ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರು 2020–21ನೇ ಸಾಲಿನ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದ್ದಾರೆ. ದೇಶದ ಮಂದಗತಿಯ ಆರ್ಥಿಕತೆಗೆ ಚೇತರಿಕೆ ನೀಡಲು ಸರ್ಕಾರ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ನಿರೀಕ್ಷೆಗಳಿದ್ದು, ಇದೇ ಕಾರಣದಿಂದಾಗಿ ಈ ಬಾರಿಯ ಬಜೆಟ್ ಕುತೂಹಲ ಮೂಡಿಸಿದೆ. ಬಜೆಟ್ ಮಂಡನೆಗೆ ಕೆಲವೇ ದಿನಗಳು ಇರುವಂತೆ ರಾಹುಲ್ ಗಾಂಧಿ ಜಿಡಿಪಿ ಲೆಕ್ಕದೊಂದಿಗೆ ಮುಂದೇನು ಎಂದು ಪ್ರಶ್ನಿಸಿದ್ದಾರೆ.