<p><strong>ಚಂಡೀಗಡ:</strong> ಪಂಜಾಬ್ನಲ್ಲಿ ಜುಲೈ 1ರಿಂದ ಗೃಹ ಬಳಕೆಗಾಗಿ ತಿಂಗಳಿಗೆ 300 ಯೂನಿಟ್ಗಳ ಉಚಿತ ವಿದ್ಯುತ್ ಪೂರೈಸುವುದಾಗಿ ಮುಖ್ಯಮಂತ್ರಿ ಭಗವಂತ ಮಾನ್ ನೇತೃತ್ವದ ಸರ್ಕಾರ ಸೋಮವಾರ ಘೋಷಿಸಿದೆ.</p>.<p>ಪಂಜಾಬ್ನಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿರುವ ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಸರ್ಕಾರವು, ಚೊಚ್ಚಲ ಬಜೆಟ್ನಲ್ಲೇ ಈ ಕುರಿತು ಮಹತ್ವದ ಘೋಷಣೆ ಮಾಡಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/maharashtra-political-crisis-uddhav-thackeray-shiv-sena-eknath-shinde-949318.html" itemprop="url">ಉದ್ಧವ್ ಠಾಕ್ರೆ ಪರ ಕೇವಲ 15 ಶಾಸಕರು, ನಾಲ್ವರು ಸಚಿವರು </a></p>.<p>ಪಂಜಾಬ್ನಲ್ಲಿ ಮುಖ್ಯಮಂತ್ರಿ ಭಗವಂತ ಮಾನ್ ಅವರ ಸರ್ಕಾರವು ಮಾರ್ಚ್ನಲ್ಲಿ ಅಧಿಕಾರ ವಹಿಸಿಕೊಂಡಿತ್ತು.</p>.<p>ಹಣಕಾಸು ಸಚಿವ ಹರಪಾಲ್ ಸಿಂಗ್ ಚೀಮಾ ಅವರು, ಸೋಮವಾರ 2022-23ನೇ ಸಾಲಿನ ಬಜೆಟ್ ಮಂಡಿಸಿದರು.</p>.<p>ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕಾಗದ ರಹಿತ ಬಜೆಟ್ ಮಂಡಿಸಿದ ಸಚಿವರು, ಜುಲೈ 1ರಿಂದ ಪ್ರತಿ ಮನೆಗೂ ಗೃಹ ಬಳಕೆಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ಪೂರೈಸುವುದಾಗಿ ತಿಳಿಸಿದರು.</p>.<p>ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಪ್ರತಿಪಾದಿಸಿದರು. ಎಎಪಿ ಪಕ್ಷವು ಭ್ರಷ್ಟಾಚಾರ ವಿರೋಧಿ ಚಳವಳಿಯಿಂದ ಆರಂಭವಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಸರ್ಕಾರದ ವೆಬ್ಸೈಟ್ನಲ್ಲಿ ಹಾಗೂ ಇ-ಮೇಲ್ ಮೂಲಕ 20,384 ಸಲಹೆಗಳನ್ನು ಸ್ವೀಕರಿಸಿದ ಬಳಿಕ ಸಿದ್ಧಪಡಿಸಿದ ಜನತಾ ಬಜೆಟ್ನಲ್ಲಿ ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಒತ್ತು ನೀಡಲಾಗಿದೆ ಎಂದು ಹಣಕಾಸು ಸಚಿವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಪಂಜಾಬ್ನಲ್ಲಿ ಜುಲೈ 1ರಿಂದ ಗೃಹ ಬಳಕೆಗಾಗಿ ತಿಂಗಳಿಗೆ 300 ಯೂನಿಟ್ಗಳ ಉಚಿತ ವಿದ್ಯುತ್ ಪೂರೈಸುವುದಾಗಿ ಮುಖ್ಯಮಂತ್ರಿ ಭಗವಂತ ಮಾನ್ ನೇತೃತ್ವದ ಸರ್ಕಾರ ಸೋಮವಾರ ಘೋಷಿಸಿದೆ.</p>.<p>ಪಂಜಾಬ್ನಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿರುವ ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಸರ್ಕಾರವು, ಚೊಚ್ಚಲ ಬಜೆಟ್ನಲ್ಲೇ ಈ ಕುರಿತು ಮಹತ್ವದ ಘೋಷಣೆ ಮಾಡಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/maharashtra-political-crisis-uddhav-thackeray-shiv-sena-eknath-shinde-949318.html" itemprop="url">ಉದ್ಧವ್ ಠಾಕ್ರೆ ಪರ ಕೇವಲ 15 ಶಾಸಕರು, ನಾಲ್ವರು ಸಚಿವರು </a></p>.<p>ಪಂಜಾಬ್ನಲ್ಲಿ ಮುಖ್ಯಮಂತ್ರಿ ಭಗವಂತ ಮಾನ್ ಅವರ ಸರ್ಕಾರವು ಮಾರ್ಚ್ನಲ್ಲಿ ಅಧಿಕಾರ ವಹಿಸಿಕೊಂಡಿತ್ತು.</p>.<p>ಹಣಕಾಸು ಸಚಿವ ಹರಪಾಲ್ ಸಿಂಗ್ ಚೀಮಾ ಅವರು, ಸೋಮವಾರ 2022-23ನೇ ಸಾಲಿನ ಬಜೆಟ್ ಮಂಡಿಸಿದರು.</p>.<p>ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕಾಗದ ರಹಿತ ಬಜೆಟ್ ಮಂಡಿಸಿದ ಸಚಿವರು, ಜುಲೈ 1ರಿಂದ ಪ್ರತಿ ಮನೆಗೂ ಗೃಹ ಬಳಕೆಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ಪೂರೈಸುವುದಾಗಿ ತಿಳಿಸಿದರು.</p>.<p>ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಪ್ರತಿಪಾದಿಸಿದರು. ಎಎಪಿ ಪಕ್ಷವು ಭ್ರಷ್ಟಾಚಾರ ವಿರೋಧಿ ಚಳವಳಿಯಿಂದ ಆರಂಭವಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಸರ್ಕಾರದ ವೆಬ್ಸೈಟ್ನಲ್ಲಿ ಹಾಗೂ ಇ-ಮೇಲ್ ಮೂಲಕ 20,384 ಸಲಹೆಗಳನ್ನು ಸ್ವೀಕರಿಸಿದ ಬಳಿಕ ಸಿದ್ಧಪಡಿಸಿದ ಜನತಾ ಬಜೆಟ್ನಲ್ಲಿ ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಒತ್ತು ನೀಡಲಾಗಿದೆ ಎಂದು ಹಣಕಾಸು ಸಚಿವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>