<p>ಕೇಂದ್ರ ಬಜೆಟ್ಗೆ ಸಂಬಂಧಿಸಿದ ಎಲ್ಲ ಸುದ್ದಿಗಳಿಗಾಗಿ <a href="https://www.prajavani.net/" target="_blank">ಇಲ್ಲಿ ಕ್ಲಿಕ್ ಮಾಡಿ</a>... </p> .<p>ಸ್ಟಾರ್ಟ್ಅಪ್ಗಳ ನಷ್ಟದ ಪರಿಹಾರವನ್ನು 10 ವರ್ಷಗಳವರೆಗೆ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ. </p> <p>ಪ್ರಯೋಗಾಲಯದಲ್ಲಿ ಬೆಳೆದ ಹವಳಕ್ಕೆ ಬಳಸಲಾಗುವ ಬೀಜಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲು ಸರ್ಕಾರ ನಿರ್ಧರಿಸಿದೆ. <br /> </p> .<p>ತಾಮ್ರದ ತ್ಯಾಜದ ಮೇಲಿನ ಶೇ 2.5 ರಿಯಾಯಿತಿಯ ಮೂಲ ಕಸ್ಟಮ್ಸ್ ಸುಂಕವನ್ನು ಸರ್ಕಾರ ಮುಂದುವರಿಸಲಿದೆ. </p> <p>ರಫ್ತು ಉತ್ತೇಜಿಸಲು ಸೀಗಡಿ ಆಹಾರದ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲು ಸರ್ಕಾರ ತೀರ್ಮಾನಿಸಿದೆ. </p> <p>ಸಿಗರೇಟ್ ಮೇಲಿನ ತೆರಿಗೆಯನ್ನು ಶೇ 16ಕ್ಕೆ ಹೆಚ್ಚಿಸಲಾಗಿದೆ.</p> <p>ರಬ್ಬರ್ ಮೇಲಿನ ಮೂಲ ಆಮದು ಸುಂಕವನ್ನು 10 ಪಿಸಿಯಿಂದ 25 ಪಿಸಿಗೆ ಹೆಚ್ಚಿಸಲಾಗಿದೆ.</p> <p>ಚಿನ್ನದಿಂದ ತಯಾರಿಸಿದ ವಸ್ತುಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಹೆಚ್ಚಿಸಲಾಗಿದೆ. </p> .<p>ಅಡುಗೆಮನೆಯ ಎಲೆಕ್ಟ್ರಿಕ್ ಚಿಮಣಿ ಮೇಲಿನ ಕಸ್ಟಮ್ಸ್ ಸುಂಕ ಶೇ 7.5 ರಿಂದ ಶೇ 15ಕ್ಕೆ ಏರಿಕೆ</p> <p>ಮೊಬೈಲ್ ಫೋನ್ ಉತ್ಪಾದನೆಯು 2014-15ರಲ್ಲಿ 5.8 ಕೋಟಿ ಯುನಿಟ್ಗಳಿಂದ ಕಳೆದ ಹಣಕಾಸು ವರ್ಷದಲ್ಲಿ 31 ಕೋಟಿ ಯೂನಿಟ್ಗಳಿಗೆ ಏರಿಕೆಯಾಗಿದೆ</p> <p>ಟಿವಿ ಪ್ಯಾನಲ್ಗಳ ತೆರೆದ ಸೆಲ್ಗಳ ಭಾಗಗಳ ಮೇಲಿನ ಕಸ್ಟಮ್ಸ್ ಸುಂಕ ಶೇ. 2.5ಕ್ಕೆ ಇಳಿಕೆ. </p> <p>ಮೊಬೈಲ್ ಫೋನ್ ತಯಾರಿಕೆಗೆ ಬೇಕಾದ ವಸ್ತುಗಳ ಮೇಲಿನ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲು ಸರ್ಕಾರ ತೀರ್ಮಾನಿಸಿದೆ. </p> <p>‘ಇವಿ’ಗಳನ್ನು ಪ್ರೋತ್ಸಾಹಿಸಲು ಹೆಚ್ಚಿಸಲು ಪರೋಕ್ಷ ತೆರಿಗೆಯನ್ನು ಪ್ರಸ್ತಾಪಿಸಲಾಗಿದೆ. </p> <p>ಮುಂದಿನ ಹಣಕಾಸು ವರ್ಷಕ್ಕೆ 23.3 ಲಕ್ಷ ಕೋಟಿ ರೂಪಾಯಿ ತೆರಿಗೆ ಸ್ವೀಕೃತಿ ಲೆಕ್ಕಾಚಾರ </p> <p>– ನಿರ್ಮಲಾ ಸೀತಾರಾಮಾನ್</p> .