<p><strong>ನವದೆಹಲಿ: </strong>ಕೇಂದ್ರ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರು ಸಬ್ ಅರ್ಬನ್ ಮತ್ತು ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ ರೈಲು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ್ದು, ಬೆಂಗಳೂರಿಗರ ಹರ್ಷಕ್ಕೆ ಕಾರಣವಾಗಿದೆ.</p>.<p>ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ ವಿಚಾರ ಪ್ರಸ್ತಾಪಿಸಿದ ನಿರ್ಮಲಾ ಸೀತಾರಾಮನ್ ಅವರು, ‘ಈ ಯೋಜನೆಗೆ ₹18600 ಕೋಟಿ ಮೀಸಲು ಇರಿಸುವ ಮೂಲಕ ಶೇ.60 ರಷ್ಟು ಅನುದಾನ ನೀಡಲಾಗುವುದು’ ಎಂದು ತಿಳಿಸಿದರು.</p>.<p>‘2023ರ ಒಳಗೆ ಬೆಂಗಳೂರು ಚೆನ್ನೈ ಎಕ್ಸ್ಪ್ರೆಸ್ ರೈಲು ಯೋಜನೆ ಮುಗಿಸಲು ಅಗತ್ಯ ಕ್ರಮಗೊಳ್ಳಲಾಗಿದೆ’ ಎಂದರು.</p>.<p><strong>ಬೃಹತ್ ಸೋಲಾರ್ ಯೋಜನೆಗೆ ರೂಪರೇಷೆ</strong></p>.<p>‘ರೈಲ್ವೇ ಟ್ರ್ಯಾಕ್ ಬದಿ ಇರುವ ಖಾಲಿ ಜಾಗದಲ್ಲಿ ಸೋಲಾರ್ ಫಲಕಗಳ ಅಳವಡಿಕೆಗೆ ಹೊಸ ಯೋಜನೆ ರೂಪಿಸಲಾಗುವುದು. ಆ ಮೂಲಕ ದೇಶದಾದ್ಯಂತ ರೈಲ್ವೆ ಹಳಿಗಳ ಪಕ್ಕ ಸೋಲಾರ್ ಪ್ಯಾನೆಲ್ ನಿರ್ಮಿಸಲಾಗುವುದು‘ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.</p>.<p><strong>ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿ ಬಜೆಟ್ನಲ್ಲಿ ಮಂಡಿಸಿದ ಪ್ರಮುಖ ಅಂಶಗಳು</strong></p>.<ul> <li>11,000 ಟ್ರ್ಯಾಕ್ ವಿದ್ಯುದ್ದೀಕರಣ ಮಾಡಲಾಗುವುದು</li> <li>ರೈಲ್ವೆ ನಿಲ್ದಾಣಗಳಲ್ಲಿ 550 ವೈ-ಫೈ ಸೌಲಭ್ಯ ಕಲ್ಪಿಸಲಾಗುವುದು</li> <li>ಮುಂಬೈ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆಗೆ ಹೆಚ್ಚು ಒತ್ತು ನೀಡಲಾಗುವುದು </li> <li>ಪ್ರವಾಸಿ ಸ್ಥಳಗಳನ್ನು ಸಂಪರ್ಕಿಸಲು ಹೆಚ್ಚಿನ ತೇಜಸ್ ರೈಲುಗಳ ನಿಯೋಜಿಸಲಾಗುವುದು</li> <li>ತೇಜಸ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಎಲ್ಲ ರಾಜ್ಯಗಳಿಗೆ ವಿಸ್ತರಿಸಲಾಗುವುದು</li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೇಂದ್ರ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರು ಸಬ್ ಅರ್ಬನ್ ಮತ್ತು ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ ರೈಲು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ್ದು, ಬೆಂಗಳೂರಿಗರ ಹರ್ಷಕ್ಕೆ ಕಾರಣವಾಗಿದೆ.</p>.<p>ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ ವಿಚಾರ ಪ್ರಸ್ತಾಪಿಸಿದ ನಿರ್ಮಲಾ ಸೀತಾರಾಮನ್ ಅವರು, ‘ಈ ಯೋಜನೆಗೆ ₹18600 ಕೋಟಿ ಮೀಸಲು ಇರಿಸುವ ಮೂಲಕ ಶೇ.60 ರಷ್ಟು ಅನುದಾನ ನೀಡಲಾಗುವುದು’ ಎಂದು ತಿಳಿಸಿದರು.</p>.<p>‘2023ರ ಒಳಗೆ ಬೆಂಗಳೂರು ಚೆನ್ನೈ ಎಕ್ಸ್ಪ್ರೆಸ್ ರೈಲು ಯೋಜನೆ ಮುಗಿಸಲು ಅಗತ್ಯ ಕ್ರಮಗೊಳ್ಳಲಾಗಿದೆ’ ಎಂದರು.</p>.<p><strong>ಬೃಹತ್ ಸೋಲಾರ್ ಯೋಜನೆಗೆ ರೂಪರೇಷೆ</strong></p>.<p>‘ರೈಲ್ವೇ ಟ್ರ್ಯಾಕ್ ಬದಿ ಇರುವ ಖಾಲಿ ಜಾಗದಲ್ಲಿ ಸೋಲಾರ್ ಫಲಕಗಳ ಅಳವಡಿಕೆಗೆ ಹೊಸ ಯೋಜನೆ ರೂಪಿಸಲಾಗುವುದು. ಆ ಮೂಲಕ ದೇಶದಾದ್ಯಂತ ರೈಲ್ವೆ ಹಳಿಗಳ ಪಕ್ಕ ಸೋಲಾರ್ ಪ್ಯಾನೆಲ್ ನಿರ್ಮಿಸಲಾಗುವುದು‘ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.</p>.<p><strong>ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿ ಬಜೆಟ್ನಲ್ಲಿ ಮಂಡಿಸಿದ ಪ್ರಮುಖ ಅಂಶಗಳು</strong></p>.<ul> <li>11,000 ಟ್ರ್ಯಾಕ್ ವಿದ್ಯುದ್ದೀಕರಣ ಮಾಡಲಾಗುವುದು</li> <li>ರೈಲ್ವೆ ನಿಲ್ದಾಣಗಳಲ್ಲಿ 550 ವೈ-ಫೈ ಸೌಲಭ್ಯ ಕಲ್ಪಿಸಲಾಗುವುದು</li> <li>ಮುಂಬೈ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆಗೆ ಹೆಚ್ಚು ಒತ್ತು ನೀಡಲಾಗುವುದು </li> <li>ಪ್ರವಾಸಿ ಸ್ಥಳಗಳನ್ನು ಸಂಪರ್ಕಿಸಲು ಹೆಚ್ಚಿನ ತೇಜಸ್ ರೈಲುಗಳ ನಿಯೋಜಿಸಲಾಗುವುದು</li> <li>ತೇಜಸ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಎಲ್ಲ ರಾಜ್ಯಗಳಿಗೆ ವಿಸ್ತರಿಸಲಾಗುವುದು</li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>