<p><strong>ಹುಬ್ಬಳ್ಳಿ: </strong>ಧಾರವಾಡ ಜಿಲ್ಲೆ, ಅದರಲ್ಲೂ ಅವಳಿ ನಗರದ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ನಲ್ಲಿ ದೊಡ್ಡ ಪ್ರಮಾಣದ ಅನುದಾನ ನಿರೀಕ್ಷೆಯಲ್ಲಿ ಜನರಿದ್ದಾರೆ. ಜತೆಗೆ ಕಳೆದ ಬಾರಿ ಘೋಷಣೆಯಾಗಿದ್ದ ಯೋಜನೆಗಳ ಜಾರಿಗೂ ಆಗ್ರಹಿಸುತ್ತಿದ್ದಾರೆ.</p>.<p>ಈ ಭಾಗದ ಮಹತ್ವದ ಯೋಜನೆಯಾದ ಕಳಸಾ ಬಂಡೂರಿ ಮಹದಾಯಿ ನೀರು ಬಳಕೆಗೆ ₹500 ಕೋಟಿ ಅನುದಾನ ತೆಗೆದಿರಿಸಲಾಗಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಹಂಚಿಕೆಯಾಗಿರುವ ನೀರಿನ ಬಳಕೆ ಕುರಿತು ಕೇಂದ್ರ ಸರ್ಕಾರ ಗೆಜೆಟ್ನಲ್ಲಿ ಪ್ರಕಟಿಸಿರುವುದು ಬಿಟ್ಟರೆ, ಅನುದಾನ ಮಾತ್ರ ಖರ್ಚಾಗಿಲ್ಲ.</p>.<p>ಮಹಾನಗರ ಪಾಲಿಕೆಯ ನಿವೃತ್ತ ನೌಕರರಿಗೆ ನೀಡಲು ₹102 ಕೋಟಿ ಪಿಂಚಣಿ ಪಾವತಿಸಬೇಕಿತ್ತು. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಬಿಜೆಪಿ ನಾಯಕರು, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಕೂಡಲೇ ಪಿಂಚಣಿ ಬಾಕಿ ಬಿಡುಗಡೆ ಮಾಡಲು ಕ್ರಮಕೈಗೊಳ್ಳುವುದಾಗಿ ಹೇಳುತ್ತಿದ್ದರು. ₹ 52 ಕೋಟಿ ಬಿಡುಗಡೆಯಾಗಿದ್ದು, ಇನ್ನು ₹49 ಕೋಟಿ ಬಾಕಿ ಉಳಿದಿದೆ.</p>.<p>ಬೆಳಗಾವಿ–ಧಾರವಾಡ ಕಿತ್ತೂರು ಮಾರ್ಗವಾಗಿ ರೈಲು ಮಾರ್ಗ ನಿರ್ಮಾಣಕ್ಕೆ ಹಸಿರು ನಿಶಾನೆ ದೊರೆತಿದೆ. ಕೇಂದ್ರ ಸರ್ಕಾರವು ₹50 ಕೋಟಿ ಅನುದಾನ ತೆಗೆದಿರಿಸಿದೆ. ರೈಲು ಮಾರ್ಗ ನಿರ್ಮಾಣಕ್ಕೆ 837 ಎಕರೆ ಭೂಮಿ ಬೇಕಾಗಿದ್ದು, ಅದನ್ನು ರಾಜ್ಯ ಸರ್ಕಾರ ಭೂಸ್ವಾಧೀನ ಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರಿಸಬೇಕು.</p>.<p>ಧಾರವಾಡ ಜಿಲ್ಲೆಯಲ್ಲಿ 225 ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 602 ಎಕರೆ ಭೂಮಿ ಬೇಕಾಗಿದೆ. ಆದರೆ, ಇಲ್ಲಿಯವರೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿಲ್ಲ. ಹಾಗಾಗಿ, ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ವಿಜ್ಞಾನೇಶ್ವರ ಅಧ್ಯಯನ ಪೀಠ ಆರಂಭಕ್ಕೆ ರಾಜ್ಯ ಸರ್ಕಾರ ₹1 ಕೋಟಿ ಬಿಡುಗಡೆ ಮಾಡಿತ್ತು. ಇನ್ನೂ ಪೀಠ ಕಾರ್ಯಾರಂಭ ಮಾಡಿಲ್ಲ.</p>.