<p>‘ಕಂಪನಿ ಕಾಯ್ದೆ’ಯಡಿ ಅರ್ಜಿಗಳನ್ನು ಸಲ್ಲಿಸುವ ಕಂಪನಿಗಳಿಗೆ ತ್ವರಿತವಾಗಿ ಸ್ಪಂದಿಸಲು ‘ಸಂಸ್ಕರಣಾ ಕೇಂದ್ರ’ವನ್ನು ಸ್ಥಾಪಿಸಲಾಗುವುದು</p> <p>ಸಾಲದ ಹರಿವನ್ನು ಸುಗಮಗೊಳಿಸಲು, ಆರ್ಥಿಕ ಸ್ಥಿರತೆಯನ್ನು ಉತ್ತೇಜಿಸಲು ರಾಷ್ಟ್ರೀಯ ಹಣಕಾಸು ಮಾಹಿತಿ ನೋಂದಣಿ ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ. </p> <p>ಕ್ಲೈಮ್ ಮಾಡದ ಷೇರುಗಳು ಮತ್ತು ಡಿವಿಡೆಂಡ್ಗಳನ್ನು ಮರುಪಡೆಯಲು ‘ಇಂಟಿಗ್ರೇಟೆಡ್ ಐಟಿ ಪೋರ್ಟಲ್’ ಅನ್ನು ಸ್ಥಾಪಿಸಲಾಗುವುದು. </p> <p>ಶೇ 7.5 ಬಡ್ಡಿಯೊಂದಿಗೆ ಗರಿಷ್ಠ 2 ಲಕ್ಷ ರೂ.ವರೆಗೆ ಠೇವಣಿ ಇಡಲು ‘ಮಹಿಳಾ ಸಮ್ಮಾನ್’ ಉಳಿತಾಯ ಪ್ರಮಾಣಪತ್ರದ ಅಡಿಯಲ್ಲಿ ಅವಕಾಶ ಕಲ್ಪಿಸಲಾಗುತ್ತದೆ. ಇದನ್ನು 2025ರ ವರೆಗೆ ವಿಸ್ತರಿಸಲಾಗುತ್ತದೆ. </p> <p>–ನಿರ್ಮಲಾ ಸೀತಾರಾಮನ್ </p> .<p>ಹಣಕಾಸು ವಲಯದ ನಿಯಂತ್ರಕರಿಗೆ ಅಸ್ತಿತ್ವದಲ್ಲಿರುವ ನಿಯಮಗಳನ್ನು ಸಮಗ್ರವಾಗಿ ಮರುಪರಿಶೀಲನೆ ಮಾಡುವಂತೆ ತಿಳಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. </p> .<p>ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರವು ‘ದೇಖೋ ಅಪ್ನಾ ದೇಶ್’ ಉಪಕ್ರಮವನ್ನು ಪ್ರಾರಂಭಿಸಲಿದೆ </p> <p>ಎಂಎಸ್ಎಂಇಗಳಿಗೆ ಪರಿಷ್ಕೃತ ಸಾಲ ಖಾತ್ರಿ ಯೋಜನೆಯನ್ನು ಏಪ್ರಿಲ್ 1 ರಿಂದ ಪ್ರಾರಂಭಿಸಲಾಗುವುದು</p> <p>'ಒಂದು ಜಿಲ್ಲೆ ಒಂದು ಉತ್ಪನ್ನ' ವಸ್ತುಗಳು ಮತ್ತು ಜಿಐ ಉತ್ಪನ್ನಗಳ ಪ್ರಚಾರ ಮತ್ತು ಮಾರಾಟಕ್ಕಾಗಿ ಯೂನಿಟಿ ಮಾಲ್ ಸ್ಥಾಪಿಸಲು ರಾಜ್ಯ ಸರ್ಕಾರಗಳಿಗೆ ಉತ್ತೇಜಿನ ನೀಡಲಾಗುತ್ತದೆ. </p> <p>ಯುವಕರ ಕೌಶಲ್ಯ ತರಬೇತಿಗಾಗಿ ‘ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ 4.0’ ಅನ್ನು ಪ್ರಾರಂಭಿಸಲಾಗುವುದು</p> <p>ಪ್ರವಾಸೋದ್ಯಮವನ್ನು ಉತ್ತೇಜಿಸಲು 'ಚಾಲೆಂಜ್ ಮೋಡ್' ಮೂಲಕ 50 ಸ್ಥಳಗಳನ್ನು ಆಯ್ಕೆ ಮಾಡಲು ಸರ್ಕಾರ ನಿರ್ಧರಿಸಿದೆ. </p> .<p>ಪರ್ಯಾಯ ರಸಗೊಬ್ಬರಗಳನ್ನು ಬಳಸುವಂತೆ ರಾಜ್ಯಗಳನ್ನು ಉತ್ತೇಜಿಸಲು PM-PRANAM ಎಂಬ ಕಾರ್ಯಕ್ರಮ ಜಾರಿಗೆ ತರಲಾಗುತ್ತದೆ. </p> <p>ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಲು 1 ಕೋಟಿ ರೈತರಿಗೆ ಸರ್ಕಾರ ನೆರವು ನೀಡಲಿದೆ. </p> <p>ಕರಾವಳಿಯುದ್ದಕ್ಕೂ ಮ್ಯಾಂಗ್ರೋವ್ ಕಾಡುಗಳನ್ನು ಬೆಳಸಲು ಸರ್ಕಾರ ಪ್ರೋತ್ಸಾಹ ನೀಡಲಿದೆ. </p> .<p>ಪರಿಸರ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ‘ಗ್ರೀನ್ ಕ್ರೆಡಿಟ್’ ಎಂಬ ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತದೆ. ಕಂಪನಿಗಳಿಂದ ಪರಿಸರ ಸಂರಕ್ಷಣೆ ಕ್ರಮಗಳನ್ನು ಉತ್ತೇಜಿಸಲು ಈ ಯೋಜನೆ ಕಾರ್ಯಗತಗೊಳಿಸಲಾಗುತ್ತಿದೆ. <br /> – ನಿರ್ಮಲಾ ಸೀತಾರಾಮನ್ </p> .<p>ವಾಣಿಜ್ಯ ವಿವಾದಗಳ ಇತ್ಯರ್ಥಕ್ಕೆ ‘ವಿವಾದ್ ಸೆ ವಿಶ್ವಾಸ-2’ ಅಡಿಯಲ್ಲಿ ಮತ್ತೊಂದು ‘ವಿವಾದ ಪರಿಹಾರ ಕಾರ್ಯಕ್ರಮ’ವೊಂದನ್ನು ಜಾರಿಗೆ ತರಲು ಸರ್ಕಾರ ತೀರ್ಮಾನ: ಸೀತಾರಾಮನ್</p> .<p>ಸಾರಿಗೆ ಮೂಲಸೌಕರ್ಯಕ್ಕೆ ಸಂಬಂಧಿಸಿದ 100 ನಿರ್ಣಾಯಕ ಯೋಜನೆಗಳನ್ನು ಅನುಷ್ಠಾನಕ್ಕಾಗಿ ಗುರುತಿಸಲಾಗಿದೆ– ನಿರ್ಮಲಾ </p> .<p>ನಿರ್ದಿಷ್ಟಪಡಿಸಿದ ಸರ್ಕಾರಿ ಏಜೆನ್ಸಿಗಳ ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ಸಾಮಾನ್ಯ ಗುರುತು ಚೀಟಿಯಾಗಿ ಪ್ಯಾನ್ (PAN) ಅನ್ನು ಬಳಸಲಾಗುವುದು. </p> .<p>ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ಮಾದರಿಯಲ್ಲಿ ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿಯನ್ನು ರಚಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ವರ್ಷಕ್ಕೆ ₹10 ಸಾವಿರ ಕೋಟಿ ನೀಡಲು ತೀರ್ಮಾನಿಸಲಾಗಿದೆ. </p> <p>– ನಿರ್ಮಲಾ ಸೀತಾರಾಮನ್ </p> .<p>ಮುಂದಿನ ಹಣಕಾಸು ವರ್ಷದಲ್ಲಿ ರೈಲ್ವೆ ಇಲಾಖೆಯಲ್ಲಿ ₹2.40 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಲಾಗುವುದ ಎಂದು ನಿರ್ಮಲಾ ಘೋಷಿಸಿದ್ದಾರೆ. </p> .<p>ಪ್ರಧಾನಮಂತ್ರಿ ಆವಾಸ್ ಯೋಜನೆಯ ವೆಚ್ಚವನ್ನು ಶೇ 66ಕ್ಕೆ (₹79,000 ಕೋಟಿ) ಹೆಚ್ಚಿಸಲಾಗಿದೆ. </p> .<p>3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ 740 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಕೇಂದ್ರ ಸರ್ಕಾರವು ಮುಂದಿನ ಮೂರು ವರ್ಷಗಳಲ್ಲಿ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ. </p> <p>– ನಿರ್ಮಲಾ ಸೀತಾರಾಮನ್ </p> .<p>ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಸೂಕ್ಷ್ಮ ನೀರಾವರಿ ಒದಗಿಸುವ ಗುರಿಯನ್ನು ಹೊಂದಿರುವ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ಕೇಂದ್ರ ನೆರವು ನೀಡಲಾಗುವುದು. </p> <p>– ನಿರ್ಮಲಾ ಸೀತಾರಾಮನ್ </p> .<p>2014ರ ನಂತರ ಆರಂಭವಾಗಿರುವ 157 ವೈದ್ಯಕೀಯ ಕಾಲೇಜುಗಳಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಆರಂಭಿಸಲಾಗುವುದು. </p> <p>– ವಿತ್ತ ಸಚಿವೆ</p> .<p>ಭಾರತೀಯ ಸಿರಿಧಾನ್ಯ ಸಂಶೋಧನಾ ಸಂಸ್ಥೆಗೆ ಉತ್ತೇಜನ ನೀಡಲಾಗುವುದು: ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ </p> .