<p>‘ಒಟ್ಟು ಸಾಲ ಜಿಡಿಪಿಯ ಶೇ 25ರಷ್ಟನ್ನು ಮೀರಬಾರದು ಎಂಬ ಆರ್ಥಿಕ ಶಿಸ್ತನ್ನು ತರಲು ಇರುವ ಮಾನದಂಡಗಳನ್ನು ರಾಜ್ಯ ಸರ್ಕಾರ ಪೂರೈಸಿದೆ. ಸಾಲದ ಮೊತ್ತ ಶೇ 24.94ರಷ್ಟಿದೆ. ಮಿಗತೆ ಬಜೆಟ್ ಆಗದೇ ವಿತ್ತೀಯ ಕೊರತೆ ಆಗಿದೆ. ಇದಕ್ಕೆ ಕಾರಣಗಳಿವೆ’ ಎಂದರು.</p>.<p>‘ರಾಜಸ್ವ ಸಂಗ್ರಹದ ವಿಷಯಕ್ಕೆ ಬಂದರೆ, ಕಳೆದ ವರ್ಷದ ಬಜೆಟ್ಗಿಂತ ಸುಮಾರು ₹22,573 ಕೋಟಿ ಹೆಚ್ಚು ಸಂಗ್ರಹ ಆಗಬಹುದು. ₹2.92 ಲಕ್ಷ ಕೋಟಿಗಳಿದ್ದ ಕಳೆದ ವರ್ಷದ ಅಂದಾಜು ಈ ವರ್ಷ ₹3.15 ಲಕ್ಷ ಕೋಟಿಗೆ ಏರಿಕೆಯಾಗಲಿದೆ ಎಂದು ಅಂದಾಜು ಮಾಡಿದ್ದೇವೆ’ ಎಂದು ಸಿದ್ದರಾಮಯ್ಯ ವಿವರಿಸಿದರು. ‘ಕೇಂದ್ರ ಸರ್ಕಾರ ಮಾಡಿದ ದ್ರೋಹದಿಂದ, ಜಿಎಸ್ಟಿ ಪರಿಹಾರ ಸಿಗದ ಕಾರಣ ಸುಮಾರು ₹2 ಲಕ್ಷ ಕೋಟಿಗೂ ಹೆಚ್ಚಿನ ನಷ್ಟ ರಾಜ್ಯಕ್ಕೆ ಆಗಿದೆ. ಪರಿಸ್ಥಿತಿ ಹೀಗಾದರೆ ರಾಜ್ಯಗಳ ಆರ್ಥಿಕತೆ ಹೇಗೆ ಉಳಿಯುತ್ತದೆ? ಗ್ಯಾರಂಟಿಯಂತಹ ಕಲ್ಯಾಣ ಯೋಜನೆಗಳಿಗೆ ನಯಾಪೈಸೆ ಖರ್ಚು ಮಾಡದ ಗುಜರಾತ್ ಈ ಬಾರಿ ₹1 ಲಕ್ಷ ಕೋಟಿ ಸಾಲ ಮಾಡುತ್ತಿದೆ’ ಎಂದರು.</p>.<p>‘ಬಿಜೆಪಿಯು ‘ಟಿಕಲ್ ಡೌನ್ ಎಕಾನಮಿ’ಯಲ್ಲಿ ನಂಬಿಕೆ ಇರಿಸಿದೆ. ನಮ್ಮದು ‘ಯೂನಿವರ್ಸಲ್ ಬೇಸಿಕ್ ಇನ್ಕಂ’ ಹಾಗೂ ಬೇಡಿಕೆಯ ಆರ್ಥಿಕ ತತ್ವ ಆಧರಿಸಿದೆ. ಬುದ್ಧನ ಕರುಣೆ, ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯವನ್ನು ನಮ್ಮ ಬಜೆಟ್ ಆಧರಿಸಿದೆ’ ಎಂದು ಹೇಳಿದರು.</p>.<p>‘ನಮ್ಮ ಬಜೆಟ್ ಕುರಿತು ‘ಪ್ರಜಾವಾಣಿ’ ಸಂಪಾದಕೀಯ ಸೇರಿ ಹಲವು ಪತ್ರಿಕೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಕಿರಣ್ ಮಜುಂದಾರ್ ಸೇರಿ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ’ ಎಂದು ಹೇಳಿದ ಸಿದ್ದರಾಮಯ್ಯ, ಅವರ ಮಾತುಗಳನ್ನು ಸದನದಲ್ಲಿ ಉಲ್ಲೇಖಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-51-1989679929</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಒಟ್ಟು