<p><strong>ನವದೆಹಲಿ</strong>: ಔಷಧ ಕ್ಷೇತ್ರದಲ್ಲಿ ನಾವಿನ್ಯತೆಯೆಡೆಗೆ ಹೆಚ್ಚು ಗಮನ ನೀಡಬೇಕು ಎಂದು ಆರ್ಥಿಕ ಸಮೀಕ್ಷೆಯ ವರದಿ ತಿಳಿಸಿದೆ. ಜತೆಗೆ ಹೊಸ ಔಷಧಗಳ ಅಭಿವೃದ್ಧಿ, ಜೈವಿಕ ಔಷಧಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ ಖರ್ಚು ಮಾಡುವುದರಲ್ಲಿ ಭಾರತ ಜಾಗತಿಕವಾಗಿ ಇನ್ನೂ ಹಿಂದುಳಿದಿದೆ ಎಂದು ವರದಿ ಹೇಳಿದೆ.</p><p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ 2024–25ನೇ ಸಾಲಿನ ಆರ್ಥಿಕ ಸಮೀಕ್ಷೆ ವರದಿಯನ್ನು ಮಂಡಿಸಿದರು.</p><p>2024ರ ಆರ್ಥಿಕ ವರ್ಷದಲ್ಲಿ ವಾರ್ಷಿಕವಾಗಿ ಔಷಧ ಕ್ಷೇತದಲ್ಲಿ ₹4.17 ಲಕ್ಷ ಕೋಟಿ ವಹಿವಾಟು ನಡೆದಿದೆ. ಕಳೆದ ಐದು ವರ್ಷಗಳಿಂದ ಶೇ 10.1ರಷ್ಟು ಏರಿಕೆ ಕಂಡಿದೆ.</p><p>ರಫ್ತು ಒಟ್ಟು ವಹಿವಾಟಿನ 50 ಪ್ರತಿಶತದಷ್ಟಿದೆ, ಹಿಂದಿನ ಆರ್ಥಿಕ ವರ್ಷದಲ್ಲಿ ವಾರ್ಷಿಕ ವಹಿವಾಟಿನ ಮೌಲ್ಯ ₹2.19 ಲಕ್ಷ ಕೋಟಿ ಆಗಿದೆ. ಒಟ್ಟು ಆಮದಿನ ಮೌಲ್ಯ ₹58,440.4 ಕೋಟಿ ಆಗಿದೆ.</p><p>ಒಟ್ಟಾರೆ ಔಷಧ ಕ್ಷೇತ್ರದಲ್ಲಿ ನಾವಿನ್ಯತೆಯ ಬಗ್ಗೆ ಹೆಚ್ಚುನ ಗಮನ ಕೊಡುವ ಅಗತ್ಯವಿದ್ದು, ಹೊಸ ಔಷಧಗಳ ಅಭಿವೃದ್ಧಿ ಅಗತ್ಯವಿದೆ ಎಂದು ಆರ್ಥಿಕ ಸಮೀಕ್ಷೆಯಲ್ಲಿ ಹೇಳಲಾಗಿದೆ.</p>.Budget 2025: ಸತತ 8ನೇ ಸಲ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಔಷಧ ಕ್ಷೇತ್ರದಲ್ಲಿ ನಾವಿನ್ಯತೆಯೆಡೆಗೆ ಹೆಚ್ಚು ಗಮನ ನೀಡಬೇಕು ಎಂದು ಆರ್ಥಿಕ ಸಮೀಕ್ಷೆಯ ವರದಿ ತಿಳಿಸಿದೆ. ಜತೆಗೆ ಹೊಸ ಔಷಧಗಳ ಅಭಿವೃದ್ಧಿ, ಜೈವಿಕ ಔಷಧಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ ಖರ್ಚು ಮಾಡುವುದರಲ್ಲಿ ಭಾರತ ಜಾಗತಿಕವಾಗಿ ಇನ್ನೂ ಹಿಂದುಳಿದಿದೆ ಎಂದು ವರದಿ ಹೇಳಿದೆ.</p><p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ 2024–25ನೇ ಸಾಲಿನ ಆರ್ಥಿಕ ಸಮೀಕ್ಷೆ ವರದಿಯನ್ನು ಮಂಡಿಸಿದರು.</p><p>2024ರ ಆರ್ಥಿಕ ವರ್ಷದಲ್ಲಿ ವಾರ್ಷಿಕವಾಗಿ ಔಷಧ ಕ್ಷೇತದಲ್ಲಿ ₹4.17 ಲಕ್ಷ ಕೋಟಿ ವಹಿವಾಟು ನಡೆದಿದೆ. ಕಳೆದ ಐದು ವರ್ಷಗಳಿಂದ ಶೇ 10.1ರಷ್ಟು ಏರಿಕೆ ಕಂಡಿದೆ.</p><p>ರಫ್ತು ಒಟ್ಟು ವಹಿವಾಟಿನ 50 ಪ್ರತಿಶತದಷ್ಟಿದೆ, ಹಿಂದಿನ ಆರ್ಥಿಕ ವರ್ಷದಲ್ಲಿ ವಾರ್ಷಿಕ ವಹಿವಾಟಿನ ಮೌಲ್ಯ ₹2.19 ಲಕ್ಷ ಕೋಟಿ ಆಗಿದೆ. ಒಟ್ಟು ಆಮದಿನ ಮೌಲ್ಯ ₹58,440.4 ಕೋಟಿ ಆಗಿದೆ.</p><p>ಒಟ್ಟಾರೆ ಔಷಧ ಕ್ಷೇತ್ರದಲ್ಲಿ ನಾವಿನ್ಯತೆಯ ಬಗ್ಗೆ ಹೆಚ್ಚುನ ಗಮನ ಕೊಡುವ ಅಗತ್ಯವಿದ್ದು, ಹೊಸ ಔಷಧಗಳ ಅಭಿವೃದ್ಧಿ ಅಗತ್ಯವಿದೆ ಎಂದು ಆರ್ಥಿಕ ಸಮೀಕ್ಷೆಯಲ್ಲಿ ಹೇಳಲಾಗಿದೆ.</p>.Budget 2025: ಸತತ 8ನೇ ಸಲ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>