<p><strong>ಬೆಂಗಳೂರು:</strong>ರಾಜ್ಯದಬಹುನಿರೀಕ್ಷಿತ ಮಹದಾಯಿ ಮತ್ತು ಎತ್ತಿನಹೊಳೆ ಯೋಜನೆಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಅನುದಾನ ನಿಗದಿ ಮಾಡಿದೆ.ಮಹದಾಯಿ ಯೋಜನೆಗೆ ₹ 500 ಕೋಟಿ, ಎತ್ತಿನಹೊಳೆಗೆ ₹ 1500 ಕೋಟಿ ಅನುದಾನ ಮೀಸಲಿಡಲಾಗಿದೆ.</p>.<p>ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಬಜೆಟ್ ಭಾಷಣದಲ್ಲಿ ಈ ಎರಡೂ ಯೋಜನೆಗಳಿಗೆ ಅನುದಾನ ಘೋಷಿಸಿದರು.</p>.<p>ಮಹದಾಯಿನದಿ ನೀರು ಹಂಚಿಕೆ ಕುರಿತು ಅಧಿಸೂಚನೆ ಹೊರಡಿಸುವ ಮೂಲಕ ಕೇಂದ್ರ ಸರ್ಕಾರವು ಬಹುದಿ ನಗಳ ನಿರೀಕ್ಷೆಯನ್ನು ಈಡೇರಿಸಿತ್ತು. ಅದರ ಬೆನ್ನಲ್ಲೆ, ಮಹದಾಯಿಯೋಜನೆಯಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ₹ 2,000 ಕೋಟಿ ಅನುದಾನದ ಅವಶ್ಯಕತೆ ಇದ್ದು, 2020–21ನೇ ಸಾಲಿನ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಒದಗಿಸಬೇಕು ಎಂಬ ಕೂಗು ಕೇಳಿ ಬಂದಿತ್ತು. ಆದರೆ, ನಿರೀಕ್ಷಿಸಿದಷ್ಟು ಸಿಗದೇ ಹೋದರೂ, ಸರ್ಕಾರ ₹500 ಕೋಟಿಗಳ ಅನುದಾನ ನೀಡಿದೆ.</p>.<p>ಇನ್ನು ಬೆಂಗಳೂರು ಸೇರಿದಂತೆ ಬಯಲು ಸೀಮೆಯ ಹಲವು ಜಿಲ್ಲೆಗಳ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕೈಗೊಂಡಿರುವ ಎತ್ತಿನಹೊಳೆ ಯೋಜನೆಗೆ ಈ ವರ್ಷ ₹1500 ಕೋಟಿಗಳನ್ನು ನೀಡಲಾಗಿದೆ.2012ರಲ್ಲಿ ₹12,912.36 ಕೋಟಿ ಇದ್ದ ಯೋಜನಾ ವೆಚ್ಚ 2020ರ ಹೊತ್ತಿಗೆ₹24,982 ಕೋಟಿಗೆ ಏರಿದೆ. ಈ ಬೃಹತ್ ಮೊತ್ತದ ಯೋಜನೆಗೆ ಈ ವರ್ಷ ನಿಗದಿಯಾಗಿರುವುದು ₹1500 ಕೋಟಿ ಮಾತ್ರ. ಹೀಗಾಗಿ ಯೋಜನೆ ನಿರೀಕ್ಷಿತ ವೇಗದಲ್ಲಿ ನಡೆಯುವುದೇ ಎಂಬ ಅನುಮಾನ ಮೂಡಿದೆ.</p>.<p><strong>ನೀರಾವರಿ ಒದಗಿಸಲು ಕ್ರಮ:</strong>2020–21ನೇ ಸಾಲಿನಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಹೆಚ್ಚುವರಿಯಾಗಿ ಜಲಸಂಪನ್ಮೂಲ ಇಲಾಖೆಯ ಮೂಲಕ ನೀರಾವರಿ ಒದಗಿಸಲು ಕ್ರಮ ತೆಗೆದುಕೊಳ್ಳುತ್ತೇವೆ.</p>.<p><strong>ಜಲಾನಯನ ಪ್ರದೇಶ ಅಭಿವೃದ್ಧಿಗೆ:</strong> ಸುಜಲಾ–3 ಯೋಜನೆ ಮಾದರಿಯಲ್ಲಿಯೇ ವಿಶ್ವಬ್ಯಾಂಕ್ ಸಹಕಾರದಲ್ಲಿ 10 ಲಕ್ಷ ಹೆಕ್ಟೇರ್ ಜಲಾನಯನ ಪ್ರದೇಶದಲ್ಲಿ ಭೂ ಮೌಲ್ಯ ಸಂವರ್ಧನಗೆ ಕ್ರಮ.</p>.<p><strong>ಮಳೆ ನೀರು, ಜಲಸಂರಕ್ಷಣೆಗೆ ವಿಶೇಷ ಯೋಜನೆ:</strong> ಜಲಸಂರಕ್ಷಣೆ ಮತ್ತು ಮಳೆ ನೀರು ಸಂರಕ್ಷಣೆಗಾಗಿ ವಿಶೇಷ ಯೋಜನೆ ರೂಪಿಸುತ್ತೇವೆ. 