ಸಾಲ ಜಿಡಿಪಿಯ ಶೇ 25ರಷ್ಟನ್ನು ಮೀರಬಾರದು ಎಂಬ ಆರ್ಥಿಕ ಶಿಸ್ತನ್ನು ತರಲು ಇರುವ ಮಾನದಂಡಗಳನ್ನು ರಾಜ್ಯ ಸರ್ಕಾರ ಪೂರೈಸಿದೆ. ಸಾಲದ ಮೊತ್ತ ಶೇ 24.94ರಷ್ಟಿದೆ. ಮಿಗತೆ ಬಜೆಟ್ ಆಗದೇ ವಿತ್ತೀಯ ಕೊರತೆ ಆಗಿದೆ. ಇದಕ್ಕೆ ಕಾರಣಗಳಿವೆ’ ಎಂದರು.</p>.<p>‘ರಾಜಸ್ವ ಸಂಗ್ರಹದ ವಿಷಯಕ್ಕೆ ಬಂದರೆ, ಕಳೆದ ವರ್ಷದ ಬಜೆಟ್ಗಿಂತ ಸುಮಾರು ₹22,573 ಕೋಟಿ ಹೆಚ್ಚು ಸಂಗ್ರಹ ಆಗಬಹುದು. ₹2.92 ಲಕ್ಷ ಕೋಟಿಗಳಿದ್ದ ಕಳೆದ ವರ್ಷದ ಅಂದಾಜು ಈ ವರ್ಷ ₹3.15 ಲಕ್ಷ ಕೋಟಿಗೆ ಏರಿಕೆಯಾಗಲಿದೆ ಎಂದು ಅಂದಾಜು ಮಾಡಿದ್ದೇವೆ’ ಎಂದು ಸಿದ್ದರಾಮಯ್ಯ ವಿವರಿಸಿದರು. ‘ಕೇಂದ್ರ ಸರ್ಕಾರ ಮಾಡಿದ ದ್ರೋಹದಿಂದ, ಜಿಎಸ್ಟಿ ಪರಿಹಾರ ಸಿಗದ ಕಾರಣ ಸುಮಾರು ₹2 ಲಕ್ಷ ಕೋಟಿಗೂ ಹೆಚ್ಚಿನ ನಷ್ಟ ರಾಜ್ಯಕ್ಕೆ ಆಗಿದೆ. ಪರಿಸ್ಥಿತಿ ಹೀಗಾದರೆ ರಾಜ್ಯಗಳ ಆರ್ಥಿಕತೆ ಹೇಗೆ ಉಳಿಯುತ್ತದೆ? ಗ್ಯಾರಂಟಿಯಂತಹ ಕಲ್ಯಾಣ ಯೋಜನೆಗಳಿಗೆ ನಯಾಪೈಸೆ ಖರ್ಚು ಮಾಡದ ಗುಜರಾತ್ ಈ ಬಾರಿ ₹1 ಲಕ್ಷ ಕೋಟಿ ಸಾಲ ಮಾಡುತ್ತಿದೆ’ ಎಂದರು.</p>.<p>‘ಬಿಜೆಪಿಯು ‘ಟಿಕಲ್ ಡೌನ್ ಎಕಾನಮಿ’ಯಲ್ಲಿ ನಂಬಿಕೆ ಇರಿಸಿದೆ. ನಮ್ಮದು ‘ಯೂನಿವರ್ಸಲ್ ಬೇಸಿಕ್ ಇನ್ಕಂ’ ಹಾಗೂ ಬೇಡಿಕೆಯ ಆರ್ಥಿಕ ತತ್ವ ಆಧರಿಸಿದೆ. ಬುದ್ಧನ ಕರುಣೆ, ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯವನ್ನು ನಮ್ಮ ಬಜೆಟ್ ಆಧರಿಸಿದೆ’ ಎಂದು ಹೇಳಿದರು.</p>.<p>‘ನಮ್ಮ ಬಜೆಟ್ ಕುರಿತು ‘ಪ್ರಜಾವಾಣಿ’ ಸಂಪಾದಕೀಯ ಸೇರಿ ಹಲವು ಪತ್ರಿಕೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಕಿರಣ್ ಮಜುಂದಾರ್ ಸೇರಿ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ’ ಎಂದು ಹೇಳಿದ ಸಿದ್ದರಾಮಯ್ಯ, ಅವರ ಮಾತುಗಳನ್ನು ಸದನದಲ್ಲಿ ಉಲ್ಲೇಖಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-51-1989679929</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>