<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿದ್ದು, ಇದು ‘ಸರ್ವರಿಗೂ ಸಮಪಾಲು’ ಅಲ್ಲ, ಕೇವಲ ‘ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು’ ಎಂದು ವಾಗ್ದಾಳಿ ನಡೆಸಿದ್ದಾರೆ. </p><p>ಬಜೆಟ್ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರೇ, ಇಂದು ನೀವು ಮಂಡಿಸಿರುವುದು ಜಬೆಟ್ ‘ಸರ್ವರಿಗೂ ಸಮಪಾಲು’ ಅಲ್ಲ, ಕೇವಲ ‘ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು’ ಆಗಿದೆ ಎಂದು ಟೀಕಿಸಿದ್ದಾರೆ. </p><p>‘ಅಲ್ಪಸಂಖ್ಯಾತರಿಗೆ ₹1,000 ಕೋಟಿ ವೆಚ್ಚದಲ್ಲಿ ಶಾಲಾ ಉನ್ನತೀಕರಣ. ಆದರೆ, ಹಿಂದೂಗಳ ದೇವಸ್ಥಾನದ ದುರಸ್ತಿಗೆ ಹಣವಿಲ್ಲವೇ?, ಅಲ್ಪಸಂಖ್ಯಾತ ನಿರುದ್ಯೋಗಿಗಳಿಗೆ ₹3 ಲಕ್ಷ ಸಹಾಯಧನ, ಆದರೆ, ಸಾಮಾನ್ಯ ವರ್ಗದ ನಿರುದ್ಯೋಗಿಗಳಿಗೆ ಬರಿ ಭರವಸೆಯ ಹುತ್ತವೇ’ ಎಂದು ಪ್ರಶ್ನಿಸಿದ್ದಾರೆ.</p><p>‘ಹುಬ್ಬಳ್ಳಿ-ಕಲಬುರಗಿಯಲ್ಲಿ ಹಜ್ ಭವನ ಕಟ್ಟುವ ನಿಮಗೆ, ಹಿಂದೂ ಧಾರ್ಮಿಕ ಕೇಂದ್ರಗಳ ಮೂಲಸೌಕರ್ಯ ನೆನಪಾಗುವುದೇ ಇಲ್ಲವೇ?, ಅಲ್ಪಸಂಖ್ಯಾತರಿಗೆ ಮೃಷ್ಟಾನ್ನ ಭೋಜನ, ಬಹುಸಂಖ್ಯಾತ ಹಿಂದೂಗಳಿಗೆ ಬಜೆಟ್ನಲ್ಲಿ ಶೂನ್ಯ ದರ್ಶನ’ ಎಂದು ಕುಟುಕಿದ್ದಾರೆ. </p><p>‘ಸಿದ್ದರಾಮಯ್ಯ ಅವರೇ, ನೀವು ಕೇವಲ ಒಂದು ಸಮುದಾಯದ ಮುಖ್ಯಮಂತ್ರಿಯೇ?, ಬೊಕ್ಕಸದ ಬಹುಪಾಲನ್ನು ಒಂದು ನಿರ್ದಿಷ್ಟ ಸಮುದಾಯಕ್ಕೆ ಬರೆದುಕೊಡುತ್ತಿರುವ ಸಾಲರಾಮಯ್ಯ ಅವರೇ, ನಿಮ್ಮ ಈ ಅತಿರೇಕದ ಓಲೈಕೆ ರಾಜಕಾರಣಕ್ಕೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಗುಡುಗಿದ್ದಾರೆ. </p>.Karnataka Budget 2026: ಬಜೆಟ್ ಮುಖ್ಯಾಂಶಗಳು .ರಾಜ್ಯದ ಭವಿಷ್ಯ ಅಡಮಾನ: ಸಿದ್ದರಾಮಯ್ಯ ಬಜೆಟ್ಗೆ ಆರ್.