ನವದೆಹಲಿ: ‘ಕೇಂದ್ರ ಸರ್ಕಾರವು ಶುಕ್ರವಾರ ಸಂಸತ್ನಲ್ಲಿ ಮಂಡಿಸಿದ ಆರ್ಥಿಕ ಸಮೀಕ್ಷೆಯ ಉದ್ದೇಶವೇ ಸ್ಪಷ್ಟವಾಗಿಲ್ಲ. ಮೋದಿ ಸರ್ಕಾರವು ಆರ್ಥಿಕ ಚೇತರಿಕೆಗೆ ದೂರದೃಷ್ಟಿಯ ನೀತಿಯನ್ನು ಜಾರಿಗೆ ತಂದಿದೆ ಎಂಬ ಸ್ವಯಂ ಅಭಿನಂದನೆಯನ್ನು ಮಾತ್ರ ಒಳಗೊಂಡಿದೆ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ, ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಟೀಕಿಸಿದ್ದಾರೆ.