ಬೆಂಗಳೂರು:ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರದ ಕೊಡುಗೆ ಶೂನ್ಯ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಮಂಡಿಸಿರುವ ಬಜೆಟ್ ಕುರಿತು ಅವರುಯಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ.
‘ಕೇವಲ ಹೆಸರಿನ ಬದಲಾವಣೆಯಿಂದ ನಮ್ಮ ಭಾಗದ ಜನರ ಭವಿಷ್ಯ ಬದಲಾಗುವುದಿಲ್ಲ. ಬಿಜೆಪಿ ಈ ಮೊದಲು 371 (ಜೆ) ಕಾಲಂ ಅನ್ನು ತಿರಸ್ಕರಿಸಿತ್ತು. ಈಗ ಬಜೆಟ್ನಲ್ಲಿಯೂ ಈ ಪ್ರದೇಶವನ್ನು ಕಡೆಗಣಿಸಿದೆ. ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯವಾಗುತ್ತಿದೆ ಎಂದು ರಾಜೀನಾಮೆ ನೀಡಿದ ರಾಜಕಾರಣಿಗಳು ಎಲ್ಲಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರದ ಕೊಡುಗೆ ಶೂನ್ಯ..! ಕೇವಲ ಹೆಸರಿನ ಬದಲಾವಣೆಯಿಂದ ನಮ್ಮ ಭಾಗದ ಜನರ ಭವಿಷ್ಯ ಬದಲಾಗುವುದಿಲ್ಲ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) March 5, 2020
ಬಿಜೆಪಿ ಈ ಮೊದಲು 371J ಅನ್ನು ತಿರಸ್ಕರಿಸಿತ್ತು. ಈಗ ಬಜೆಟ್ನಲ್ಲಿಯೂ ಈ ಪ್ರದೇಶವನ್ನು ಕಡೆಗಣಿಸಿದೆ.
ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯವಾಗುತ್ತಿದೆ ಎಂದು ರಾಜೀನಾಮೆ ನೀಡಿದ ರಾಜಕಾರಣಿಗಳು ಎಲ್ಲಿದ್ದಾರೆ?
ಕೇಂದ್ರ ತೆರಿಗೆಯಲ್ಲಿ ರಾಜ್ಯದ ಪಾಲು ಕಡಿಮೆಯಾಗಿದ್ದು, ಅದನ್ನು ಸರಿದೂಗಿಸಲು ಪೆಟ್ರೋಲ್, ಡೀಸೆಲ್ ಮತ್ತು ಇತರ ತೆರಿಗೆಗಳನ್ನು ಹೆಚ್ಚಳ ಮಾಡುವ ಮೂಲಕ ನಾಗರಿಕರನ್ನು ತೊಂದರೆಗೆ ಸಿಲುಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದ್ದಾರೆ.
Hike on Petrol, Diesel & other taxes to compensate for reduction in funds from the centre. Double whammy for the citizens of the state.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) March 5, 2020
Without getting approval from CCEA, just announcing funds for suburban rail serves no purpose
ಉಪನಗರ ರೈಲು ಯೋಜನೆಗೆ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ (ಸಿಸಿಇಎ) ಅನುಮೋದನೆ ಸಿಗದಿದ್ದರೂ ಅನುದಾನ ಮಿಸಲಿರಿಸಿರುವ ಉದ್ದೇಶ ತಿಳಿಯುತ್ತಿಲ್ಲ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕ ಭಾಗಕ್ಕೆ ಘೋಷಿಸಿರುವ ಅನುದಾನದ ಬಗ್ಗೆ ಇಲಾಖಾವಾರು ಮಾಹಿತಿ ಇಲ್ಲ. ಜೊತೆಗೆ, ನಮ್ಮ ಭಾಗಕ್ಕೆ ಮೈತ್ರಿ ಸರ್ಕಾರದ ಅವಧಿಯಲ್ಲಿ ₹1500 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ಈ ಬಾರಿಯ ಬಜೆಟ್ನಲ್ಲಿ ಯಡಿಯೂರಪ್ಪ ಆದ್ಯತೆ ನೀಡದೆ ಅನ್ಯಾಯ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.