ತುಂಗಾ ನದಿಯಿಂದ 17.40 ಟಿಎಂಸಿ ಅಡಿ ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡಿ ಭದ್ರಾ ಜಲಾಶಯಕ್ಕೆ ಹರಿಸಲಾಗುತ್ತದೆ. ಅಲ್ಲಿಂದ 29.90 ಟಿಎಂಸಿ ಅಡಿ ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡಿ ಅಜ್ಜಂಪುರ ಸುರಂಗದವರೆಗೆ ಕೊಂಡೊಯ್ಯಲಾಗುತ್ತದೆ. ಬಳಿಕ ಚಿತ್ರದುರ್ಗ ಶಾಖಾ ಕಾಲುವೆ ಮತ್ತು ತುಮಕೂರು ಶಾಖಾ ಕಾಲುವೆಗಳಿಗೆ ನೀರು ಹರಿಸಲಾಗುತ್ತದೆ. ಈ ಯೋಜನೆಗಾಗಿ ನಾಲ್ಕು ಸ್ಥಳಗಳಲ್ಲಿ ನೀರು ಲಿಫ್ಟ್ ಮಾಡಲಾಗುತ್ತದೆ. ಈ ಯೋಜನೆಗೆ ಒಟ್ಟಾರೆ 7,720 ಎಕರೆಯ ಭೂಸ್ವಾಧೀನ ಮಾಡಬೇಕಿದ್ದು, ಇಲ್ಲಿವರೆಗೆ 3,922 ಎಕರೆಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.