<p>ಜಿಲ್ಲೆಯ ಬಹುತೇಕ ರಸ್ತೆಗಳ ಅಭಿವೃದ್ಧಿಗೆ ₹1 ಸಾವಿರ ಕೋಟಿ ಅನುದಾನ ನೀಡಬೇಕು ಎಂದು ಜಿಲ್ಲೆಯ ಜನಪ್ರತಿನಿಧಿಗಳು ಮನವಿ ಮಾಡಿಕೊಂಡಿದ್ದರು. ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ತಿಳಿಸಿದ್ದರು. ಬಜೆಟ್ ಆ ಅನುದಾನದ ನಿರೀಕ್ಷೆಯಲ್ಲಿ ಜನರಿದ್ದಾರೆ.</p>.<p>ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಶಿಕ್ಷಣ ಪಡೆಯುವುದಕ್ಕಾಗಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳ ವಿದ್ಯಾರ್ಥಿಗಳು ಬರುತ್ತಾರೆ. ಅವರಿಗೆ ಸೂಕ್ತ ವಸತಿ ವ್ಯವಸ್ಥೆ ಇಲ್ಲದ್ದರಿಂದಾಗಿ ಶಿಕ್ಷಣದ ವೆಚ್ಚ ಹೆಚ್ಚಾಗುತ್ತಿದೆ. ಹೆಚ್ಚುವರಿಯಾಗಿ ವಸತಿ ನಿಲಯಗಳನ್ನು ಮಂಜೂರು ಮಾಡಬೇಕಿದೆ.</p>.<p>ಜಿಲ್ಲೆಯ ಅಳ್ನಾವರ ಹಾಗೂ ಅಣ್ಣಿಗೇರಿಯನ್ನು ಹೊಸ ತಾಲ್ಲೂಕುಗಳಾಗಿ ಘೋಷಣೆ ಮಾಡಿ ಎರಡು ವರ್ಷಗಳಾಗಿವೆ. ಆದರೆ, ಅಲ್ಲಿ ಯಾವುದೇ ಕಚೇರಿಗಳು ಕಾರ್ಯಾರಂಭ ಮಾಡಿಲ್ಲ. ಆ ಕಚೇರಿಗಳಿಗೆ ಜಾಗ ಒದಗಿಸುವ ಹಾಗೂ ಕಟ್ಟಡ ನಿರ್ಮಾಣಕ್ಕೆ ಅನುದಾನ ಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಧಾರವಾಡ ಜಿಲ್ಲೆ, ಅದರಲ್ಲೂ ಅವಳಿ ನಗರದ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ನಲ್ಲಿ ದೊಡ್ಡ ಪ್ರಮಾಣದ ಅನುದಾನ ನಿರೀಕ್ಷೆಯಲ್ಲಿ ಜನರಿದ್ದಾರೆ. ಜತೆಗೆ ಕಳೆದ ಬಾರಿ ಘೋಷಣೆಯಾಗಿದ್ದ ಯೋಜನೆಗಳ ಜಾರಿಗೂ ಆಗ್ರಹಿಸುತ್ತಿದ್ದಾರೆ.</p>.<p>ಈ ಭಾಗದ ಮಹತ್ವದ ಯೋಜನೆಯಾದ ಕಳಸಾ ಬಂಡೂರಿ ಮಹದಾಯಿ ನೀರು ಬಳಕೆಗೆ ₹500 ಕೋಟಿ ಅನುದಾನ ತೆಗೆದಿರಿಸಲಾಗಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಹಂಚಿಕೆಯಾಗಿರುವ ನೀರಿನ ಬಳಕೆ ಕುರಿತು ಕೇಂದ್ರ ಸರ್ಕಾರ ಗೆಜೆಟ್ನಲ್ಲಿ ಪ್ರಕಟಿಸಿರುವುದು ಬಿಟ್ಟರೆ, ಅನುದಾನ ಮಾತ್ರ ಖರ್ಚಾಗಿಲ್ಲ.</p>.<p>ಮಹಾನಗರ ಪಾಲಿಕೆಯ ನಿವೃತ್ತ ನೌಕರರಿಗೆ ನೀಡಲು ₹102 ಕೋಟಿ ಪಿಂಚಣಿ ಪಾವತಿಸಬೇಕಿತ್ತು. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಬಿಜೆಪಿ ನಾಯಕರು, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಕೂಡಲೇ ಪಿಂಚಣಿ ಬಾಕಿ ಬಿಡುಗಡೆ ಮಾಡಲು ಕ್ರಮಕೈಗೊಳ್ಳುವುದಾಗಿ ಹೇಳುತ್ತಿದ್ದರು. ₹ 52 ಕೋಟಿ ಬಿಡುಗಡೆಯಾಗಿದ್ದು, ಇನ್ನು ₹49 ಕೋಟಿ ಬಾಕಿ ಉಳಿದಿದೆ.