ಅಶೋಕ್ ಟೀಕೆ.Karnataka Budget: ಉದ್ಯೋಗಾಕಾಂಕ್ಷಿಗಳಿಗೆ ಬಂಪರ್; ಇಲ್ಲಿದೆ ಉದ್ಯೋಗಗಳ ವಿವರ.Karnataka Budget: ರಿಯಾಯತಿ ದರದಲ್ಲಿ 50 ಸಾವಿರ ನಿವೇಶನ ವಿತರಣೆ; ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿದ್ದು, ಇದು ‘ಸರ್ವರಿಗೂ ಸಮಪಾಲು’ ಅಲ್ಲ, ಕೇವಲ ‘ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು’ ಎಂದು ವಾಗ್ದಾಳಿ ನಡೆಸಿದ್ದಾರೆ. </p><p>ಬಜೆಟ್ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರೇ, ಇಂದು ನೀವು ಮಂಡಿಸಿರುವುದು ಜಬೆಟ್ ‘ಸರ್ವರಿಗೂ ಸಮಪಾಲು’ ಅಲ್ಲ, ಕೇವಲ ‘ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು’ ಆಗಿದೆ ಎಂದು ಟೀಕಿಸಿದ್ದಾರೆ. </p><p>‘ಅಲ್ಪಸಂಖ್ಯಾತರಿಗೆ ₹1,000 ಕೋಟಿ ವೆಚ್ಚದಲ್ಲಿ ಶಾಲಾ ಉನ್ನತೀಕರಣ. ಆದರೆ, ಹಿಂದೂಗಳ ದೇವಸ್ಥಾನದ ದುರಸ್ತಿಗೆ ಹಣವಿಲ್ಲವೇ?, ಅಲ್ಪಸಂಖ್ಯಾತ ನಿರುದ್ಯೋಗಿಗಳಿಗೆ ₹3 ಲಕ್ಷ ಸಹಾಯಧನ, ಆದರೆ, ಸಾಮಾನ್ಯ ವರ್ಗದ ನಿರುದ್ಯೋಗಿಗಳಿಗೆ ಬರಿ ಭರವಸೆಯ ಹುತ್ತವೇ’ ಎಂದು ಪ್ರಶ್ನಿಸಿದ್ದಾರೆ.</p><p>‘ಹುಬ್ಬಳ್ಳಿ-ಕಲಬುರಗಿಯಲ್ಲಿ ಹಜ್ ಭವನ ಕಟ್ಟುವ ನಿಮಗೆ, ಹಿಂದೂ ಧಾರ್ಮಿಕ ಕೇಂದ್ರಗಳ ಮೂಲಸೌಕರ್ಯ ನೆನಪಾಗುವುದೇ ಇಲ್ಲವೇ?, ಅಲ್ಪಸಂಖ್ಯಾತರಿಗೆ ಮೃಷ್ಟಾನ್ನ ಭೋಜನ, ಬಹುಸಂಖ್ಯಾತ ಹಿಂದೂಗಳಿಗೆ ಬಜೆಟ್ನಲ್ಲಿ ಶೂನ್ಯ ದರ್ಶನ’ ಎಂದು ಕುಟುಕಿದ್ದಾರೆ. </p><p>‘ಸಿದ್ದರಾಮಯ್ಯ ಅವರೇ, ನೀವು ಕೇವಲ ಒಂದು ಸಮುದಾಯದ ಮುಖ್ಯಮಂತ್ರಿಯೇ?, ಬೊಕ್ಕಸದ ಬಹುಪಾಲನ್ನು ಒಂದು ನಿರ್ದಿಷ್ಟ ಸಮುದಾಯಕ್ಕೆ ಬರೆದುಕೊಡುತ್ತಿರುವ ಸಾಲರಾಮಯ್ಯ ಅವರೇ, ನಿಮ್ಮ ಈ ಅತಿರೇಕದ ಓಲೈಕೆ ರಾಜಕಾರಣಕ್ಕೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಗುಡುಗಿದ್ದಾರೆ. </p>.Karnataka Budget 2026: ಬಜೆಟ್ ಮುಖ್ಯಾಂಶಗಳು .ರಾಜ್ಯದ ಭವಿಷ್ಯ ಅಡಮಾನ: ಸಿದ್ದರಾಮಯ್ಯ ಬಜೆಟ್ಗೆ ಆರ್.ಅಶೋಕ್ ಟೀಕೆ.Karnataka Budget: ಉದ್ಯೋಗಾಕಾಂಕ್ಷಿಗಳಿಗೆ ಬಂಪರ್; ಇಲ್ಲಿದೆ ಉದ್ಯೋಗಗಳ ವಿವರ.Karnataka Budget: ರಿಯಾಯತಿ ದರದಲ್ಲಿ 50 ಸಾವಿರ ನಿವೇಶನ ವಿತರಣೆ; ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>