<p>ಮೈಸೂರು: ‘ಈ ಬಾರಿಯ ಬಜೆಟ್ ಅಧಿವೇಶನದಲ್ಲಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಹಿತಕ್ಕಾಗಿ ಹಮ್ಮಿಕೊಂಡಿರುವ ಯೋಜನೆಗಳನ್ನು ಉಭಯ ಸದನಗಳ ಮುಂದಿಟ್ಟಿದೆ’ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಹೇಳಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಬಜೆಟ್ನಲ್ಲಿ ಉಲ್ಲೇಖಿತವಾಗಿರುವ ಪ್ರಗತಿದಾಯಕ ಅಂಶಗಳಲ್ಲಿ ಯಾವುದನ್ನೂ ವಿರೋಧಿಸಲಾಗದೆ ವಿಪಕ್ಷಗಳು ಮೂಲ ಚರ್ಚೆಯಲ್ಲೇ ವಿಫಲಗೊಂಡಿರುವುದು ಎದ್ದು ಕಾಣುತ್ತಿದೆ’ ಎಂದು ಆರೋಪಿಸಿದ್ದಾರೆ.</p>.<p>‘ಸದನದ ಅಷ್ಟೂ ಸಮಯ, ವಿಪಕ್ಷ ನಾಯಕರು ತಾಳಮೇಳ ಹೊಂದಾಣಿಕೆ ಇಲ್ಲದ ಹೇಳಿಕೆಗಳನ್ನು ನೀಡಿ ಅನಗತ್ಯ ವಿಚಾರ ಮುಂದಿಟ್ಟು ಕಾಲ ಕಳೆದಿದ್ದಾರೆ. ಇದು ಬಜೆಟ್ನಲ್ಲಿ ಯಾವುದೇ ಹುಳುಕಿಲ್ಲ, ಇದು ಜನಪರ ಎಂಬುದನ್ನು ಮತ್ತೊಮ್ಮೆ ಸಾಬೀತುಪಪಡಿಸಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.</p>.<p>‘ಸಿದ್ದರಾಮಯ್ಯ ಆಡಳಿತದಲ್ಲಿ ಲೋಪ ಇಲ್ಲ ಎನ್ನುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ’ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-39-471968123</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಈ ಬಾರಿಯ ಬಜೆಟ್ ಅಧಿವೇಶನದಲ್ಲಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಹಿತಕ್ಕಾಗಿ ಹಮ್ಮಿಕೊಂಡಿರುವ ಯೋಜನೆಗಳನ್ನು ಉಭಯ ಸದನಗಳ ಮುಂದಿಟ್ಟಿದೆ’ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಹೇಳಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಬಜೆಟ್ನಲ್ಲಿ ಉಲ್ಲೇಖಿತವಾಗಿರುವ ಪ್ರಗತಿದಾಯಕ ಅಂಶಗಳಲ್ಲಿ ಯಾವುದನ್ನೂ ವಿರೋಧಿಸಲಾಗದೆ ವಿಪಕ್ಷಗಳು ಮೂಲ ಚರ್ಚೆಯಲ್ಲೇ ವಿಫಲಗೊಂಡಿರುವುದು ಎದ್ದು ಕಾಣುತ್ತಿದೆ’ ಎಂದು ಆರೋಪಿಸಿದ್ದಾರೆ.</p>.<p>‘ಸದನದ ಅಷ್ಟೂ ಸಮಯ, ವಿಪಕ್ಷ ನಾಯಕರು ತಾಳಮೇಳ ಹೊಂದಾಣಿಕೆ ಇಲ್ಲದ ಹೇಳಿಕೆಗಳನ್ನು ನೀಡಿ ಅನಗತ್ಯ ವಿಚಾರ ಮುಂದಿಟ್ಟು ಕಾಲ ಕಳೆದಿದ್ದಾರೆ. ಇದು ಬಜೆಟ್ನಲ್ಲಿ ಯಾವುದೇ ಹುಳುಕಿಲ್ಲ, ಇದು ಜನಪರ ಎಂಬುದನ್ನು ಮತ್ತೊಮ್ಮೆ ಸಾಬೀತುಪಪಡಿಸಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.</p>.<p>‘ಸಿದ್ದರಾಮಯ್ಯ ಆಡಳಿತದಲ್ಲಿ ಲೋಪ ಇಲ್ಲ ಎನ್ನುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ’ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-39-471968123</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>