810 ಅತಿ ಸಣ್ಣ ಜಲಾನಯನ ಪ್ರದೇಶಗಳಲ್ಲಿ ಯೋಜನೆ ಜಾರಿ ಮಾಡುತ್ತೇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ರಾಜ್ಯದಬಹುನಿರೀಕ್ಷಿತ ಮಹದಾಯಿ ಮತ್ತು ಎತ್ತಿನಹೊಳೆ ಯೋಜನೆಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಅನುದಾನ ನಿಗದಿ ಮಾಡಿದೆ.ಮಹದಾಯಿ ಯೋಜನೆಗೆ ₹ 500 ಕೋಟಿ, ಎತ್ತಿನಹೊಳೆಗೆ ₹ 1500 ಕೋಟಿ ಅನುದಾನ ಮೀಸಲಿಡಲಾಗಿದೆ.</p>.<p>ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಬಜೆಟ್ ಭಾಷಣದಲ್ಲಿ ಈ ಎರಡೂ ಯೋಜನೆಗಳಿಗೆ ಅನುದಾನ ಘೋಷಿಸಿದರು.</p>.<p>ಮಹದಾಯಿನದಿ ನೀರು ಹಂಚಿಕೆ ಕುರಿತು ಅಧಿಸೂಚನೆ ಹೊರಡಿಸುವ ಮೂಲಕ ಕೇಂದ್ರ ಸರ್ಕಾರವು ಬಹುದಿ ನಗಳ ನಿರೀಕ್ಷೆಯನ್ನು ಈಡೇರಿಸಿತ್ತು. ಅದರ ಬೆನ್ನಲ್ಲೆ, ಮಹದಾಯಿಯೋಜನೆಯಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ₹ 2,000 ಕೋಟಿ ಅನುದಾನದ ಅವಶ್ಯಕತೆ ಇದ್ದು, 2020–21ನೇ ಸಾಲಿನ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಒದಗಿಸಬೇಕು ಎಂಬ ಕೂಗು ಕೇಳಿ ಬಂದಿತ್ತು. ಆದರೆ, ನಿರೀಕ್ಷಿಸಿದಷ್ಟು ಸಿಗದೇ ಹೋದರೂ, ಸರ್ಕಾರ ₹500 ಕೋಟಿಗಳ ಅನುದಾನ ನೀಡಿದೆ.</p>.<p>ಇನ್ನು ಬೆಂಗಳೂರು ಸೇರಿದಂತೆ ಬಯಲು ಸೀಮೆಯ ಹಲವು ಜಿಲ್ಲೆಗಳ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕೈಗೊಂಡಿರುವ ಎತ್ತಿನಹೊಳೆ ಯೋಜನೆಗೆ ಈ ವರ್ಷ ₹1500 ಕೋಟಿಗಳನ್ನು ನೀಡಲಾಗಿದೆ.2012ರಲ್ಲಿ ₹12,912.36 ಕೋಟಿ ಇದ್ದ ಯೋಜನಾ ವೆಚ್ಚ 2020ರ ಹೊತ್ತಿಗೆ₹24,982 ಕೋಟಿಗೆ ಏರಿದೆ. ಈ ಬೃಹತ್ ಮೊತ್ತದ ಯೋಜನೆಗೆ ಈ ವರ್ಷ ನಿಗದಿಯಾಗಿರುವುದು ₹1500 ಕೋಟಿ ಮಾತ್ರ. ಹೀಗಾಗಿ ಯೋಜನೆ ನಿರೀಕ್ಷಿತ ವೇಗದಲ್ಲಿ ನಡೆಯುವುದೇ ಎಂಬ ಅನುಮಾನ ಮೂಡಿದೆ.</p>.<p><strong>ನೀರಾವರಿ ಒದಗಿಸಲು ಕ್ರಮ:</strong>2020–21ನೇ ಸಾಲಿನಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಹೆಚ್ಚುವರಿಯಾಗಿ ಜಲಸಂಪನ್ಮೂಲ ಇಲಾಖೆಯ ಮೂಲಕ ನೀರಾವರಿ ಒದಗಿಸಲು ಕ್ರಮ ತೆಗೆದುಕೊಳ್ಳುತ್ತೇವೆ.</p>.<p><strong>ಜಲಾನಯನ ಪ್ರದೇಶ ಅಭಿವೃದ್ಧಿಗೆ:</strong> ಸುಜಲಾ–3 ಯೋಜನೆ ಮಾದರಿಯಲ್ಲಿಯೇ ವಿಶ್ವಬ್ಯಾಂಕ್ ಸಹಕಾರದಲ್ಲಿ 10 ಲಕ್ಷ ಹೆಕ್ಟೇರ್ ಜಲಾನಯನ ಪ್ರದೇಶದಲ್ಲಿ ಭೂ ಮೌಲ್ಯ ಸಂವರ್ಧನಗೆ ಕ್ರಮ.</p>.<p><strong>ಮಳೆ ನೀರು, ಜಲಸಂರಕ್ಷಣೆಗೆ ವಿಶೇಷ ಯೋಜನೆ:</strong> ಜಲಸಂರಕ್ಷಣೆ ಮತ್ತು ಮಳೆ ನೀರು ಸಂರಕ್ಷಣೆಗಾಗಿ ವಿಶೇಷ ಯೋಜನೆ ರೂಪಿಸುತ್ತೇವೆ. 810 ಅತಿ ಸಣ್ಣ ಜಲಾನಯನ ಪ್ರದೇಶಗಳಲ್ಲಿ ಯೋಜನೆ ಜಾರಿ ಮಾಡುತ್ತೇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>