</p>.<p>ಬೆಳಗಾವಿ–ಧಾರವಾಡ ಕಿತ್ತೂರು ಮಾರ್ಗವಾಗಿ ರೈಲು ಮಾರ್ಗ ನಿರ್ಮಾಣಕ್ಕೆ ಹಸಿರು ನಿಶಾನೆ ದೊರೆತಿದೆ. ಕೇಂದ್ರ ಸರ್ಕಾರವು ₹50 ಕೋಟಿ ಅನುದಾನ ತೆಗೆದಿರಿಸಿದೆ. ರೈಲು ಮಾರ್ಗ ನಿರ್ಮಾಣಕ್ಕೆ 837 ಎಕರೆ ಭೂಮಿ ಬೇಕಾಗಿದ್ದು, ಅದನ್ನು ರಾಜ್ಯ ಸರ್ಕಾರ ಭೂಸ್ವಾಧೀನ ಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರಿಸಬೇಕು.</p>.<p>ಧಾರವಾಡ ಜಿಲ್ಲೆಯಲ್ಲಿ 225 ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 602 ಎಕರೆ ಭೂಮಿ ಬೇಕಾಗಿದೆ. ಆದರೆ, ಇಲ್ಲಿಯವರೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿಲ್ಲ. ಹಾಗಾಗಿ, ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ವಿಜ್ಞಾನೇಶ್ವರ ಅಧ್ಯಯನ ಪೀಠ ಆರಂಭಕ್ಕೆ ರಾಜ್ಯ ಸರ್ಕಾರ ₹1 ಕೋಟಿ ಬಿಡುಗಡೆ ಮಾಡಿತ್ತು. ಇನ್ನೂ ಪೀಠ ಕಾರ್ಯಾರಂಭ ಮಾಡಿಲ್ಲ.</p>.<p>ಜಿಲ್ಲೆಯ ಬಹುತೇಕ ರಸ್ತೆಗಳ ಅಭಿವೃದ್ಧಿಗೆ ₹1 ಸಾವಿರ ಕೋಟಿ ಅನುದಾನ ನೀಡಬೇಕು ಎಂದು ಜಿಲ್ಲೆಯ ಜನಪ್ರತಿನಿಧಿಗಳು ಮನವಿ ಮಾಡಿಕೊಂಡಿದ್ದರು. ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ತಿಳಿಸಿದ್ದರು. ಬಜೆಟ್ ಆ ಅನುದಾನದ ನಿರೀಕ್ಷೆಯಲ್ಲಿ ಜನರಿದ್ದಾರೆ.</p>.<p>ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಶಿಕ್ಷಣ ಪಡೆಯುವುದಕ್ಕಾಗಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳ ವಿದ್ಯಾರ್ಥಿಗಳು ಬರುತ್ತಾರೆ. ಅವರಿಗೆ ಸೂಕ್ತ ವಸತಿ ವ್ಯವಸ್ಥೆ ಇಲ್ಲದ್ದರಿಂದಾಗಿ ಶಿಕ್ಷಣದ ವೆಚ್ಚ ಹೆಚ್ಚಾಗುತ್ತಿದೆ. ಹೆಚ್ಚುವರಿಯಾಗಿ ವಸತಿ ನಿಲಯಗಳನ್ನು ಮಂಜೂರು ಮಾಡಬೇಕಿದೆ.</p>.<p>ಜಿಲ್ಲೆಯ ಅಳ್ನಾವರ ಹಾಗೂ ಅಣ್ಣಿಗೇರಿಯನ್ನು ಹೊಸ ತಾಲ್ಲೂಕುಗಳಾಗಿ ಘೋಷಣೆ ಮಾಡಿ ಎರಡು ವರ್ಷಗಳಾಗಿವೆ. ಆದರೆ, ಅಲ್ಲಿ ಯಾವುದೇ ಕಚೇರಿಗಳು ಕಾರ್ಯಾರಂಭ ಮಾಡಿಲ್ಲ. ಆ ಕಚೇರಿಗಳಿಗೆ ಜಾಗ ಒದಗಿಸುವ ಹಾಗೂ ಕಟ್ಟಡ ನಿರ್ಮಾಣಕ್ಕೆ ಅನುದಾನ ಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>