್ಷಕ್ಕೆ ಇಳಿಕೆ. ಶೀಘ್ರದಲ್ಲೇ 48,796 ಮನೆ ನಿರ್ಮಾಣ ಪೂರ್ಣಗೊಳಿಸಿ ನಿವಾಸಿಗಳಿಗೆ ಹಸ್ತಾಂತರ

  • ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಡೀಕರಣ

  • ಆಸ್ತಿ ನಗದೀಕರಣ, ವಸತಿ ಸೆಸ್‌ ಮತ್ತು ವಿವಿಧ ಶುಲ್ಕ ವಿಧಿಸುವ ಮೂಲಕ ಸಂಪನ್ಮೂಲ ಕ್ರೋಡೀಕರಿಸಿ ’ಕರ್ನಾಟಕ ಕೈಗೆಟಕುವ ವಸತಿ ನಿಧಿ(ಕೆಎಎಚ್‌ಎಫ್‌) ಸ್ಥಾಪನೆ.

  • ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್‌ ದರ ಪರಿಷ್ಕರಣೆ

  • ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲು ಕ್ರಮ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT