ಕೇಂದ್ರ ಬಜೆಟ್ಗೆ ಸಂಬಂಧಿಸಿದ ಎಲ್ಲ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ...
ಸ್ಟಾರ್ಟ್ಅಪ್ಗಳ ನಷ್ಟದ ಪರಿಹಾರವನ್ನು 10 ವರ್ಷಗಳವರೆಗೆ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ.
ಪ್ರಯೋಗಾಲಯದಲ್ಲಿ ಬೆಳೆದ ಹವಳಕ್ಕೆ ಬಳಸಲಾಗುವ ಬೀಜಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲು ಸರ್ಕಾರ ನಿರ್ಧರಿಸಿದೆ.
ತಾಮ್ರದ ತ್ಯಾಜದ ಮೇಲಿನ ಶೇ 2.5 ರಿಯಾಯಿತಿಯ ಮೂಲ ಕಸ್ಟಮ್ಸ್ ಸುಂಕವನ್ನು ಸರ್ಕಾರ ಮುಂದುವರಿಸಲಿದೆ.
ರಫ್ತು ಉತ್ತೇಜಿಸಲು ಸೀಗಡಿ ಆಹಾರದ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲು ಸರ್ಕಾರ ತೀರ್ಮಾನಿಸಿದೆ.
ಸಿಗರೇಟ್ ಮೇಲಿನ ತೆರಿಗೆಯನ್ನು ಶೇ 16ಕ್ಕೆ ಹೆಚ್ಚಿಸಲಾಗಿದೆ.
ರಬ್ಬರ್ ಮೇಲಿನ ಮೂಲ ಆಮದು ಸುಂಕವನ್ನು 10 ಪಿಸಿಯಿಂದ 25 ಪಿಸಿಗೆ ಹೆಚ್ಚಿಸಲಾಗಿದೆ.
ಚಿನ್ನದಿಂದ ತಯಾರಿಸಿದ ವಸ್ತುಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಹೆಚ್ಚಿಸಲಾಗಿದೆ.
ಅಡುಗೆಮನೆಯ ಎಲೆಕ್ಟ್ರಿಕ್ ಚಿಮಣಿ ಮೇಲಿನ ಕಸ್ಟಮ್ಸ್ ಸುಂಕ ಶೇ 7.5 ರಿಂದ ಶೇ 15ಕ್ಕೆ ಏರಿಕೆ
ಮೊಬೈಲ್ ಫೋನ್ ಉತ್ಪಾದನೆಯು 2014-15ರಲ್ಲಿ 5.8 ಕೋಟಿ ಯುನಿಟ್ಗಳಿಂದ ಕಳೆದ ಹಣಕಾಸು ವರ್ಷದಲ್ಲಿ 31 ಕೋಟಿ ಯೂನಿಟ್ಗಳಿಗೆ ಏರಿಕೆಯಾಗಿದೆ
ಟಿವಿ ಪ್ಯಾನಲ್ಗಳ ತೆರೆದ ಸೆಲ್ಗಳ ಭಾಗಗಳ ಮೇಲಿನ ಕಸ್ಟಮ್ಸ್ ಸುಂಕ ಶೇ. 2.5ಕ್ಕೆ ಇಳಿಕೆ.
ಮೊಬೈಲ್ ಫೋನ್ ತಯಾರಿಕೆಗೆ ಬೇಕಾದ ವಸ್ತುಗಳ ಮೇಲಿನ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲು ಸರ್ಕಾರ ತೀರ್ಮಾನಿಸಿದೆ.
‘ಇವಿ’ಗಳನ್ನು ಪ್ರೋತ್ಸಾಹಿಸಲು ಹೆಚ್ಚಿಸಲು ಪರೋಕ್ಷ ತೆರಿಗೆಯನ್ನು ಪ್ರಸ್ತಾಪಿಸಲಾಗಿದೆ.
ಮುಂದಿನ ಹಣಕಾಸು ವರ್ಷಕ್ಕೆ 23.3 ಲಕ್ಷ ಕೋಟಿ ರೂಪಾಯಿ ತೆರಿಗೆ ಸ್ವೀಕೃತಿ ಲೆಕ್ಕಾಚಾರ
– ನಿರ್ಮಲಾ ಸೀತಾರಾಮಾನ್
‘ಕಂಪನಿ ಕಾಯ್ದೆ’ಯಡಿ ಅರ್ಜಿಗಳನ್ನು ಸಲ್ಲಿಸುವ ಕಂಪನಿಗಳಿಗೆ ತ್ವರಿತವಾಗಿ ಸ್ಪಂದಿಸಲು ‘ಸಂಸ್ಕರಣಾ ಕೇಂದ್ರ’ವನ್ನು ಸ್ಥಾಪಿಸಲಾಗುವುದು
ಸಾಲದ ಹರಿವನ್ನು ಸುಗಮಗೊಳಿಸಲು, ಆರ್ಥಿಕ ಸ್ಥಿರತೆಯನ್ನು ಉತ್ತೇಜಿಸಲು ರಾಷ್ಟ್ರೀಯ ಹಣಕಾಸು ಮಾಹಿತಿ ನೋಂದಣಿ ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ.
ಕ್ಲೈಮ್ ಮಾಡದ ಷೇರುಗಳು ಮತ್ತು ಡಿವಿಡೆಂಡ್ಗಳನ್ನು ಮರುಪಡೆಯಲು ‘ಇಂಟಿಗ್ರೇಟೆಡ್ ಐಟಿ ಪೋರ್ಟಲ್’ ಅನ್ನು ಸ್ಥಾಪಿಸಲಾಗುವುದು.
ಶೇ 7.5 ಬಡ್ಡಿಯೊಂದಿಗೆ ಗರಿಷ್ಠ 2 ಲಕ್ಷ ರೂ.ವರೆಗೆ ಠೇವಣಿ ಇಡಲು ‘ಮಹಿಳಾ ಸಮ್ಮಾನ್’ ಉಳಿತಾಯ ಪ್ರಮಾಣಪತ್ರದ ಅಡಿಯಲ್ಲಿ ಅವಕಾಶ ಕಲ್ಪಿಸಲಾಗುತ್ತದೆ. ಇದನ್ನು 2025ರ ವರೆಗೆ ವಿಸ್ತರಿಸಲಾಗುತ್ತದೆ.
–ನಿರ್ಮಲಾ ಸೀತಾರಾಮನ್
ಹಣಕಾಸು ವಲಯದ ನಿಯಂತ್ರಕರಿಗೆ ಅಸ್ತಿತ್ವದಲ್ಲಿರುವ ನಿಯಮಗಳನ್ನು ಸಮಗ್ರವಾಗಿ ಮರುಪರಿಶೀಲನೆ ಮಾಡುವಂತೆ ತಿಳಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.