<p>ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡಲಾಗುವುದು. ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಿಸಲಾಗುವುದು: ಎಫ್ಎಂ ಸೀತಾರಾಮನ್</p> .<p>ಯುವ ಉದ್ಯಮಿಗಳು ಕೃಷಿ-ಸ್ಟಾರ್ಟ್ಅಪ್ಗಳನ್ನು ಆರಂಭಿಸಲು ಉತ್ತೇಜಕ ಕ್ರಮವಾಗಿ ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು</p> <p>ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಪ್ರವಾಸೋದ್ಯಮಕ್ಕೆ ಉತ್ತೇನ ನೀಡಲಾಗುವುದು. </p> <p>– ನಿರ್ಮಲಾ ಸೀತಾರಾಮನ್ </p> .<p>ಎಲ್ಲಾ ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಘನತೆಯ ಬದುಕನ್ನು ಖಾತ್ರಿಪಡಿಸಲು 2014 ರಿಂದ ಸರ್ಕಾರದ ಪ್ರಯತ್ನಿಸಿದೆ. ತಲಾ ಆದಾಯವು ದುಪ್ಪಟ್ಟಾಗಿ ₹1.97 ಲಕ್ಷಕ್ಕೆ ಏರಿದೆ. ಈ 9 ವರ್ಷಗಳಲ್ಲಿ, ಭಾರತದ ಆರ್ಥಿಕತೆಯು 10ರಿಂದ 5ನೇ ಸ್ಥಾನಕ್ಕೆ ಏರಿದೆ. </p> <p>– ನಿರ್ಮಲಾ ಸೀತಾರಾಮನ್ <br /> </p> .<p>ಜಾಗತಿಕ ಸವಾಲುಗಳ ಈ ಸಮಯದಲ್ಲಿ, ಭಾರತವು ಜಿ 20 ಅಧ್ಯಕ್ಷ ಸ್ಥಾನ ಪಡೆದುಕೊಂಡಿದೆ. ಇದು, ವಿಶ್ವದ ಆರ್ಥಿಕತೆಯಲ್ಲಿ ಭಾರತದ ಪಾತ್ರವನ್ನು ಬಲಪಡಿಸಲು ನಮಗೆ ಅನನ್ಯ ಅವಕಾಶವಾಗಿದೆ. </p> .<p>ಇದು ಅಮೃತಕಾಲದ ಮೊದಲ ಬಜೆಟ್. </p> <p>ಭಾರತದ ಆರ್ಥಿಕತೆ ಸರಿದಾರಿಯಲ್ಲಿದೆ. ಉಜ್ವಲ ಭವಿಷ್ಯದತ್ತ ಸಾಗುತ್ತಿದೆ. </p> <p>ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬ ಉದ್ದೇಶದೊಂದಿಗೆ 28 ತಿಂಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ಪೂರೈಸಲಾಗಿದೆ.</p> <p>– ನಿರ್ಮಲಾ ಸೀತಾರಾಮನ್ </p> .<p>ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಬಜೆಟ್ ಮಂಡನೆ ಆರಂಭಿಸಿದ್ದಾರೆ. </p> .<div><p><strong>ತಾಜಾ ಮಾಹಿತಿ ಪಡೆಯಲು <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ</strong></p><p><strong>ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ ಆ್ಯಪ್</a> | <a href="https://apps.apple.com/in/app/prajavani-kannada-news-app/id1535764933">ಐಒಎಸ್ ಆ್ಯಪ್</a></strong></p><p><strong>ಪ್ರಜಾವಾಣಿ <a href="https://www.facebook.com/prajavani.net">ಫೇಸ್ಬುಕ್ ಪುಟವನ್ನು</a>ಫಾಲೋ ಮಾಡಿ.</strong></p></div>