ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅನುರಾಗ್ ಠಾಕೂರ್,'ಬಜೆಟ್ ಜನರ ನಿರೀಕ್ಷೆಗೆ ಅನುಗುಣವಾಗಿರುತ್ತದೆ. 'ಸಬ್ ಕಾ ಸಾಥ್, ಸಬ್ಕಾ ವಿಕಾಸ್, ಸಬ್ ಕಾ ವಿಶ್ವಾಸ್' ಮಂತ್ರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸರ್ಕಾರವು 'ಆತ್ಮನಿರ್ಭರ ಭಾರತ' ಪ್ಯಾಕೇಜ್ ಘೋಷಿಸುವ ಮೂಲಕ ದೇಶಕ್ಕೆ ಆರ್ಥಿಕತೆಗೆ ಹೊಸ ದಿಕ್ಕು ನೀಡಿದೆ. ಈ ಕಾರ್ಯಕ್ರಮ ಕೋವಿಡ್ ಸಾಂಕ್ರಾಮಿಕದಿಂದ ದೇಶವನ್ನು ರಕ್ಷಿಸುತ್ತದೆ ಮತ್ತು ಆರ್ಥಿಕತೆಯನ್ನು ಶೀಘ್ರವಾಗಿ ಹಳಿಗೆ ತರುತ್ತದೆ,' ಎಂದು ಹೇಳಿದ್ದಾರೆ.