<p><strong>ಬೆಂಗಳೂರು:</strong> ಈ ಬಾರಿಯ ಬಜೆಟ್ ವಿವಿಧ ಕ್ಷೇತ್ರದಲ್ಲಿ ಅನುದಾನ ಒದಗಿಸುವ ಮೂಲಕ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವ ಕಾರ್ಯಕ್ರಮ ಹೊಂದಿದೆ. ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಈ ಆರ್ಥಿಕ ವರ್ಷದ ಬಜೆಟ್ ಮಂಡಿಸುತ್ತಿದ್ದು, ಕೋವಿಡ್ ಸಮಸ್ಯೆಯಿಂದ ಕುಗ್ಗಿಹೋಗಿರುವ ದೇಶದ ಆರ್ಥಿಕತೆಗೆ ಉತ್ತಮ ಅನುದಾನ ಒದಗಿಸುವ ಯೋಚನೆ ಹೊಂದಿದ್ದಾರೆ. ಅಲ್ಲದೆ, ಈ ಬಜೆಟ್ನಲ್ಲಿ ಯಾವ ಕ್ಷೇತ್ರಗಳಿಗೆ ಪ್ರಮುಖ ಆದ್ಯತೆ ನೀಡಲಾಗುತ್ತಿದೆ ಎನ್ನುವುದನ್ನು ವಿವರಿಸಿದ್ದಾರೆ.</p>.<p>ಆರೋಗ್ಯ ಮತ್ತು ಸೌಖ್ಯತೆ, ಭೌತಿಕ ಮತ್ತು ಆರ್ಥಿಕ ಬಂಡವಾಳ, ಮೂಲಸೌಕರ್ಯ, ಸಮಗ್ರ ಅಭಿವೃದ್ಧಿ ಯೋಜನೆ, ಮಾನವ ಬಂಡವಾಳ ಹೂಡಿಕೆ, ಅನ್ವೇಷಣೆ ಮತ್ತು ಆರ್ ಆ್ಯಂಡ್ ಡಿ, ಕನಿಷ್ಠ ಸರ್ಕಾರ ಮತ್ತು ಗರಿಷ್ಠ ಆಡಳಿತ ಎನ್ನುವ ಅಂಶಗಳನ್ನು ಈ ಬಜೆಟ್ನಲ್ಲಿ ಪ್ರಮುಖವಾಗಿ ಆದ್ಯತೆ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.</p>.<p>ಹಣಕಾಸು ಹೂಡಿಕೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಕೋವಿಡ್ ಬಳಿಕ ಆರೋಗ್ಯ, ನೈರ್ಮಲ್ಯ ಹಾಗೂ ಮೂಲಸೌಕರ್ಯ ಯೋಜನೆಯನ್ನು ಆದ್ಯತೆಯಲ್ಲಿ ಪರಿಗಣಿಸಲಾಗುತ್ತಿದೆ.</p>.<p>ಇದನ್ನೂ ಓದಿ:<a href="https://www.prajavani.net/business/budget/budget-2021-will-also-be-a-digital-budget-finance-minister-nirmala-sithraman-801436.html" itemprop="url">ದೇಶದ ಮೊದಲ ಕಾಗದ ರಹಿತ ಡಿಜಿಟಲ್ ಬಜೆಟ್: ನಿರ್ಮಲಾ ಸೀತಾರಾಮನ್ </a></p>.<p>ಜತೆಗೆ ಪ್ರಧಾನ ಮಂತ್ರಿ ಆತ್ಮನಿರ್ಭರ ಸ್ವಾಸ್ಥ ಭಾರತ ಯೋಜನೆ ಘೋಷಿಸಲಾಗಿದ್ದು, ₹64,180 ಕೋಟಿ ಮೀಸಲಿರಿಸಲಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಗರಿಷ್ಠ ಉತ್ತೇಜನ ನೀಡಲು ಮುಂದಾಗಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/business/budget/pm-aatmanirbhar-swasth-bharat-yojana-include-union-budget-2021-health-care-nirmala-sitharaman-801441.html" itemprop="url">ಬಜೆಟ್ 2021: ಕೋವಿಡ್ ಲಸಿಕೆಗೆ ₹35,000 ಕೋಟಿ, ಆರೋಗ್ಯಕ್ಕಾಗಿ ₹64,180 ಕೋಟಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಈ ಬಾರಿಯ ಬಜೆಟ್ ವಿವಿಧ ಕ್ಷೇತ್ರದಲ್ಲಿ ಅನುದಾನ ಒದಗಿಸುವ ಮೂಲಕ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವ ಕಾರ್ಯಕ್ರಮ ಹೊಂದಿದೆ. ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಈ ಆರ್ಥಿಕ ವರ್ಷದ ಬಜೆಟ್ ಮಂಡಿಸುತ್ತಿದ್ದು, ಕೋವಿಡ್ ಸಮಸ್ಯೆಯಿಂದ ಕುಗ್ಗಿಹೋಗಿರುವ ದೇಶದ ಆರ್ಥಿಕತೆಗೆ ಉತ್ತಮ ಅನುದಾನ ಒದಗಿಸುವ ಯೋಚನೆ ಹೊಂದಿದ್ದಾರೆ. ಅಲ್ಲದೆ, ಈ ಬಜೆಟ್ನಲ್ಲಿ ಯಾವ ಕ್ಷೇತ್ರಗಳಿಗೆ ಪ್ರಮುಖ ಆದ್ಯತೆ ನೀಡಲಾಗುತ್ತಿದೆ ಎನ್ನುವುದನ್ನು ವಿವರಿಸಿದ್ದಾರೆ.</p>.<p>ಆರೋಗ್ಯ ಮತ್ತು ಸೌಖ್ಯತೆ, ಭೌತಿಕ ಮತ್ತು ಆರ್ಥಿಕ ಬಂಡವಾಳ, ಮೂಲಸೌಕರ್ಯ, ಸಮಗ್ರ ಅಭಿವೃದ್ಧಿ ಯೋಜನೆ, ಮಾನವ ಬಂಡವಾಳ ಹೂಡಿಕೆ, ಅನ್ವೇಷಣೆ ಮತ್ತು ಆರ್ ಆ್ಯಂಡ್ ಡಿ, ಕನಿಷ್ಠ ಸರ್ಕಾರ ಮತ್ತು ಗರಿಷ್ಠ ಆಡಳಿತ ಎನ್ನುವ ಅಂಶಗಳನ್ನು ಈ ಬಜೆಟ್ನಲ್ಲಿ ಪ್ರಮುಖವಾಗಿ ಆದ್ಯತೆ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.</p>.<p>ಹಣಕಾಸು ಹೂಡಿಕೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಕೋವಿಡ್ ಬಳಿಕ ಆರೋಗ್ಯ, ನೈರ್ಮಲ್ಯ ಹಾಗೂ ಮೂಲಸೌಕರ್ಯ ಯೋಜನೆಯನ್ನು ಆದ್ಯತೆಯಲ್ಲಿ ಪರಿಗಣಿಸಲಾಗುತ್ತಿದೆ.</p>.<p>ಇದನ್ನೂ ಓದಿ:<a href="https://www.prajavani.net/business/budget/budget-2021-will-also-be-a-digital-budget-finance-minister-nirmala-sithraman-801436.html" itemprop="url">ದೇಶದ ಮೊದಲ ಕಾಗದ ರಹಿತ ಡಿಜಿಟಲ್ ಬಜೆಟ್: ನಿರ್ಮಲಾ ಸೀತಾರಾಮನ್ </a></p>.<p>ಜತೆಗೆ ಪ್ರಧಾನ ಮಂತ್ರಿ ಆತ್ಮನಿರ್ಭರ ಸ್ವಾಸ್ಥ ಭಾರತ ಯೋಜನೆ ಘೋಷಿಸಲಾಗಿದ್ದು, ₹64,180 ಕೋಟಿ ಮೀಸಲಿರಿಸಲಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಗರಿಷ್ಠ ಉತ್ತೇಜನ ನೀಡಲು ಮುಂದಾಗಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/business/budget/pm-aatmanirbhar-swasth-bharat-yojana-include-union-budget-2021-health-care-nirmala-sitharaman-801441.html" itemprop="url">ಬಜೆಟ್ 2021: ಕೋವಿಡ್ ಲಸಿಕೆಗೆ ₹35,000 ಕೋಟಿ, ಆರೋಗ್ಯಕ್ಕಾಗಿ ₹64,180 ಕೋಟಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>