ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಪ್ರವಾಸಿ ಕ್ಷೇತ್ರಗಳಿಗೆ ಹೂಡಿಕೆದಾರರನ್ನು ಆಕರ್ಷಿಸಲು ಕ್ರಮ

Last Updated 5 ಮಾರ್ಚ್ 2020, 10:43 IST
ಅಕ್ಷರ ಗಾತ್ರ

ಬೆಂಗಳೂರು: ಪ್ರವಾಸೋದ್ಯಮ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹಲವಾರು ಘೋಷಣೆಗಳನ್ನು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪ್ರವಾಸಿ ಕ್ಷೇತ್ರಗಳಲ್ಲಿ ಹೆಚ್ಚಿನ ಹೂಡಿಕೆದಾರರನ್ನು ಆಕರ್ಷಿಸಲು “ಜಾಗತಿಕ ಪ್ರವಾಸೋದ್ಯಮ ಹೂಡಿಕೆದಾರರ ಸಮಾವೇಶ” (Global Tourism Investors Meet) ಮಾಡುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ಪ್ರವಾಸೋದ್ಯಮ ಕಾರ್ಯಪಡೆಯ ಶಿಫಾರಸುಗಳಂತೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರನ್ನು ಹೆಚ್ಚಾಗಿ ಸೆಳೆಯುವ ಜಾಹೀರಾತು ಮತ್ತು ಇತರ ಚಟುವಟಿಕೆಗಳಿಗೆ ₹100 ಕೋಟಿ ಹಾಗೂ ರಾಜ್ಯದ ಪ್ರವಾಸೋದ್ಯಮದ ಸರ್ವತೋಮುಖ ಅಭಿವೃದ್ಧಿಗೆ ₹ 500 ಕೋಟಿ ಅನುದಾನ ಒದಗಿಸುವುದಾಗಿ ಅವರು ತಿಳಿಸಿದರು.

ವೀರ ಮದಕರಿ ನಾಯಕ ಹಾಗೂ ಒನಕೆ ಓಬವ್ವರ ನೆನಪಿಸುವ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಐತಿಹಾಸಿಕ ಪ್ರವಾಸಿ ತಾಣವಾದ ಬಾದಾಮಿಯ ಸಮಗ್ರ ಅಭಿವೃದ್ಧಿಗೆ ₹ 25 ಕೋಟಿ ಅನುದಾನ ಒದಗಿಸಲಾಗುವುದು. ಇದರೊಂದಿಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ ಜಲಪಾತ ಮತ್ತು ಇತರ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಒದಗಿಸಿ, ಟೂರಿಸಂ ಸರ್ಕ್ಯೂಟ್ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದುಎಂದು ತಿಳಿಸಿದರು.

ರಾಜ್ಯದಲ್ಲಿರುವ ಶೋಲಾ ಅರಣ್ಯಗಳ ಸರ್ವೇಕ್ಷಣೆ, ಜೀವ ವೈವಿಧ್ಯ ಸಂರಕ್ಷಣೆಗೆ ಐದು ಕೋಟಿ, ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿರುವ ಮಿನಿ ಮೃಗಾಲಯವನ್ನು ಉನ್ನತೀಕರಿಸಲು ಐದು ಕೋಟಿ ಅನುದಾನ ಮೀಸಲಿಡಲಾಗುವುದು. ರಾಮನಗರ ಜಿಲ್ಲೆಯ ರಣಹದ್ದು ಧಾಮದಲ್ಲಿ ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.

* ಪ್ರವಾಸಿ ಸ್ನೇಹಿ ಯೋಜನೆಗಳನ್ನು ಒಳಗೊಂಡ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ಕ್ರಮ.

* ಮಂಗಗಳ ಪುನರ್ವಸತಿಗೆ ಐದು ವರ್ಷಗಳಿಗೆ ಒಟ್ಟಾರೆ ₹ 6.25 ಕೋಟಿ ಅನುದಾನ. 2020-21ನೇ ಸಾಲಿನಲ್ಲಿ ₹ 1.25 ಕೋಟಿ ನೆರವು.

* ಉತ್ತರ ಕನ್ನಡ ಜಿಲ್ಲೆಯಲ್ಲಿ ₹1ಕೋಟಿ ವೆಚ್ಚದಲ್ಲಿ ರಾಜ್ಯದ ಮೊದಲ ಕಡಲಧಾಮ (Marine Eco Park) ಸ್ಥಾಪನೆ.

ಇನ್ನಷ್ಟು:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT