<p><strong>ನವದೆಹಲಿ:</strong> ಗ್ರಾಹಕರು ತಮಗೆ ಇಷ್ಟವಾದ ವಿದ್ಯುತ್ ವಿತರಣಾ ಕಂಪನಿಯನ್ನು (ಎಸ್ಕಾಂ) ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಯೋಜನೆಯನ್ನು ಆರಂಭಿಸುವುದಾಗಿ ಹಣಕಾಸು ಸಚಿವರು ಬಜೆಟ್ನಲ್ಲಿ ಘೋಷಿಸಿದ್ದಾರೆ.</p>.<p>ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಏಕಸ್ವಾಮ್ಯ ತಪ್ಪಿಸುವುದು ಹಾಗೂ ಗ್ರಾಹಕರಿಗೆ ನಿರಂತರ ವಿದ್ಯುತ್ ಪೂರೈಕೆ ನೀಡುವುದಕ್ಕೆ ಆದ್ಯತೆ ನೀಡಲಾಗುವುದು. ಇದರಿಂದ ಗ್ರಾಹಕರು ತಮಗೆ ಇಷ್ಟವಾದ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಲು ಅನುಕೂಲವಾಗುವುದು ಎಂದು ಅವರು ಪ್ರತಿಪಾದಿಸಿದರು.</p>.<p>ದೇಶದ ಅನೇಕ ರಾಜ್ಯಗಳಲ್ಲಿ ಎಸ್ಕಾಂಗಳು ಅಸ್ತಿತ್ವದಲ್ಲಿದ್ದು, ಅವುಗಳು ರಾಜ್ಯ ಸರ್ಕಾರಗಳ ಒಡೆತನದಲ್ಲಿವೆ. ಅನೇಕ ಕಂಪನಿಗಳು ಹಣಕಾಸು ಬಿಕ್ಕಟ್ಟು ಇಲ್ಲವೇ ನಷ್ಟದಲ್ಲಿವೆ. ಹೀಗಾಗಿ ಅವುಗಳಿಂದ ನಿರಂತರ ವಿದ್ಯುತ್ ಪೂರೈಕೆ ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.</p>.<p>ಮುಂದಿನ ಐದು ವರ್ಷಗಳಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ ತರಲು ಇದು ಸಹಕಾರಿಯಾಗಲಿದೆ. ಹೈಡ್ರೋಜನ್ (ಜಲ ವಿದ್ಯುತ್) ಇಂಧನ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಇದಕ್ಕಾಗಿ ₹3 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತವನ್ನು ಮೀಸಲಿಡಲಾಗಿದೆ ಎಂದು ಅವರು ಘೋಷಿಸಿದರು. ಇದಕ್ಕಾಗಿ ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಯೋಜನೆ ಪ್ರಕಟಿಸಿದರು.</p>.<p>ನವೀಕರಿಸಬಹುದಾದ ಇಂಧನಕ್ಕೆ ಆದ್ಯತೆ ನೀಡಲಾಗಿದೆ. ಸೌರ ವಿದ್ಯುತ್ ವಿತರಣೆಯಲ್ಲೂ ಸುಧಾರಣೆ ತರಲು ಆದ್ಯತೆ ನೀಡಲಾಗಿದ್ದು, ಇದಕ್ಕಾಗಿ ₹2,369 ಸಾವಿರ ಕೋಟಿ ಮೀಸಲಿಡಲಾಗಿದೆ. ಸೌರ ಶಕ್ತಿ ಉತ್ಪಾದನೆಯನ್ನು ಉತ್ತೇಜಿಸಲು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.</p>.<p><strong>ಪ್ಲಾಸ್ಟಿಕ್ ನಿಯಂತ್ರಣಕ್ಕೆ ಒತ್ತು:</strong> ಸ್ವಚ್ಛ ಭಾರತ್ ಯೋಜನೆಯಡಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಸೋಮವಾರ ಮಂಡಿಸಿದ ಕೇಂದ್ರದ ಬಜೆಟ್ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. 2022ಕ್ಕೆ ಭಾರತವು ಸ್ವತಂತ್ರಗೊಂಡು 75 ವರ್ಷಗಳು ಆಗುತ್ತಿರುವುದರಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.</p>.<p>ಕೊಳೆಗೇರಿಗಳಲ್ಲಿ ಮಾಲಿನ್ಯ ನಿಯಂತ್ರಿಸಲು, ತ್ಯಾಜ್ಯ ನೀರಿನ ಸಂಸ್ಕರಣೆ, ಹಸಿ ಮತ್ತು ಒಣ ಕಸದ ವಿಭಜನೆ, ಏಕ-ಬಳಕೆಯ ಪ್ಲಾಸ್ಟಿಕ್ ಕಡಿತ, ವಾಯುಮಾಲಿನ್ಯವನ್ನು ಕಡಿಮೆ ಮಾಡುವುದರ ಮೂಲಕ ನಿರ್ಮಾಣ ಮತ್ತು ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಉದ್ದೇಶಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗ್ರಾಹಕರು ತಮಗೆ ಇಷ್ಟವಾದ ವಿದ್ಯುತ್ ವಿತರಣಾ ಕಂಪನಿಯನ್ನು (ಎಸ್ಕಾಂ) ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಯೋಜನೆಯನ್ನು ಆರಂಭಿಸುವುದಾಗಿ ಹಣಕಾಸು ಸಚಿವರು ಬಜೆಟ್ನಲ್ಲಿ ಘೋಷಿಸಿದ್ದಾರೆ.</p>.<p>ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಏಕಸ್ವಾಮ್ಯ ತಪ್ಪಿಸುವುದು ಹಾಗೂ ಗ್ರಾಹಕರಿಗೆ ನಿರಂತರ ವಿದ್ಯುತ್ ಪೂರೈಕೆ ನೀಡುವುದಕ್ಕೆ ಆದ್ಯತೆ ನೀಡಲಾಗುವುದು. ಇದರಿಂದ ಗ್ರಾಹಕರು ತಮಗೆ ಇಷ್ಟವಾದ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಲು ಅನುಕೂಲವಾಗುವುದು ಎಂದು ಅವರು ಪ್ರತಿಪಾದಿಸಿದರು.</p>.<p>ದೇಶದ ಅನೇಕ ರಾಜ್ಯಗಳಲ್ಲಿ ಎಸ್ಕಾಂಗಳು ಅಸ್ತಿತ್ವದಲ್ಲಿದ್ದು, ಅವುಗಳು ರಾಜ್ಯ ಸರ್ಕಾರಗಳ ಒಡೆತನದಲ್ಲಿವೆ. ಅನೇಕ ಕಂಪನಿಗಳು ಹಣಕಾಸು ಬಿಕ್ಕಟ್ಟು ಇಲ್ಲವೇ ನಷ್ಟದಲ್ಲಿವೆ. ಹೀಗಾಗಿ ಅವುಗಳಿಂದ ನಿರಂತರ ವಿದ್ಯುತ್ ಪೂರೈಕೆ ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.</p>.<p>ಮುಂದಿನ ಐದು ವರ್ಷಗಳಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ ತರಲು ಇದು ಸಹಕಾರಿಯಾಗಲಿದೆ. ಹೈಡ್ರೋಜನ್ (ಜಲ ವಿದ್ಯುತ್) ಇಂಧನ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಇದಕ್ಕಾಗಿ ₹3 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತವನ್ನು ಮೀಸಲಿಡಲಾಗಿದೆ ಎಂದು ಅವರು ಘೋಷಿಸಿದರು. ಇದಕ್ಕಾಗಿ ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಯೋಜನೆ ಪ್ರಕಟಿಸಿದರು.</p>.<p>ನವೀಕರಿಸಬಹುದಾದ ಇಂಧನಕ್ಕೆ ಆದ್ಯತೆ ನೀಡಲಾಗಿದೆ. ಸೌರ ವಿದ್ಯುತ್ ವಿತರಣೆಯಲ್ಲೂ ಸುಧಾರಣೆ ತರಲು ಆದ್ಯತೆ ನೀಡಲಾಗಿದ್ದು, ಇದಕ್ಕಾಗಿ ₹2,369 ಸಾವಿರ ಕೋಟಿ ಮೀಸಲಿಡಲಾಗಿದೆ. ಸೌರ ಶಕ್ತಿ ಉತ್ಪಾದನೆಯನ್ನು ಉತ್ತೇಜಿಸಲು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.</p>.<p><strong>ಪ್ಲಾಸ್ಟಿಕ್ ನಿಯಂತ್ರಣಕ್ಕೆ ಒತ್ತು:</strong> ಸ್ವಚ್ಛ ಭಾರತ್ ಯೋಜನೆಯಡಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಸೋಮವಾರ ಮಂಡಿಸಿದ ಕೇಂದ್ರದ ಬಜೆಟ್ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. 2022ಕ್ಕೆ ಭಾರತವು ಸ್ವತಂತ್ರಗೊಂಡು 75 ವರ್ಷಗಳು ಆಗುತ್ತಿರುವುದರಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.</p>.<p>ಕೊಳೆಗೇರಿಗಳಲ್ಲಿ ಮಾಲಿನ್ಯ ನಿಯಂತ್ರಿಸಲು, ತ್ಯಾಜ್ಯ ನೀರಿನ ಸಂಸ್ಕರಣೆ, ಹಸಿ ಮತ್ತು ಒಣ ಕಸದ ವಿಭಜನೆ, ಏಕ-ಬಳಕೆಯ ಪ್ಲಾಸ್ಟಿಕ್ ಕಡಿತ, ವಾಯುಮಾಲಿನ್ಯವನ್ನು ಕಡಿಮೆ ಮಾಡುವುದರ ಮೂಲಕ ನಿರ್ಮಾಣ ಮತ್ತು ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಉದ್ದೇಶಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>